ಸಾಂದರ್ಭಿಕ ಫೋಟೋ 
ದೇಶ

'ಒಮಿಕ್ರಾನ್' ಈಗಾಗಲೇ ದೇಶವನ್ನು ಪ್ರವೇಶಿಸಿರಬಹುದು: ಜೀನೋಮ್ ಸೀಕ್ವೆನ್ಸಿಂಗ್ ಹೆಚ್ಚಳದ ಅಗತ್ಯವಿದೆ- ಡಾ. ಗಗನ್ ದೀಪ್ ಕಾಂಗ್

ದೇಶದಲ್ಲಿ ಒಮಿಕ್ರಾನ್ ಕೊರೋನಾವೈರಸ್ ರೂಪಾಂತರದ ಬಗ್ಗೆ ಆತಂಕ ಹೆಚ್ಚಾಗಿರುವ ನಡುವೆ, ಇದು ಈಗಾಗಲೇ ದೇಶವನ್ನು ಪ್ರವೇಶಿಸಿರಬಹುದು ಎಂದು ಹೆಸರಾಂತ ಮೈಕ್ರೋ ಬಯೋಲಾಜಿಸ್ಟ್ ಡಾ. ಗಗನ್ ದೀಪ್ ಕಾಂಗ್ ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ದೇಶದಲ್ಲಿ ಒಮಿಕ್ರಾನ್ ಕೊರೋನಾವೈರಸ್ ರೂಪಾಂತರದ ಬಗ್ಗೆ ಆತಂಕ ಹೆಚ್ಚಾಗಿರುವ ನಡುವೆ, ಇದು ಈಗಾಗಲೇ ದೇಶವನ್ನು ಪ್ರವೇಶಿಸಿರಬಹುದು ಎಂದು ಹೆಸರಾಂತ ಮೈಕ್ರೋ ಬಯೋಲಾಜಿಸ್ಟ್ ಡಾ. ಗಗನ್ ದೀಪ್ ಕಾಂಗ್ ಆತಂಕ ವ್ಯಕ್ತಪಡಿಸಿದ್ದಾರೆ.

ಜೀನೋಮ್ ಸೀಕ್ವೆನ್ಸಿಂಗ್ ಹೆಚ್ಚಿಸುವುದು ಮತ್ತು ಅದನ್ನು ತ್ವರಿತವಾಗಿ ಪತ್ತೆಹಚ್ಚಲು ಎಸ್ ಜೀನ್ ಪಿಸಿಆರ್ ಟೆಸ್ಟಿಂಗ್  ಪರಿಚಯಿಸುವುದು ಮತ್ತು ಹರಡುವಿಕೆ ನಿಯಂತ್ರಿಸುವತ್ತ ಗಮನ ಕೇಂದ್ರಿಕರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. 

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ವೆಲ್ಲೂರಿನ ಕ್ರಿಶ್ಚಿಯನ್ ವೈದ್ಯಕೀಯ ಕಾಲೇಜಿನ ಮೈಕ್ರೋಬಯೋಲಾಜಿಸ್ಟ್  ಡಾ. ಕಾಂಗ್, ಈ ರೂಪಾಂತರ ಇಲ್ಲಿಯವರೆಗೆ ಪತ್ತೆಯಾದ 12 ದೇಶಗಳಿಗಿಂತ ಹೆಚ್ಚಿನದಾಗಿದೆ. ಇದು ಭಾರತದಲ್ಲಿಯೂ ಇರಬಹುದು, ಆದರೆ ನಮ್ಮ ಜೀನೋಮ್ ಅನುಕ್ರಮವು ತುಂಬಾ ನಿಧಾನವಾಗಿದೆ ಆದ್ದರಿಂದ ಅದನ್ನು ತಿಳಿಯಲು ಸಾಧ್ಯವಾಗಿಲ್ಲ ಎಂದರು. 

ಒಮಿಕ್ರಾನ್ ಬಂದ ಒಂದು ತಿಂಗಳ ನಂತರ ಸೀಕ್ವೆನ್ಸಿಂಗ್ ಡೇಟಾ ಬಂದರೆ ಯಾವುದೇ ಪ್ರಯೋಜನವಿಲ್ಲ. ಒಮಿಕ್ರಾನ್ ಜನರಿಗೆ ಬಂದರೆ  ಅದರ ನಿಯಂತ್ರಣಕ್ಕೆ ಇದು ಸಹಾಯ ಮಾಡುವುದಿಲ್ಲ. ಸೀಕ್ವೆನ್ಸಿಂಗ್  ತ್ವರಿತಗತಿಯಲ್ಲಿ ನಡೆಯಲಿದೆ ಎಂಬ ಆಶಾಭಾವನೆಯಿದೆ ಎಂದು ಅವರು ಹೇಳಿದರು. 

ಎಸ್ ಜಿನ್ ಪಿಸಿಆರ್ ಟೆಸ್ಟ್ ಮಾಡಿಸಿದರೆ ಕೆಲವೇ ಗಂಟೆಗಳಲ್ಲಿ ಒಮಿಕ್ರಾನ್  ಇರುವಿಕೆ ಬಗ್ಗೆ ತಿಳಿಯಬಹುದಾಗಿದೆ. ಇದರಿಂದ ಒಮಿಕ್ರಾನ್ ಹರಡುವಿಕೆಯ ಬಗ್ಗೆಯೂ ಮಾಹಿತಿ ಪಡೆಯಬಹುದಾಗಿದೆ. ಆಶ್ಚರ್ಯಕರ ಸಂಗತಿಯೆಂದರೆ, ಈ ಹಿಂದಿನ ಯಾವುದೇ ರೂಪಾಂತರಗಳಿಗಿಂತ ಓಮಿಕ್ರಾನ್ ಹೆಚ್ಚು ರೂಪಾಂತರಗಳನ್ನು ಹೊಂದಿದೆ (ಸ್ಪೈಕ್ ಪ್ರೋಟೀನ್‌ನಲ್ಲಿ 30-ಪ್ಲಸ್) ಎಂದು ಅವರು ಹೇಳಿದರು.

ಒಮಿಕ್ರಾನ್ ಪ್ರಸರಣವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು, ಇದು ಒಂದು ವಾರದ ಸಮಯವನ್ನು ತೆಗೆದುಕೊಳ್ಳಬಹುದು ಎಂದು ಡಾ. ಗಗನ್ ದೀಪ್ ಕಾಂಗ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT