ಸಾಂದರ್ಭಿಕ ಚಿತ್ರ 
ದೇಶ

ಜೂಸ್ ಎಂದು ತಿಳಿದು ಅಕಸ್ಮಿಕವಾಗಿ ಆಲ್ಕೊಹಾಲ್ ಸೇವಿಸಿದ 5 ವರ್ಷದ ಬಾಲಕ ದುರ್ಮರಣ

ತಾತ ಚಿನ್ನಸ್ವಾಮಿ (62) ಅವರಿಗೆ ಕುಡಿತದ ಚಟವಿತ್ತು. ಹೀಗಾಗಿ ಮನೆಯಲ್ಲಿಯೇ ಬ್ರಾಂಡಿ ಬಾಟಲಿಯನ್ನು ತಂದು ಇಟ್ಟುಕೊಂಡಿದ್ದರು. 

ವೆಲ್ಲೂರ್: ಹಣ್ಣಿನ ಜೂಸ್ ಎಂದು ತಪ್ಪಾಗಿ ತಿಳಿದು ಆಲ್ಕೊಹಾಲ್ ಸೇವಿಸಿದ್ದ 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ಅಣ್ಣಾನಗರ್ ನಲ್ಲಿ ನಡೆದಿದೆ. 

ರಾಕೇಶ್ ಎನ್ನುವ ಬಾಲಕ ಮೃತಪಟ್ಟ ದುರ್ದೈವಿ. ಆತನ ತಾತ ಚಿನ್ನಸ್ವಾಮಿ (62) ಅವರಿಗೆ ಕುಡಿತದ ಚಟವಿತ್ತು. ಹೀಗಾಗಿ ಮನೆಯಲ್ಲಿಯೇ ಬ್ರಾಂಡಿ ಬಾಟಲಿಯನ್ನು ತಂದು ಇಟ್ಟುಕೊಂಡಿದ್ದರು. 

ತಾತನ ರೂಮಿನಲ್ಲಿ ಬ್ರಾಂಡಿ ಬಾಟಲಿಯನ್ನು ಜೂಸ್ ಎಂದು ತಪ್ಪು ತಿಳಿದ ರಾಕೇಶ್ ಅದರಲ್ಲಿದ್ದುದನ್ನು ಕುಡಿದಿದ್ದಾನೆ. ಆತ ಕುಡಿದ ಸಂಗತಿ ಯಾರಿಗೂ ತಿಳಿದಿರಲಿಲ್ಲ. ನಂತರ ರಾಕೇಶ್ ಏಕಾಏಕಿ ಆತನ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಅದನ್ನು ಕಂಡು ರಾಕೇಶ್ ತಾತ ಚಿನ್ನಸ್ವಾಮಿ ಕೂಡಾ ಅನಾರೋಗ್ಯಕ್ಕೀಡಾದರು. 

ಇಬ್ಬರನ್ನೂ ಮನೆಯವರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಈ ಬಗ್ಗೆ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT