ದಿನಪತ್ರಿಕೆಯಲ್ಲಿ ಪ್ರಕಟಗೊಂಡಿರುವ ಜಾಹೀರಾತು. 
ದೇಶ

'ಪೂನಿಯಾ ವಜಾಗೊಳಿಸಿ, ಬಿಜೆಪಿ ಉಳಿಸಿ': ಅಜ್ಮೀರ್ ಪತ್ರಿಕೆಯಲ್ಲಿ ರಾಜಸ್ಥಾನ ಬಿಜೆಪಿ ಮುಖ್ಯಸ್ಥರ ವಿರುದ್ಧ ಜಾಹೀರಾತು ಪ್ರಕಟ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜಸ್ಥಾನ ಭೇಟಿಗೂ ಮುನ್ನ, ಮಾಜಿ ಸಿಎಂ ವಸುಂಧರಾ ರಾಜೆ ಅವರ ಇತ್ತೀಚಿನ ಅಜ್ಮೀರ್ ಪ್ರವಾಸದ ಸಂದರ್ಭದಲ್ಲಿ ನೀಡಿದ ಜಾಹೀರಾತೊಂದು ರಾಜ್ಯ ಬಿಜೆಪಿಯಲ್ಲಿ ಇದೀಗ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಜೈಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜಸ್ಥಾನ ಭೇಟಿಗೂ ಮುನ್ನ, ಮಾಜಿ ಸಿಎಂ ವಸುಂಧರಾ ರಾಜೆ ಅವರ ಇತ್ತೀಚಿನ ಅಜ್ಮೀರ್ ಪ್ರವಾಸದ ಸಂದರ್ಭದಲ್ಲಿ ನೀಡಿದ ಜಾಹೀರಾತೊಂದು ರಾಜ್ಯ ಬಿಜೆಪಿಯಲ್ಲಿ ಇದೀಗ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ವಸುಂದರಾ ರಾಜೇ ಅವರನ್ನು ಬೆಂಬಲಿಸುವ ಈ ಜಾಹೀರಾತಿನಲ್ಲಿ, ಅಂಬರ್'ನ ಬಿಜೆಪಿ ಶಾಸಕ ಸತೀಶ್ ಪೂನಿಯಾ ವಿರುದ್ಧ ‘ಪೂನಿಯಾ ಭಗಾವ್-ಬಿಜೆಪಿ ಬಚಾವೋ’ (‘ಪೂನಿಯಾ ವಜಾ ಮಾಡಿ, ಬಿಜೆಪಿಯನ್ನು ಉಳಿಸಿ’) ಎಂದು ಹೇಳಲಾಗಿದ್ದು, ‘ಜೈ ಜೈ ರಾಜಸ್ಥಾನ್’ ಎಂಬ ಘೋಷಣೆ ಮುದ್ರಿಸಿರುವುದು ಕಂಡು ಬಂದಿದೆ.

ಅಷ್ಟೇ ಅಲ್ಲದೆ, ವಸುಂಧರಾ ರಾಜೇ ಅವರನ್ನು ರಾಜಸ್ಥಾನ ಬಿಜೆಪಿಯ ಮುಖ್ಯಸ್ಥೆ ಎಂದು ಘೋಷಿಸುವಂತೆ ಮತ್ತು ರಾಜ್ಯದಲ್ಲಿ ಅವರಿಗೆ ಮುಕ್ತ ಹಸ್ತವನ್ನು ನೀಡುವಂತೆ ಜಾಹೀರಾತಿನಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾಗೆ ಆಗ್ರಹಿಸಿರುವುದೂ ಕಂಡು ಬಂದಿದೆ.

ಅಜ್ಮೀರ್ ಕೋ-ಆಪರೇಟಿವ್ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಗಣೇಶ್ ಚೌಧರಿ ಎಂಬುವವರ ಹೆಸರಿನಲ್ಲಿ ಪತ್ರಿಕೆಯಲ್ಲಿ ಜಾಹೀರಾತು ಪ್ರಕಟಗೊಂಡಿದ್ದು, ಈ ಜಾಹೀರಾತು ರಾಜಸ್ಥಾನ ಬಿಜೆಪಿಯಲ್ಲಿ ಭುಗಿಲೆದ್ದಿರುವ ಅಸಮಾಧಾನವನ್ನು ಬಹಿರಂಗಪಡಿಸಿದೆ ಎಂದು ಹೇಳಳಾಗುತ್ತಿದೆ.

ಈ ನಡುವೆ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ವಸುಂದರಾ ರಾಜೇ ಅವರು, ಜಾಹೀರಾತು ಪ್ರಕಟಿಸಿದ ವ್ಯಕ್ತಿಗೂ ತಮಗೂ ಯಾವುದೇ ಸಂಪರ್ಕವಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT