ಸಂಗ್ರಹ ಚಿತ್ರ 
ದೇಶ

ಬಿಟ್ ಕಾಯಿನ್ ಕಾನೂನುಬದ್ಧಗೊಳಿಸುವ ಯಾವುದೇ ಚಿಂತನೆಗಳೂ ಇಲ್ಲ: ಸಂಸತ್​ನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ

ಬಿಟ್ ಕಾಯಿನ್ ಕುರಿತು ಯಾವ ಮಾಹಿತಿಯನ್ನೂ ಸಂಗ್ರಹಿಸುವುದಿಲ್ಲ, ಬಿಟ್ ಕಾಯಿನ್'ನ್ನು ಕಾನೂನುಬದ್ಧಗೊಳಿಸುವ ಯಾವುದೇ ಪ್ರಸ್ತಾಪವೂ ಇಲ್ಲ ಎಂದು ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸೋಮವಾರ ಸ್ಪಷ್ಟಪಡಿಸಿದೆ.

ನವದೆಹಲಿ: ಬಿಟ್ ಕಾಯಿನ್ ಕುರಿತು ಯಾವ ಮಾಹಿತಿಯನ್ನೂ ಸಂಗ್ರಹಿಸುವುದಿಲ್ಲ, ಬಿಟ್ ಕಾಯಿನ್'ನ್ನು ಕಾನೂನುಬದ್ಧಗೊಳಿಸುವ ಯಾವುದೇ ಪ್ರಸ್ತಾಪವೂ ಇಲ್ಲ ಎಂದು ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸೋಮವಾರ ಸ್ಪಷ್ಟಪಡಿಸಿದೆ.

ಸಂಸತ್ತಿನಲ್ಲಿ ರಾಜ್ಯ ಸಂಸದರಾದ ಸುಮಲತಾ ಅಂಬರೀಷ್ ಹಾಗೂ ಡಿ.ಕೆ. ಸುರೇಶ್ ಇಬ್ಬರು ಕ್ರಿಪ್ಟೋ ಕರೆನ್ಸಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ವಿತ್ತ ಸಚಿವಾಲಯ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಭಾರತದಲ್ಲಿ ಬಿಟ್‌ಕಾಯಿನ್ ಅನ್ನು ಕಾನೂನುಬದ್ಧ ನೋಟು ಆಗಿ ಸ್ವೀಕರಿಸುವ ಯಾವುದೇ ಯೋಜನೆಯನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಬಳಿಕ ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಬಿಟ್‌ಕಾಯಿನ್ ವಹಿವಾಟು ಸೈಲೆಂಟಾಗಿ ಹೆಚ್ಚಾಗುತ್ತಿದೆ ಎಂದು ಸರ್ಕಾರಕ್ಕೆ ತಿಳಿದಿದೆಯೇ ಎಂಬುದಕ್ಕೆ ಉತ್ತರಿಸಿದ ಅವರು, ಭಾರತದಲ್ಲಿ ಬಿಟ್‌ಕಾಯಿನ್ ವಹಿವಾಟಿನ ಬಗ್ಗೆ ಕೇಂದ್ರವು ಯಾವುದೇ ಡೇಟಾವನ್ನು ಸಂಗ್ರಹಿಸುವುದಿಲ್ಲ ಎಂದು ತಿಳಿಸಿದರು.

ಇದೇ ವೇಳೆ ರಿಸರ್ವ್ ಬ್ಯಾಂಕ್​ನಿಂದ 2021ರ ಅಕ್ಟೋಬರ್​ನಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆ, 1934 ಅನ್ನು ತಿದ್ದುಪಡಿ ಮಾಡಲು ಪ್ರಸ್ತಾವ ಬಂದಿದೆ. ಬ್ಯಾಂಕ್ ನೋಟು ವ್ಯಾಖ್ಯಾನ ಬದಲಾಯಿಸಿ, ಡಿಜಿಟಲ್ ರೂಪದ ಕರೆನ್ಸಿ ಅನ್ನು ಸೇರ್ಪಡೆ ಮಾಡಲು ಪ್ರಸ್ತಾಪ ಬಂದಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರವು ಕ್ರಿಪ್ಟೋಕರೆನ್ಸಿ ಟ್ರೇಡಿಂಗ್ ಬಗ್ಗೆ ಯಾವುದೇ ಮಾಹಿತಿ ಸಂಗ್ರಹಿಸುವುದಿಲ್ಲ. ಕ್ರಿಪ್ಟೋಕರೆನ್ಸಿ ಮೇಲೆ ಭಾರತದಲ್ಲಿ ಸದ್ಯ ಯಾವುದೇ ನಿಯಂತ್ರಣ ಇಲ್ಲ ಎಂದು ಸಚಿವಾಲಯ ಸಂಸತ್ತಿಗೆ ಲಿಖಿತ ಉತ್ತರ ನೀಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT