ಜಿಗ್ನೇಶ್ ಮೆವಾನಿ, ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದ ಚಿತ್ರ 
ದೇಶ

ಕನ್ಹಯ್ಯ ಮತ್ತೋರ್ವ ಸಿಧು, ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ: ಆರ್ ಜೆಡಿ

ಜವಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತೋರ್ವ ನವಜೋತ್ ಸಿಂಗ್ ಸಿಧುವಿನಂತೆ ದೇಶದ ಅತ್ಯಂತ ಹಳೆಯ ಪಕ್ಷವನ್ನು ನಾಶಪಡಿಸುವುದಾಗಿ ಎಂದು ಬಿಹಾರದ ಪ್ರಮುಖ ವಿರೋಧ ಪಕ್ಷ ಆರ್ ಜೆಡಿ, ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆ ಕುರಿತು ವ್ಯಂಗ್ಯವಾಡಿದೆ.

ಪಾಟ್ನಾ: ಜವಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತೋರ್ವ ನವಜೋತ್ ಸಿಂಗ್ ಸಿಧುವಿನಂತೆ ದೇಶದ ಅತ್ಯಂತ ಹಳೆಯ ಪಕ್ಷವನ್ನು ನಾಶಪಡಿಸುವುದಾಗಿ ಎಂದು ಬಿಹಾರದ ಪ್ರಮುಖ ವಿರೋಧ ಪಕ್ಷ ಆರ್ ಜೆಡಿ, ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆ ಕುರಿತು ವ್ಯಂಗ್ಯವಾಡಿದೆ.

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು ಎಂದು ವ್ಯಂಗ್ಯವಾಡಿದ ಆರ್ ಜೆಡಿ ಹಿರಿಯ ಮುಖಂಡ ಶಿವಾನಂದ ತಿವಾರಿ, ಕನ್ಹಯ್ಯ ಕುಮಾರ್ ಸೇರ್ಪಡೆಯಿಂದ ಯಾವುದೇ ಕಾಂಗ್ರೆಸ್ ನಲ್ಲಿ  ವ್ಯತ್ಯಾಸವಾಗದು ಎಂದಿದ್ದಾರೆ.

ಕಾಂಗ್ರೆಸ್ ಪಕ್ಷ ದೊಡ್ಡ ಹಡಗು, ಅದನ್ನು ಉಳಿಸಬೇಕಾದ ಅಗತ್ಯವಿದೆ ಎಂಬ ಕನ್ಹಯ್ಯ ಕುಮಾರ್ ಹೇಳಿಕೆ ಉಲ್ಲೇಖಿಸಿದ ತಿವಾರಿ, ಆತ ಮತ್ತೋರ್ವ ನವಜೋತ್ ಸಿಂಗ್ ಸಿಧು ತರಹ, ಪಕ್ಷವನ್ನು ಹಾಳು ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು ಆಗಿದ್ದು, ಅದಕ್ಕೆ ಯಾವುದೇ ಭವಿಷ್ಯವಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದರು.

ತೇಜಸ್ವಿ ಯಾದವ್ ನೇತೃತ್ವದ ಪಕ್ಷದೊಂದಿಗೆ ಸಮಾಲೋಚಿಸದೆ ಕನ್ಹಯ್ಯ ಕುಮಾರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಬಗ್ಗೆ ಆರ್ ಜೆಡಿ ಪಕ್ಷದಲ್ಲಿ ಅಸಮಾಧಾನ ಇರುವುದಾಗಿ ಮೂಲಗಳು ಹೇಳಿವೆ. 

ಕಳೆದ ವರ್ಷ ಬಿಹಾರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪೈಪೋಟಿ ನಡೆಸಿದ ಆರ್ ಜೆಡಿ ನೇತೃತ್ವದ ಮಹಾಘಟ್ ಬಂಧನ್ ನಲ್ಲಿ ಕಾಂಗ್ರೆಸ್ ಕೂಡಾ ಮೈತ್ರಿ ಪಕ್ಷವಾಗಿತ್ತು. ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಬಿಹಾರ ಕಾಂಗ್ರೆಸ್ ಮುಖಂಡರು ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

ಕಳ್ಳಬಟ್ಟಿ ಸಾರಾಯಿ–ಸೇಂದಿ ದಂಧೆಕೋರರು ಗಡಿಪಾರು: ಸಚಿವ ತಿಮ್ಮಾಪುರ ಸೂಚನೆ

SCROLL FOR NEXT