ಸಾಂದರ್ಭಿಕ ಚಿತ್ರ 
ದೇಶ

ಗುವಾಹಟಿ: ಅಪಘಾತದ ನಂತರ ಎಎಎಸ್ ಯು ನಾಯಕನನ್ನು ಹೊಡೆದು ಕೊಂದ ಜನ, 6 ಮಂದಿಯ ಬಂಧನ

ರಸ್ತೆ ಅಪಘಾತವೊಂದರ ನಂತರ 50ಕ್ಕೂ ಹೆಚ್ಚು ಜನರ ಗುಂಪೊಂದು ನಡೆಸಿದ ದಾಳಿಯಲ್ಲಿ ಆಲ್ ಅಸ್ಸಾಂ ವಿದ್ಯಾರ್ಥಿ ಒಕ್ಕೂಟದ(ಎಎಎಸ್‌ಯು) ಸ್ಥಳೀಯ ಮುಖಂಡರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಪತ್ರಕರ್ತರು ಸೇರಿದಂತೆ ಇಬ್ಬರು..

ಗುವಾಹಟಿ: ರಸ್ತೆ ಅಪಘಾತವೊಂದರ ನಂತರ 50ಕ್ಕೂ ಹೆಚ್ಚು ಜನರ ಗುಂಪೊಂದು ನಡೆಸಿದ ದಾಳಿಯಲ್ಲಿ ಆಲ್ ಅಸ್ಸಾಂ ವಿದ್ಯಾರ್ಥಿ ಒಕ್ಕೂಟದ(ಎಎಎಸ್‌ಯು) ಸ್ಥಳೀಯ ಮುಖಂಡರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಪತ್ರಕರ್ತರು ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.

ಅಪಘಾತವೊಂದರಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದು, ನಂತರ ನಡೆದ ದಾಳಿಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ನೆರೆಯ ಗೋಲಾಘಾಟ್ ಜಿಲ್ಲೆಯ ದೆರ್ಗಾಂವ್‌ನ ಎಎಎಸ್‌ಯು ನಾಯಕ ಅನಿಮೇಶ್ ಭುಯಾನ್(23) ಅವರು, ಸ್ಥಳೀಯ ಟಿವಿ ಚಾನೆಲ್‌ನಲ್ಲಿ ಕೆಲಸ ಮಾಡುವ ಮೃದುಸ್ಮಂತ ಬರುವಾ ಮತ್ತು ಇನ್ನೊಬ್ಬ ವ್ಯಕ್ತಿಯೊಂದಿಗೆ ಜೋರ್ಹತ್‌ಗೆ ಭೇಟಿ ನೀಡಿದ್ದರು. ಈ ವೇಳೆ ಈ ಮೂವರು ಅಪಘಾತವೊಂದರಲ್ಲಿ ಭಾಗಿಯಾಗಿದ್ದಾರೆ ಎಂಬ ಅನುಮಾನದ ಮೇಲೆ ಅವರ ಜನರ ಗುಂಪು ದಾಳಿ ನಡೆಸಿದೆ.

ದಾಳಿಯಲ್ಲಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅನಿಮೇಶ್ ಭುಯಾ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಘಟನೆಯ ಕುರಿತು ತನಿಖೆ ನಡೆಸುತ್ತಿದ್ದು, ಈಗಾಗಲೇ ಆರು ಮಂದಿಯನ್ನು ಬಂಧಿಸಲಾಗಿದೆ ಮತ್ತು ಘಟನೆಯಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿ ಮಾಡಿದವರನ್ನು ತಕ್ಷಣ ಬಂಧಿಸಬೇಕು ಎಂದು ಎಎಎಸ್ ಯು ಪೊಲೀಸರಿಗೆ 24 ಗಂಟೆಗಳ ಗಡುವು ನೀಡಿದ್ದು, ವಿಫಲವಾದಲ್ಲಿ ಜೋರ್ಹತ್ ಅನ್ನು ಬಂದ್ ಮಾಡುವುದಾಗಿ ಬೆದರಿಕೆ ಹಾಕಿದೆ. ಅಲ್ಲದೆ ರಸ್ತೆ ಅಪಘಾತದ ಘಟನೆಯಲ್ಲಿ ಈ ಮೂವರು ಭಾಗಿಯಾಗಿಲ್ಲ ಎಂದು ವಿದ್ಯಾರ್ಥಿ ಸಂಘಟನೆ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT