ಆರು ಮಹಿಳಾ ಸಂಸದರೊಂದಿಗೆ ಶಶಿ ತರೂರ್ ಸೆಲ್ಫಿ 
ದೇಶ

ಆರು ಮಹಿಳಾ ಸಂಸದರೊಂದಿಗೆ ಶಶಿ ತರೂರ್ ಸೆಲ್ಫಿ; ಟ್ವೀಟ್ ಗೆ ಟೀಕೆ

ಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್  ಸೋಮವಾರ ಮಾಡಿರುವ ಟ್ವೀಟ್ ವೊಂದು ವಿವಾದಕ್ಕೆ ಕಾರಣವಾಗಿದೆ. ''ಕೆಲಸ ಮಾಡಲು ಲೋಕಸಭೆ ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ''? ಎಂಬ ಶೀರ್ಷಿಕೆಯಲ್ಲಿ ಆರು ಮಹಿಳಾ ಸಂಸದರ ಜೊತೆಗಿನ ಸೆಲ್ಫಿ ಫೋಸ್ಟ್ ಇದಾಗಿದ್ದು, ಅನೇಕ ನೆಟ್ಟಿಗರು ಸೆಕ್ಸಿಸಂ ಎಂದು ಆರೋಪಿಸಿದ್ದಾರೆ.

ನವದೆಹಲಿ: ಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್  ಸೋಮವಾರ ಮಾಡಿರುವ ಟ್ವೀಟ್ ವೊಂದು ವಿವಾದಕ್ಕೆ ಕಾರಣವಾಗಿದೆ. ''ಕೆಲಸ ಮಾಡಲು ಲೋಕಸಭೆ ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ''? ಎಂಬ ಶೀರ್ಷಿಕೆಯಲ್ಲಿ ಆರು ಮಹಿಳಾ ಸಂಸದರ ಜೊತೆಗಿನ ಸೆಲ್ಫಿ ಫೋಸ್ಟ್ ಇದಾಗಿದ್ದು, ಅನೇಕ ನೆಟ್ಟಿಗರು ಸೆಕ್ಸಿಸಂ ಎಂದು ಆರೋಪಿಸಿದ್ದಾರೆ.

ನಂತರ, ಕೆಲವು ಜನರ ಮನನೊಂದಿರುವುದಕ್ಕಾಗಿ ತರೂರ್ ಕ್ಷಮೆಯಾಚಿಸಿದ್ದಾರೆ ಮತ್ತು ಒಳ್ಳೆಯ ಹಾಸ್ಯದ ರೀತಿಯಲ್ಲಿ ಮಹಿಳಾ ಸಂಸದರೊಂದಿಗೆ ಸೆಲ್ಫಿ ಮಾಡಲಾಗಿದೆ. ಇದನ್ನು ಟ್ವೀಟ್ ಮಾಡುವಂತೆ ಅವರೇ ಕೇಳಿದ್ದಾಗಿ ಶಶಿ ತರೂರ್ ಹೇಳಿದ್ದಾರೆ. 

ಮಹಿಳಾ ಸಂಸದರಾದ ಸುಪ್ರಿಯಾ ಸುಳೆ, ಪ್ರೀನೀತ್ ಕೌರ್, ತಮಿಳಚಿ ತಂಗಪಾಂಡಿಯನ್, ಮಿಮಿ ಚಕ್ರವರ್ತಿ, ನುಸ್ರತ್ ಜಹಾನ್ ರೂಹಿ ಮತ್ತು ಜ್ಯೋತಿಮಣಿ ಅವರೊಂದಿಗಿನ ಸೆಲ್ಫಿ ಫೋಟೋವೊಂದನ್ನು ಇಂದು ಬೆಳಗ್ಗೆ ಶಶಿ ತರೂರ್ ಟ್ವೀಟ್ ಮಾಡಿದ್ದರು. ಇದು ವಿವಾದಕ್ಕೆ ಕಾರಣವಾಗಿ ಅನೇಕ ಮಂದಿ ಆಕ್ಷೇಪ ವ್ಯಕ್ತಪಡಿಸಿದ್ದರು. 

ನೀವು ಅವರನ್ನು ಆಕರ್ಷಣೆಯ ವಸ್ತುವನ್ನಾಗಿ ಮಾಡುವ ಮೂಲಕ ಸಂಸತ್ತು ಮತ್ತು ರಾಜಕೀಯದಲ್ಲಿ ಅವರ ಕೊಡುಗೆಯನ್ನು ಅವಮಾನಿಸುತ್ತಿದ್ದೀರಿ ಎಂದು  ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ ತೀಕ್ಷ್ಮಣವಾಗಿ ಪ್ರತಿಕ್ರಿಯಿಸಿದ್ದರು. ಸಂಸತ್ತಿನಲ್ಲಿ ಮಹಿಳೆಯರನ್ನು ಆಕ್ಷೇಪಿಸುವುದನ್ನು ನಿಲ್ಲಿಸಿ ಎಂದು ಸುಪ್ರೀಂ ಕೋರ್ಟ್ ವಕೀಲರಾದ ಕರುಣಾ ನಂದಿ ಟ್ವೀಟ್ ಮಾಡಿದ್ದಾರೆ.

ಹೀಗೆ ಟ್ವೀಟರ್ ನಲ್ಲಿ ಟೀಕೆಗಳು ತೀವ್ರವಾಗುತ್ತಿದ್ದಂತೆ, ಇದನ್ನು ಒಳ್ಳೆಯ ರೀತಿಯಲ್ಲಿ ಮಾಡಲಾಗಿದ್ದು, ಕೆಲವು ಜನರಿಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಆದರೆ ಈ ಕಾರ್ಯಸ್ಥಳದ ಸೌಹಾರ್ದತೆಯ ಪ್ರದರ್ಶನದಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ನನಗೆ ಸಂತೋಷವಾಯಿತು ಎಂದು ತಿರುವನಂತಪುರದಲ್ಲಿ ಶಶಿ ತರೂರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT