ರಾಹುಲ್ ಗಾಂಧಿ 
ದೇಶ

ಚರ್ಚೆಯಿಲ್ಲದೆ ಕೃಷಿ ಕಾನೂನುಗಳ ರದ್ದುಗೊಳಿಸಿರುವುದು ದುರಾದೃಷ್ಟಕರ ಸಂಗತಿ: ರಾಹುಲ್ ಗಾಂಧಿ

ಚರ್ಚೆಯಿಲ್ಲದೆ ಉಭಯ ಸದನಗಳಲ್ಲಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿರುವುದು ದುರಾದೃಷ್ಟಕರ ಸಂಗತಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸೋಮವಾರ ಹೇಳಿದ್ದಾರೆ.

ನವದೆಹಲಿ: ಚರ್ಚೆಯಿಲ್ಲದೆ ಉಭಯ ಸದನಗಳಲ್ಲಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿರುವುದು ದುರಾದೃಷ್ಟಕರ ಸಂಗತಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚರ್ಚೆಯಿಲ್ಲದೆ ಉಭಯ ಸದನಗಳಲ್ಲಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ನಿರ್ಧಾರಗಳನ್ನು ತೆಗೆದುಕೊಂಡಿರಬಹುದು ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ವಿವಾದಿತ ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯಲಿದೆ ಎಂದು ಈ ಹಿಂದೆಯೇ ನಾನು ಹೇಳಿದ್ದೆ. ಅದೇ ರೀತಿ ಕಾಯ್ದೆಯನ್ನು ರದ್ದುಪಡಿಸಿದೆ. ಆದರೆ, ಚರ್ಚೆಯಿಲ್ಲದೆ ಕಾಯ್ದೆ ಹಿಂಪಡೆದುಕೊಂಡಿರುವುದು ದುರಾದೃಷ್ಟಕರ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

ಚರ್ಚೆ ನಡೆಸಲು ಸರ್ಕಾರಕ್ಕೆ ಭಯವಿದೆ. ರೈತರು ಪ್ರತಿನಿಧಿಸುವ ಭಾರತೀಯ ಜನರ ಬಲವನ್ನು ಎದುರಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗಲಿಲ್ಲ. ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT