ಸಾಂದರ್ಭಿಕ ಚಿತ್ರ 
ದೇಶ

ಗುವಾಹಟಿ: ಅಪಘಾತದ ನಂತರ ಎಎಎಸ್ ಯು ನಾಯಕನನ್ನು ಹೊಡೆದು ಕೊಂದ ಜನ, 6 ಮಂದಿಯ ಬಂಧನ

ರಸ್ತೆ ಅಪಘಾತವೊಂದರ ನಂತರ 50ಕ್ಕೂ ಹೆಚ್ಚು ಜನರ ಗುಂಪೊಂದು ನಡೆಸಿದ ದಾಳಿಯಲ್ಲಿ ಆಲ್ ಅಸ್ಸಾಂ ವಿದ್ಯಾರ್ಥಿ ಒಕ್ಕೂಟದ(ಎಎಎಸ್‌ಯು) ಸ್ಥಳೀಯ ಮುಖಂಡರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಪತ್ರಕರ್ತರು ಸೇರಿದಂತೆ ಇಬ್ಬರು..

ಗುವಾಹಟಿ: ರಸ್ತೆ ಅಪಘಾತವೊಂದರ ನಂತರ 50ಕ್ಕೂ ಹೆಚ್ಚು ಜನರ ಗುಂಪೊಂದು ನಡೆಸಿದ ದಾಳಿಯಲ್ಲಿ ಆಲ್ ಅಸ್ಸಾಂ ವಿದ್ಯಾರ್ಥಿ ಒಕ್ಕೂಟದ(ಎಎಎಸ್‌ಯು) ಸ್ಥಳೀಯ ಮುಖಂಡರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಪತ್ರಕರ್ತರು ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.

ಅಪಘಾತವೊಂದರಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದು, ನಂತರ ನಡೆದ ದಾಳಿಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ನೆರೆಯ ಗೋಲಾಘಾಟ್ ಜಿಲ್ಲೆಯ ದೆರ್ಗಾಂವ್‌ನ ಎಎಎಸ್‌ಯು ನಾಯಕ ಅನಿಮೇಶ್ ಭುಯಾನ್(23) ಅವರು, ಸ್ಥಳೀಯ ಟಿವಿ ಚಾನೆಲ್‌ನಲ್ಲಿ ಕೆಲಸ ಮಾಡುವ ಮೃದುಸ್ಮಂತ ಬರುವಾ ಮತ್ತು ಇನ್ನೊಬ್ಬ ವ್ಯಕ್ತಿಯೊಂದಿಗೆ ಜೋರ್ಹತ್‌ಗೆ ಭೇಟಿ ನೀಡಿದ್ದರು. ಈ ವೇಳೆ ಈ ಮೂವರು ಅಪಘಾತವೊಂದರಲ್ಲಿ ಭಾಗಿಯಾಗಿದ್ದಾರೆ ಎಂಬ ಅನುಮಾನದ ಮೇಲೆ ಅವರ ಜನರ ಗುಂಪು ದಾಳಿ ನಡೆಸಿದೆ.

ದಾಳಿಯಲ್ಲಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅನಿಮೇಶ್ ಭುಯಾ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಘಟನೆಯ ಕುರಿತು ತನಿಖೆ ನಡೆಸುತ್ತಿದ್ದು, ಈಗಾಗಲೇ ಆರು ಮಂದಿಯನ್ನು ಬಂಧಿಸಲಾಗಿದೆ ಮತ್ತು ಘಟನೆಯಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿ ಮಾಡಿದವರನ್ನು ತಕ್ಷಣ ಬಂಧಿಸಬೇಕು ಎಂದು ಎಎಎಸ್ ಯು ಪೊಲೀಸರಿಗೆ 24 ಗಂಟೆಗಳ ಗಡುವು ನೀಡಿದ್ದು, ವಿಫಲವಾದಲ್ಲಿ ಜೋರ್ಹತ್ ಅನ್ನು ಬಂದ್ ಮಾಡುವುದಾಗಿ ಬೆದರಿಕೆ ಹಾಕಿದೆ. ಅಲ್ಲದೆ ರಸ್ತೆ ಅಪಘಾತದ ಘಟನೆಯಲ್ಲಿ ಈ ಮೂವರು ಭಾಗಿಯಾಗಿಲ್ಲ ಎಂದು ವಿದ್ಯಾರ್ಥಿ ಸಂಘಟನೆ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಚೀನಾ ಇದ್ದರೂ ಬ್ರಿಕ್ಸ್‌ ಸದಸ್ಯತ್ವಕ್ಕಾಗಿ 3 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರೂ ಅವಕಾಶ ಸಿಕ್ಕಿಲ್ಲ: ಪಾಕ್ ಗೋಳಾಟ!

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಪಾದಯಾತ್ರೆ ಘೋಷಿಸಿದ ಬಿಜೆಪಿ; ಸೆ. 15 ರಿಂದ ರಾಜ್ಯಾದ್ಯಂತ ಹೋರಾಟ

ಬ್ರಿಕ್ಸ್‌ನಲ್ಲಿ ಪಹಲ್ಗಾಮ್ ದಾಳಿ ಬಗ್ಗೆ ಮಾತ್ರ ಖಂಡನೆ: ಗಾಜಾ ಬಗ್ಗೆ ಮೌನ ಏಕೆ?; ಗೋಳಾಡಿದ ಮೊಹಬೂಬಾ ಮುಫ್ತಿ!