ಆರು ಮಹಿಳಾ ಸಂಸದರೊಂದಿಗೆ ಶಶಿ ತರೂರ್ ಸೆಲ್ಫಿ 
ದೇಶ

ಆರು ಮಹಿಳಾ ಸಂಸದರೊಂದಿಗೆ ಶಶಿ ತರೂರ್ ಸೆಲ್ಫಿ; ಟ್ವೀಟ್ ಗೆ ಟೀಕೆ

ಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್  ಸೋಮವಾರ ಮಾಡಿರುವ ಟ್ವೀಟ್ ವೊಂದು ವಿವಾದಕ್ಕೆ ಕಾರಣವಾಗಿದೆ. ''ಕೆಲಸ ಮಾಡಲು ಲೋಕಸಭೆ ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ''? ಎಂಬ ಶೀರ್ಷಿಕೆಯಲ್ಲಿ ಆರು ಮಹಿಳಾ ಸಂಸದರ ಜೊತೆಗಿನ ಸೆಲ್ಫಿ ಫೋಸ್ಟ್ ಇದಾಗಿದ್ದು, ಅನೇಕ ನೆಟ್ಟಿಗರು ಸೆಕ್ಸಿಸಂ ಎಂದು ಆರೋಪಿಸಿದ್ದಾರೆ.

ನವದೆಹಲಿ: ಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್  ಸೋಮವಾರ ಮಾಡಿರುವ ಟ್ವೀಟ್ ವೊಂದು ವಿವಾದಕ್ಕೆ ಕಾರಣವಾಗಿದೆ. ''ಕೆಲಸ ಮಾಡಲು ಲೋಕಸಭೆ ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ''? ಎಂಬ ಶೀರ್ಷಿಕೆಯಲ್ಲಿ ಆರು ಮಹಿಳಾ ಸಂಸದರ ಜೊತೆಗಿನ ಸೆಲ್ಫಿ ಫೋಸ್ಟ್ ಇದಾಗಿದ್ದು, ಅನೇಕ ನೆಟ್ಟಿಗರು ಸೆಕ್ಸಿಸಂ ಎಂದು ಆರೋಪಿಸಿದ್ದಾರೆ.

ನಂತರ, ಕೆಲವು ಜನರ ಮನನೊಂದಿರುವುದಕ್ಕಾಗಿ ತರೂರ್ ಕ್ಷಮೆಯಾಚಿಸಿದ್ದಾರೆ ಮತ್ತು ಒಳ್ಳೆಯ ಹಾಸ್ಯದ ರೀತಿಯಲ್ಲಿ ಮಹಿಳಾ ಸಂಸದರೊಂದಿಗೆ ಸೆಲ್ಫಿ ಮಾಡಲಾಗಿದೆ. ಇದನ್ನು ಟ್ವೀಟ್ ಮಾಡುವಂತೆ ಅವರೇ ಕೇಳಿದ್ದಾಗಿ ಶಶಿ ತರೂರ್ ಹೇಳಿದ್ದಾರೆ. 

ಮಹಿಳಾ ಸಂಸದರಾದ ಸುಪ್ರಿಯಾ ಸುಳೆ, ಪ್ರೀನೀತ್ ಕೌರ್, ತಮಿಳಚಿ ತಂಗಪಾಂಡಿಯನ್, ಮಿಮಿ ಚಕ್ರವರ್ತಿ, ನುಸ್ರತ್ ಜಹಾನ್ ರೂಹಿ ಮತ್ತು ಜ್ಯೋತಿಮಣಿ ಅವರೊಂದಿಗಿನ ಸೆಲ್ಫಿ ಫೋಟೋವೊಂದನ್ನು ಇಂದು ಬೆಳಗ್ಗೆ ಶಶಿ ತರೂರ್ ಟ್ವೀಟ್ ಮಾಡಿದ್ದರು. ಇದು ವಿವಾದಕ್ಕೆ ಕಾರಣವಾಗಿ ಅನೇಕ ಮಂದಿ ಆಕ್ಷೇಪ ವ್ಯಕ್ತಪಡಿಸಿದ್ದರು. 

