ನೂತನ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ 
ದೇಶ

ದೇಶದ ಭದ್ರತೆಗೆ ವಾಯುಪಡೆ ಶಕ್ತಿಯ ಸದ್ಭಳಕೆ ನನ್ನ ಮೊದಲ ಆದ್ಯತೆ: ನೂತನ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ

ವಾಯುಪಡೆಯ ಶಕ್ತಿಯನ್ನು ಸರಿಯಾಗಿ ಮತ್ತು ಸೂಕ್ತ ಸಮಯಕ್ಕೆ ಸದ್ಭಳಕೆ ಮಾಡಿಕೊಂಡು ದೇಶದ ಸುರಕ್ಷತೆ ತಮ್ಮ ಮೊದಲ ಆದ್ಯತೆ ಎಂದು ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಹೇಳಿದ್ದಾರೆ.

ನವದೆಹಲಿ: ವಾಯುಪಡೆಯ ಶಕ್ತಿಯನ್ನು ಸರಿಯಾಗಿ ಮತ್ತು ಸೂಕ್ತ ಸಮಯಕ್ಕೆ ಸದ್ಭಳಕೆ ಮಾಡಿಕೊಂಡು ದೇಶದ ಸುರಕ್ಷತೆ ತಮ್ಮ ಮೊದಲ ಆದ್ಯತೆ ಎಂದು ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಹೇಳಿದ್ದಾರೆ.

ಎಎನ್ ಐ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿರುವ ಅವರು, ದೇಶದ ಸುರಕ್ಷತೆ ತಮ್ಮ ಮೊದಲ ಆದ್ಯತೆಯಾದರೆ, ಭವಿಷ್ಯದಲ್ಲಿ ಯುದ್ಧಗಳಲ್ಲಿ ಸವಾಲುಗಳನ್ನು ಎದುರಿಸಲು ನಮ್ಮ ಸಿಬ್ಬಂದಿಗೆ ತರಬೇತಿ, ಉತ್ತೇಜನ ಮತ್ತು ಎಲ್ಲಾ ತಂತ್ರಜ್ಞಾನ, ಸಾಧನಗಳನ್ನು ಬಳಸುವುದು ಎರಡನೇ ಆದ್ಯತೆಯಾಗಿದೆ ಎಂದಿದ್ದಾರೆ.

ಮುಂದೆ, ಎಲ್ಲ ರೀತಿಯಲ್ಲೂ ನಮ್ಮನ್ನು ಸ್ವಾವಲಂಬಿಗಳನ್ನಾಗಿ ಮಾಡುವ 'ಆತ್ಮನಿರ್ಭರ'ದ ಕಡೆಗೆ ದೈತ್ಯ ಹೆಜ್ಜೆಗಳನ್ನು ಇಡುವುದು ಮುಂದಿನ ಆದ್ಯತೆಯಾಗಿದೆ ಎಂದು ಕೂಡ ಹೇಳಿದ್ದಾರೆ. ಭಾರತೀಯ ವಾಯುಪಡೆಯ ಮುಖ್ಯಸ್ಥರಾಗಿ ಏರ್ ಚೀಫ್ ಮಾರ್ಷಲ್ ಆರ್ ಕೆ ಎಸ್ ಬದೌರಿಯಾ ಅವರು ನಿವೃತ್ತಿಯಾದ ಹಿನ್ನೆಲೆಯಲ್ಲಿ ನಿನ್ನೆ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಅಧಿಕಾರ ವಹಿಸಿಕೊಂಡಿದ್ದಾರೆ.

ವಾಯುಪಡೆಯ ಯೋಧರಲ್ಲಿ ಸಾಕಷ್ಟು ಸಾಮರ್ಥ್ಯವಿದೆ, ಭವಿಷ್ಯದ ಯುದ್ಧಗಳಿಗೆ ತಯಾರಾಗಲು ನಾವು ಇನ್ನಷ್ಟು ಕಲಿಯುವ ಸಾಮರ್ಥ್ಯವನ್ನು ಹೊಂದಿದ್ದೇವೆ. ಗಡಿಗಳಲ್ಲಿ ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ಐಎಎಫ್ ಪಾತ್ರದ ಬಗ್ಗೆ ಮತ್ತು ಅದು ಹೇಗೆ ಭವಿಷ್ಯದ ಸವಾಲುಗಳನ್ನು ಎದುರಿಸಲು ಸಾಧ್ಯ ಎಂದು ಅವರು ವಿವರಿಸಿದರು.

ಸರಿಯಾದ ತರಬೇತಿ, ಈಗಿರುವ ಪರಿಕರಗಳ ಪರಿಶೋಧನೆ ಮತ್ತು ಭವಿಷ್ಯದಲ್ಲಿ ನಾವು ಏನನ್ನು ಪಡೆಯುತ್ತೇವೆ ಅವುಗಳ ಸರಿಯಾದ ಸದ್ಭಳಕೆ ಮತ್ತು ಮಾನವ ಶಕ್ತಿಗಳ ಬಳಕೆಯನ್ನು ಮಾಡಬೇಕಾಗುತ್ತದೆ ಎಂದಿದ್ದಾರೆ.

ಮೇಲ್ಮೈಯಿಂದ ವಾಯು ಮಾರ್ಗದರ್ಶಿ ಶಸ್ತ್ರಾಸ್ತ್ರಗಳು ಮತ್ತು ಸಂಪೂರ್ಣ ಇತರ ಉಪಕರಣಗಳು ಬಳಕೆ ಹಂತದಲ್ಲಿವೆ. ನಮ್ಮ ಎಲ್ಲ ಖರೀದಿ ಯೋಜನೆಗಳಲ್ಲಿ 'ಆತ್ಮನಿರ್ಭರ'ದ ಕಡೆಗೆ ನಮ್ಮ ಗಮನ ಮುಂದುವರಿಯುತ್ತದೆ ಎಂದರು.

ನಾವು ಮುಂದುವರಿದುಕೊಂಡು ಹೋಗುತ್ತಿರುವ ಹಾದಿ ಎಲ್ಲರಿಗೂ ಗೊತ್ತಿದೆ. ನಾವು 83 ಹಗುರ ಯುದ್ಧ ವಿಮಾನಗಳಿಗಾಗಿ ಒಪ್ಪಂದಕ್ಕೆ ಸಹಿ ಹಾಕಿದ್ದೇವೆ. ಎಎಂಸಿಎ ಮತ್ತು ಎಲ್ ಸಿಎ-ಎಂಕೆ2 ಸೇರ್ಪಡೆ ಹಂತದಲ್ಲಿವೆ ಎಂದು ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಹೇಳಿದ್ದಾರೆ.

ಇದಕ್ಕೂ ಮುನ್ನ ಅವರು ಇಂದು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT