ಸಂಗ್ರಹ ಚಿತ್ರ 
ದೇಶ

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬಸ್-ಟ್ರಕ್ ನಡುವೆ ಡಿಕ್ಕಿ, 7 ಮಂದಿ ದುರ್ಮರಣ

ಮಧ್ಯಪ್ರದೇಶದ ಭಿಂದ್​ ಜಿಲ್ಲೆಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ಭಿಂದ್: ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಭಿಂದ್‌ ಜಿಲ್ಲೆಯ ವೀರ್‌ ಖಾದಿ ಗ್ರಾಮದ ಬಳಿ ಬಸ್‌ ಹಾಗೂ ಕಂಟೈನರ್‌ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯರು ಮಾಹಿತಿ ನೀಡಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಅಪಘಾತದಲ್ಲಿ ಗಾಯಗೊಂಡವರ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕ ವಾಗಿದೆ ಎಂದು ತಿಳಿದುಬಂದಿದೆ. 

ಘಟನಾ ಸ್ಥಳದಿಂದ 79 ಕಿಲೋ ಮೀಟರ್‌ ದೂರದಲ್ಲಿರುವ ಗ್ವಾಲಿಯರ್‌ ನ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್‌ ನಲ್ಲಿದ್ದ ಪ್ರಯಾಣಿಕರು ಗ್ವಾಲಿಯರ್‌ ನಿಂದ ಮಧ್ಯಪ್ರದೇಶದ ಬರೇಲಿ ಪಟ್ಟಣಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಅಪಘಾತಕ್ಕೆ ಕಾರಣನಾದ ಚಾಲಕನನ್ನು ಬಂಧಿಸಿ ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿ ಮನೋಜ್‌ ಸಿಂಗ್‌ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಿನಿಯಾಪೊಲಿಸ್ ಶೂಟಿಂಗ್: ICE ಅಧಿಕಾರಿಗಳಿಂದ ಗುಂಡಿಟ್ಟು ಮಹಿಳೆ ಹತ್ಯೆ, ‘ಸ್ವಯಂರಕ್ಷಣೆ ಕ್ರಮ’ ಎಂದು ಟ್ರಂಪ್ ಸಮರ್ಥನೆ

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ'- ಅಮೆರಿಕ ವಾಣಿಜ್ಯ ಕಾರ್ಯದರ್ಶಿ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ; ಸಿದ್ದರಾಮಯ್ಯ ತೀವ್ರ ಆಕ್ರೋಶ

ಬಳ್ಳಾರಿ ಆಳಲು ಹೊರಟ ಪಾಳೇಗಾರರ ಮಧ್ಯೆ ವಿಜೃಂಭಿಸಿದ ಗನ್ ಸಂಸ್ಕೃತಿ (ನೇರ ನೋಟ)

ಮನ್ರೇಗಾ ಯೋಜನೆ ಮರು ಜಾರಿಗೆ ಆಗ್ರಹ: ಕೇಂದ್ರದ ವಿರುದ್ಧ ಸಿಡಿದೆದ್ದ ರಾಜ್ಯ ಸರ್ಕಾರ, ನಿರ್ಣಯ ಅಂಗೀಕರಿಸಲು ಶೀಘ್ರದಲ್ಲೇ ವಿಶೇಷ ಅಧಿವೇಶನ ಕರೆಯಲು ನಿರ್ಧಾರ

SCROLL FOR NEXT