ನೀವು ಅವರನ್ನು ಆಕರ್ಷಣೆಯ ವಸ್ತುವನ್ನಾಗಿ ಮಾಡುವ ಮೂಲಕ ಸಂಸತ್ತು ಮತ್ತು ರಾಜಕೀಯದಲ್ಲಿ ಅವರ ಕೊಡುಗೆಯನ್ನು ಅವಮಾನಿಸುತ್ತಿದ್ದೀರಿ ಎಂದು  ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ ತೀಕ್ಷ್ಮಣವಾಗಿ ಪ್ರತಿಕ್ರಿಯಿಸಿದ್ದರು. ಸಂಸತ್ತಿನಲ್ಲಿ ಮಹಿಳೆಯರನ್ನು ಆಕ್ಷೇಪಿಸುವುದನ್ನು ನಿಲ್ಲಿಸಿ ಎಂದು ಸುಪ್ರೀಂ ಕೋರ್ಟ್ ವಕೀಲರಾದ ಕರುಣಾ ನಂದಿ ಟ್ವೀಟ್ ಮಾಡಿದ್ದಾರೆ.

ಹೀಗೆ ಟ್ವೀಟರ್ ನಲ್ಲಿ ಟೀಕೆಗಳು ತೀವ್ರವಾಗುತ್ತಿದ್ದಂತೆ, ಇದನ್ನು ಒಳ್ಳೆಯ ರೀತಿಯಲ್ಲಿ ಮಾಡಲಾಗಿದ್ದು, ಕೆಲವು ಜನರಿಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಆದರೆ ಈ ಕಾರ್ಯಸ್ಥಳದ ಸೌಹಾರ್ದತೆಯ ಪ್ರದರ್ಶನದಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ನನಗೆ ಸಂತೋಷವಾಯಿತು ಎಂದು ತಿರುವನಂತಪುರದಲ್ಲಿ ಶಶಿ ತರೂರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೌದಿಯಲ್ಲಿ ಬಸ್–ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 45 ಮಂದಿ ಭಾರತೀಯ ಯಾತ್ರಿಕರು ದುರ್ಮರಣ, ಸಹಾಯವಾಣಿ ಆರಂಭ

"ನನಗೆ ಚಿಂತೆಯೇ ಇಲ್ಲ. ಅಲ್ಲಾಹ್ ಜೀವ ಕೊಟ್ಟಿದ್ದಾನೆ.. ಅವನೇ ತೆಗೆದುಕೊಳ್ಳುತ್ತಾನೆ": ಕೋರ್ಟ್ ತೀರ್ಪಿಗೂ ಮೊದಲು ಶೇಖ್ ಹಸೀನಾ!

ಬಿಹಾರದಲ್ಲಿ ಶಾಕಿಂಗ್ ಟ್ವಿಸ್ಟ್: ಎನ್ ಡಿಎಗೆ ಲಾಲೂ ಪ್ರಸಾದ್ ಪುತ್ರ ತೇಜ್ ಪ್ರತಾಪ್ ಯಾದವ್ ಬೆಂಬಲ!

ಬಿಹಾರ: ನ. 20ಕ್ಕೆ ನೂತನ ಸಿಎಂ ಪದ ಗ್ರಹಣ, ಪ್ರಧಾನಿ ಮೋದಿ ಸಮಾರಂಭದಲ್ಲಿ ಭಾಗಿ!

ಸಂಪುಟ ವಿಸ್ತರಣೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್: ಸಿಎಂ ಸಿದ್ದರಾಮಯ್ಯ ಓಟಕ್ಕೆ 'ಬಂಡೆ' ಬ್ರೇಕ್! KN ರಾಜಣ್ಣ ಕಮ್ ಬ್ಯಾಕ್?

SCROLL FOR NEXT