ಲಖಿಂಪುರ ಖೇರಿ 
ದೇಶ

ಪ್ರತಿಭಟನಾ ನಿರತ ರೈತರು - ಯುಪಿ ಸರ್ಕಾರದ ನಡುವೆ ಮಾತುಕತೆ ಯಶಸ್ವಿ: ಮೃತರ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರ

ಲಖಿಂಪುರ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ಪ್ರಾಣ ಕಳೆದುಕೊಂಡ ನಂತರ ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಉತ್ತರ ಪ್ರದೇಶ ಸರ್ಕಾರ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು,...

ಲಖನೌ: ಲಖಿಂಪುರ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ಪ್ರಾಣ ಕಳೆದುಕೊಂಡ ನಂತರ ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಉತ್ತರ ಪ್ರದೇಶ ಸರ್ಕಾರ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ತಮ್ಮ ಹೋರಾಟವನ್ನು ಕೈಬಿಡುವುದಾಗಿ ರೈತರು ಘೋಷಿಸಿದ್ದಾರೆ.

ಹೆಚ್ಚುವರಿ ಮಹಾನಿರ್ದೇಶಕ(ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಪ್ರಕಾರ, ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ಕು ರೈತರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 45 ಲಕ್ಷ ರೂ. ಪರಿಹಾರ ಹಾಗೂ ಮೃತರ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ಮತ್ತು ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡುವ ಭರವಸೆ ನೀಡಲಾಗಿದೆ.

ಹಿಂಸಾಚಾರದ ಬಗ್ಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲಾಗುವುದು ಮತ್ತು ಮುಂದಿನ ಎಂಟು ದಿನಗಳ ಒಳಗೆ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪ್ರಶಾಂತ್ ಕುಮಾರ್ ಹೇಳಿದ್ದಾರೆ.


ಪ್ರತಿಭಟನಾ ನಿರತ ರೈತರು ಮತ್ತು ಉತ್ತರ ಪ್ರದೇಶ ಸರ್ಕಾರದ ನಡುವಿನ ಮಾತುಕತೆ ಯಶಸ್ವಿಯಾದ ನಂತರವೇ ಪ್ರತಿಭಟನಾಕಾರರು ಭಾನುವಾರ ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ವರು ರೈತರ ಮರಣೋತ್ತರ ಪರೀಕ್ಷೆಗೆ ಒಪ್ಪಿಕೊಂಡರು. ಶವಪರೀಕ್ಷೆಯನ್ನು ಐದು ವೈದ್ಯರ ಸಮಿತಿಯಿಂದ ಮಾಡಲಾಗುವುದು ಮತ್ತು ಪ್ರಕ್ರಿಯೆಯನ್ನು ವೀಡಿಯೋ ಮಾಡಲಾಗುತ್ತದೆ.

ಲಖಿಂಪುರ್ ಖೇರಿಯಲ್ಲಿ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯನ್ನು ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದ ಪರಿಣಾಮ ರೈತರು ಮತ್ತು ಬಿಜೆಪಿ ಕಾರ್ಯಕರ್ತರು ಸೇರಿ 8 ಮಂದಿ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!