ಯೋಗಿ ಆದಿತ್ಯನಾಥ್ 
ದೇಶ

ಒಂದೇ ಖಾಸಗಿ ಶಾಲೆಯಲ್ಲಿ ಕಲಿಯುವ 2 ಸಹೋದರಿಯರ ಪೈಕಿ ಒಬ್ಬರಿಗೆ ಶುಲ್ಕ ಮನ್ನ: ಯುಪಿ ಸರ್ಕಾರದ ಚಿಂತನೆ

ಮಧ್ಯಮ ವರ್ಗದ ಕುಟುಂಬಗಳಿಗೆ ನೆರವಾಗುವ ಯೋಜನೆಯೊಂದನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಜಾರಿಗೊಳಿಸಲು ಚಿಂತನೆ ನಡೆಸುತ್ತಿದೆ. 

ಲಖನೌ: ಮಧ್ಯಮ ವರ್ಗದ ಕುಟುಂಬಗಳಿಗೆ ನೆರವಾಗುವ ಯೋಜನೆಯೊಂದನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಜಾರಿಗೊಳಿಸಲು ಚಿಂತನೆ ನಡೆಸುತ್ತಿದೆ. 

ಕುಟುಂಬದಲ್ಲಿ ಇಬ್ಬರು ಸಹೋದರಿಯರು ಒಂದೇ ಖಾಸಗಿ ಶಾಲೆ/ ಕಾಲೇಜಿನಲ್ಲಿ ಓದುತ್ತಿದ್ದರೆ ಅವರ ಪೈಕಿ ಒಬ್ಬರಿಗೆ ಮಾತ್ರ ಶುಲ್ಕ ಪಡೆದು ಮತ್ತೊರ್ವ ವಿದ್ಯಾರ್ಥಿನಿಗೆ ಶುಲ್ಕ ಮನ್ನ ಮಾಡುವ ಯೋಜನೆಯನ್ನು ಯೋಗಿ ಆದಿತ್ಯನಾಥ್ ಸರ್ಕಾರ ಪರಿಗಣಿಸುತ್ತಿದೆ.

"ಇದು ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪರಿಗಣಿಸಲಾಗುತ್ತಿರುವ ಯೋಜನೆಯಾಗಿದೆ. ಒಂದೇ ದಂಪತಿಯ ಇಬ್ಬರು ಹೆಣ್ಣುಮಕ್ಕಳು ಒಂದೇ ಶಾಲೆ/ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಅವರಲ್ಲಿ ಒಬ್ಬರಿಗೆ ಶುಲ್ಕ ಮನ್ನ ಮನ್ನ ಮಾಡುವುದನ್ನು ಖಾಸಗಿ ಶಾಲೆ/ ಕಾಲೇಜುಗಳು ಪರಿಗಣಿಸಲೇಬೇಕಾಗಿದೆ. ಒಂದು ವೇಳೆ ಪರಿಗಣಿಸದ ಶೈಕ್ಷಣಿಕ ಸಂಸ್ಥೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರಬೇಕು, ಅಂತಹ ಶೈಕ್ಷಣಿಕ ಸಂಸ್ಥೆಗಳಿಗೆ ಸರ್ಕಾರವೇ ಆ ವಿದ್ಯಾರ್ಥಿನಿಯ ಪರವಾಗಿ ಶುಲ್ಕ ಪಾವತಿ ಮಾಡಲಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

"ಈ ಯೋಜನೆಯಿಂದಾಗಿ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ದೊರೆಯಲಿದ್ದು ಪೋಷಕರೂ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಾರೆ" ಎಂದು ಆದಿತ್ಯನಾಥ್ ಹೇಳಿದ್ದಾರೆ.

"ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ಮಾತನಾಡಿದ್ದು, ಈ ಯೋಜನೆ ಜಾರಿಯ ವಿಧಾನಗಳೆಡೆಗೆ ಕೆಲಸ ಮಾಡಲಾಗುತ್ತಿದೆ" ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT