ಕೊರೋನಾ ವೈರಸ್ (ಸಂಗ್ರಹ ಚಿತ್ರ) 
ದೇಶ

ಭಾರತದ ಬಹುತೇಕ ಮಂದಿ ಓಮಿಕ್ರಾನ್ ಸೋಂಕಿನ ವಿರುದ್ಧ ಸುರಕ್ಷಿತ: ಖ್ಯಾತ ವೈರಾಲಜಿಸ್ಟ್ ಶಾಹಿದ್ ಜಮೀಲ್

ಓಮಿಕ್ರಾನ್ ಇರಲಿ ಅಥವಾ ಇನ್ಯಾವುದೇ ಕೊರೋನಾ ಸೋಂಕಿನ ರೂಪಾಂತರಿ ತಳಿಯಾಗಿರಲಿ ಅದರ ವಿರುದ್ಧ ಬಹುತೇಕ ಭಾರತೀಯ ಮಂದಿ ಸುರಕ್ಷಿತರಾಗಿರುವ ಸಾಧ್ಯತೆ ಹೆಚ್ಚಿದೆ ಎಂದು ಖ್ಯಾತ ವೈರಾಲಜಿಸ್ಟ್ ಶಾಹಿದ್ ಜಮೀಲ್ ಅಭಿಪ್ರಾಯಪಟ್ಟಿದ್ದಾರೆ. 

ನವದೆಹಲಿ: ಓಮಿಕ್ರಾನ್ ಇರಲಿ ಅಥವಾ ಇನ್ಯಾವುದೇ ಕೊರೋನಾ ಸೋಂಕಿನ ರೂಪಾಂತರಿ ತಳಿಯಾಗಿರಲಿ ಅದರ ವಿರುದ್ಧ ಬಹುತೇಕ ಭಾರತೀಯ ಮಂದಿ ಸುರಕ್ಷಿತರಾಗಿರುವ ಸಾಧ್ಯತೆ ಹೆಚ್ಚಿದೆ ಎಂದು ಖ್ಯಾತ ವೈರಾಲಜಿಸ್ಟ್ ಶಾಹಿದ್ ಜಮೀಲ್ ಅಭಿಪ್ರಾಯಪಟ್ಟಿದ್ದಾರೆ. 

ಭಾರತೀಯ ಸಾರ್ಸ್-ಸಿಒವಿ-2 ಜಿನೋಮಿಕ್ಸ್ ಒಕ್ಕೂಟ (ಐಎನ್ಎಎಸ್ಎಸಿಒಜಿ) ದ ಮಾಜಿ ಮುಖ್ಯಸ್ಥರೂ ಆಗಿರುವ ಶಾಹಿದ್ ಜಮೀಲ್, ಕೊರೋನಾದ ರೂಪಾಂತರಿ ಸೋಂಕುಗಳ ವಿರುದ್ಧ ಭಾರತೀಯರು ಸುರಕ್ಷಿತರಾಗಿರುವ ಸಾಧ್ಯತೆ ಹೆಚ್ಚಿದ್ದರೂ ಜನರು ಜಾಗರೂಕರಾಗಿರಬೇಕು, ಮಾಸ್ಕ್ ಧರಿಸುವುದನ್ನು ಮರೆಯಬಾರದು ಎಂದು ಹೇಳಿದ್ದಾರೆ. 

ಎರಡನೇ ಅಲೆಯಲ್ಲಿ ಡೆಲ್ಟಾ ರೂಪಾಂತರಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಹರಡಿತ್ತು. ನಾಲ್ಕನೇ ರಾಷ್ಟ್ರೀಯ ಸೆರೋ-ಸಮೀಕ್ಷೆಯ ಪ್ರಕಾರ ಶೇ.67 ರಷ್ಟು ಭಾರತೀಯರಿಗೆ ಕೋವಿಡ್-19 ಪ್ರತಿಕಾಯಗಳಿವೆ ಎಂಬುದು ಬಹಿರಂಗವಾಗಿದೆ ಎಂದು ಶಾಹಿದ್ ಜಮೀಲ್ ತಿಳಿಸಿದ್ದಾರೆ. 

ಇತ್ತೀಚಿನ ದಿನಗಳಲ್ಲಿ ದೆಹಲಿಯಲ್ಲಿ ಶೇ.97 ರಷ್ಟು ಮಂದಿಗೆ ಪ್ರತಿಕಾಯಗಳಿದ್ದರೆ, ಮುಂಬೈ ನಲ್ಲಿ ಪ್ರಕಾಯಗಳನ್ನು ಹೊಂದಿರುವ ಮಂದಿ ಶೇ.85-90 ರಷ್ಟಿದ್ದಾರೆ. ಈ ಎಲ್ಲಾ ದೃಷ್ಟಿಯಿಂದ ಹೆಚ್ಚಿನ ಭಾರತೀಯರು ಓಮಿಕ್ರಾನ್ ಹಾಗೂ ಇನ್ನಿತರ ರೂಪಾಂತರಿಗಳ ವಿರುದ್ಧ ಸುರಕ್ಷಿತರಾಗಿರುವ ಸಾಧ್ಯತೆ ಹೆಚ್ಚಿದೆ ಎಂದು ಜಮೀಲ್ ಹೇಳಿದ್ದಾರೆ. 

ದಕ್ಷಿಣ ಆಫ್ರಿಕಾದಲ್ಲಿ ರೂಪಾಂತರಗೊಂಡಿರುವ ಕೋವಿಡ್-19 ನ ಹೊಸ ತಳಿ ಓಮಿಕ್ರಾನ್ ಪತ್ತೆಯಾದಾಗಿನಿಂದಲೂ ಜಾಗತಿಕ ಮಟ್ಟದಲ್ಲಿ ಮತ್ತೆ ಕೋವಿಡ್-19 ಸೋಂಕು ಪ್ರಸರಣ ಹೆಚ್ಚಾಗುವ ಭೀತಿ ಎದುರಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT