ಸಂಗ್ರಹ ಚಿತ್ರ 
ದೇಶ

ಬಿಟ್ ಕಾಯಿನ್ ಕಾನೂನುಬದ್ಧಗೊಳಿಸುವ ಯಾವುದೇ ಚಿಂತನೆಗಳೂ ಇಲ್ಲ: ಸಂಸತ್​ನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ

ಬಿಟ್ ಕಾಯಿನ್ ಕುರಿತು ಯಾವ ಮಾಹಿತಿಯನ್ನೂ ಸಂಗ್ರಹಿಸುವುದಿಲ್ಲ, ಬಿಟ್ ಕಾಯಿನ್'ನ್ನು ಕಾನೂನುಬದ್ಧಗೊಳಿಸುವ ಯಾವುದೇ ಪ್ರಸ್ತಾಪವೂ ಇಲ್ಲ ಎಂದು ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸೋಮವಾರ ಸ್ಪಷ್ಟಪಡಿಸಿದೆ.

ನವದೆಹಲಿ: ಬಿಟ್ ಕಾಯಿನ್ ಕುರಿತು ಯಾವ ಮಾಹಿತಿಯನ್ನೂ ಸಂಗ್ರಹಿಸುವುದಿಲ್ಲ, ಬಿಟ್ ಕಾಯಿನ್'ನ್ನು ಕಾನೂನುಬದ್ಧಗೊಳಿಸುವ ಯಾವುದೇ ಪ್ರಸ್ತಾಪವೂ ಇಲ್ಲ ಎಂದು ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸೋಮವಾರ ಸ್ಪಷ್ಟಪಡಿಸಿದೆ.

ಸಂಸತ್ತಿನಲ್ಲಿ ರಾಜ್ಯ ಸಂಸದರಾದ ಸುಮಲತಾ ಅಂಬರೀಷ್ ಹಾಗೂ ಡಿ.ಕೆ. ಸುರೇಶ್ ಇಬ್ಬರು ಕ್ರಿಪ್ಟೋ ಕರೆನ್ಸಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ವಿತ್ತ ಸಚಿವಾಲಯ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಭಾರತದಲ್ಲಿ ಬಿಟ್‌ಕಾಯಿನ್ ಅನ್ನು ಕಾನೂನುಬದ್ಧ ನೋಟು ಆಗಿ ಸ್ವೀಕರಿಸುವ ಯಾವುದೇ ಯೋಜನೆಯನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಬಳಿಕ ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಬಿಟ್‌ಕಾಯಿನ್ ವಹಿವಾಟು ಸೈಲೆಂಟಾಗಿ ಹೆಚ್ಚಾಗುತ್ತಿದೆ ಎಂದು ಸರ್ಕಾರಕ್ಕೆ ತಿಳಿದಿದೆಯೇ ಎಂಬುದಕ್ಕೆ ಉತ್ತರಿಸಿದ ಅವರು, ಭಾರತದಲ್ಲಿ ಬಿಟ್‌ಕಾಯಿನ್ ವಹಿವಾಟಿನ ಬಗ್ಗೆ ಕೇಂದ್ರವು ಯಾವುದೇ ಡೇಟಾವನ್ನು ಸಂಗ್ರಹಿಸುವುದಿಲ್ಲ ಎಂದು ತಿಳಿಸಿದರು.

ಇದೇ ವೇಳೆ ರಿಸರ್ವ್ ಬ್ಯಾಂಕ್​ನಿಂದ 2021ರ ಅಕ್ಟೋಬರ್​ನಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆ, 1934 ಅನ್ನು ತಿದ್ದುಪಡಿ ಮಾಡಲು ಪ್ರಸ್ತಾವ ಬಂದಿದೆ. ಬ್ಯಾಂಕ್ ನೋಟು ವ್ಯಾಖ್ಯಾನ ಬದಲಾಯಿಸಿ, ಡಿಜಿಟಲ್ ರೂಪದ ಕರೆನ್ಸಿ ಅನ್ನು ಸೇರ್ಪಡೆ ಮಾಡಲು ಪ್ರಸ್ತಾಪ ಬಂದಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರವು ಕ್ರಿಪ್ಟೋಕರೆನ್ಸಿ ಟ್ರೇಡಿಂಗ್ ಬಗ್ಗೆ ಯಾವುದೇ ಮಾಹಿತಿ ಸಂಗ್ರಹಿಸುವುದಿಲ್ಲ. ಕ್ರಿಪ್ಟೋಕರೆನ್ಸಿ ಮೇಲೆ ಭಾರತದಲ್ಲಿ ಸದ್ಯ ಯಾವುದೇ ನಿಯಂತ್ರಣ ಇಲ್ಲ ಎಂದು ಸಚಿವಾಲಯ ಸಂಸತ್ತಿಗೆ ಲಿಖಿತ ಉತ್ತರ ನೀಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