ಆರ್ಯನ್ ಖಾನ್ 
ದೇಶ

ಡ್ರಗ್ಸ್ ಪ್ರಕರಣ: ಶಾರುಖ್ ಖಾನ್ ಪುತ್ರ, ಇತರ ಇಬ್ಬರು ಅಕ್ಟೋಬರ್ 7 ರವರೆಗೆ ಎನ್ ಸಿಬಿ ವಶಕ್ಕೆ

ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಮಾದಕವಸ್ತುಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್...

ಮುಂಬೈ: ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಮಾದಕವಸ್ತುಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರನ್ನು ಅಕ್ಟೋಬರ್ 7ರ ವರೆಗೆ ಎನ್ ಸಿಬಿ ವಶಕ್ಕೆ ನೀಡಲಾಗಿದೆ.

ಡ್ರಗ್ಸ್ ಪ್ರಕರಣ ಸಂಬಂಧ ಬಂಧಿತ ಎಲ್ಲಾ ಎಂಟು ಆರೋಪಿಗಳ ವೈದ್ಯಕೀಯ ಪರೀಕ್ಷೆಯ ನಂತರ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಗಳ ವಿಚಾರಣೆ ನಡೆಸಿದ ಕೋರ್ಟ್, ಹೆಚ್ಚಿನ ವಿಚಾರಣೆಗಾಗಿ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರನ್ನು ಅಕ್ಟೋಬರ್ 7ರ ವರೆಗೆ ಎನ್ ಸಿಬಿ ವಶಕ್ಕೆ ನೀಡಿದೆ.

ಶಾರುಖ್ ಪುತ್ರ ಆರ್ಯನ್ ಅವರ ಫೋನಿನಲ್ಲಿ ‘ಆಘಾತಕಾರಿ, ದೋಷಾರೋಪಣೆ ಮಾಡುವ ವಸ್ತು’ ಪತ್ತೆಯಾಗಿದೆ. ಹೆಚ್ಚಿನ ವಿಚಾರಣೆಗಾಗಿ ಆರ್ಯನ್ ಅವರನ್ನು ಅಕ್ಟೋಬರ್ 11 ರವರೆಗೆ ತಮ್ಮ ವಶಕ್ಕೆ ನೀಡುವಂತೆ ಎನ್ ಸಿಬಿ ಮನವಿ ಮಾಡಿತ್ತು. 

ಎನ್ ಸಿಬಿ ನಡೆಸಿದ ಪ್ರಾಥಮಿಕ ತನಿಖೆಯು ಆರ್ಯನ್ ಮೊಬೈಲ್ ನಲ್ಲಿ ವಾಟ್ಸಾಪ್ ಚಾಟ್‌ಗಳ ರೂಪದಲ್ಲಿ ದೋಷಪೂರಿತ ವಸ್ತುಗಳನ್ನು ಹೊಂದಿದೆ ಎಂದು ಬಹಿರಂಗಪಡಿಸುತ್ತದೆ ಮತ್ತು ಹೀಗೆ ಬಂಧಿತ ಆರೋಪಿಗಳೊಂದಿಗೆ (ಆರ್ಯನ್ ಖಾನ್ ಮತ್ತು ಇನ್ನಿಬ್ಬರು) ನಿಯಮಿತವಾಗಿ ಪೂರೈಕೆದಾರರು ಮತ್ತು ಪೆಡ್ಲರ್‌ಗಳೊಂದಿಗಿನ ನಂಟನ್ನು ಇದು ಸ್ಪಷ್ಟವಾಗಿ ತೋರಿಸುತ್ತದೆ" ಎಂದು ಎನ್ ಸಿಬಿ ತನ್ನ ರಿಮಾಂಡ್ ನೋಟ್ ನಲ್ಲಿ ಹೇಳಿದೆ.

ಅಕ್ಬೋಬರ್ 2ರಂದು ರಾತ್ರಿ ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ರೇವ್​ ಪಾರ್ಟಿ ಆಯೋಜಿಸಲಾಗಿತ್ತು. ಪಾರ್ಟಿಯಲ್ಲಿ ಭಾಗವಹಿಸಿದ್ದ ಬಾಲಿವುಡ್ ಬಾದ್ ಷಾ ಶಾರುಖ್​ ಖಾನ್ ಪುತ್ರ ಆರ್ಯನ್​ ಖಾನ್​ ಸೇರಿದಂತೆ ಎಂಟು ಮಂದಿಯನ್ನು ಎನ್​ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT