ಲಖಿಂಪುರ್ ಖೇರಿ ಹಿಂಸಾಚಾರ 
ದೇಶ

ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿದ ವಿಡಿಯೋ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ, ಬಂಧನಕ್ಕೆ ಆಗ್ರಹ

ಬಿಜೆಪಿ ಸಂಸದ ವರುಣ್ ಗಾಂಧಿ ಮಂಗಳವಾರ ಉತ್ತರ ಪ್ರದೇಶ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಎಸ್ ಯುವಿ ಕಾರು ಹರಿಸಿದ ವಿಡಿಯೋ ಕ್ಲಿಪ್ ಅನ್ನು ಶೇರ್ ಮಾಡಿದ್ದಾರೆ ಮತ್ತು ಘಟನೆಯಲ್ಲಿ ಭಾಗಿಯಾದವರನ್ನು...

ನವದೆಹಲಿ: ಬಿಜೆಪಿ ಸಂಸದ ವರುಣ್ ಗಾಂಧಿ ಮಂಗಳವಾರ ಉತ್ತರ ಪ್ರದೇಶ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಎಸ್ ಯುವಿ ಕಾರು ಹರಿಸಿದ ವಿಡಿಯೋ ಕ್ಲಿಪ್ ಅನ್ನು ಶೇರ್ ಮಾಡಿದ್ದಾರೆ ಮತ್ತು ಘಟನೆಯಲ್ಲಿ ಭಾಗಿಯಾದವರನ್ನು ಪೊಲೀಸರು ಗುರುತಿಸಿ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ವೀಡಿಯೊದ ಸತ್ಯಾಸತ್ಯತೆ ಇನ್ನೂ ಪರಿಶೀಲಿಸಲಾಗಿಲ್ಲ. ಆದರೆ "ಲಖಿಂಪುರ್ ಖೇರಿಯಲ್ಲಿ ಉದ್ದೇಶಪೂರ್ವಕವಾಗಿಯೇ ರೈತರ ಮೇಲೆ ವಾಹನ ಹರಿಸಿರುವ ಈ ವಿಡಿಯೋ ಪ್ರತಿಯೊಬ್ಬರ ಮನಸನ್ನು ಕದಡುತ್ತದೆ ಎಂದು ಬಿಜೆಪಿ ಸಂಸದ ಹೇಳಿದ್ದಾರೆ.

ಪೋಲಿಸರು ವೀಡಿಯೋವನ್ನು ಪರಿಶೀಲಿಸಬೇಕು, ಈ ವಾಹನಗಳ ಮಾಲೀಕರು ಮತ್ತು ಅವರ ವೃತ್ತಿಯನ್ನು ಗುರುತಿಸಬೇಕು. ಘಟನೆಯಲ್ಲಿ ಭಾಗಿಯಾಗಿರುವ ಇತರರನ್ನು ಗುರುತಿಸಬೇಕು ಮತ್ತು ಅವರನ್ನು ತಕ್ಷಣವೇ ಬಂಧಿಸಬೇಕು" ಎಂದು ವರುಣ್ ಗಾಂಧಿ ಆಗ್ರಹಿಸಿದ್ದಾರೆ.

ಕಳೆದ ಭಾನುವಾರ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಮೃತಪಟ್ಟವರಲ್ಲಿ ನಾಲ್ವರು ರೈತರಾಗಿದ್ದು, ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರನ್ನು ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಓಡಿಸುತ್ತಿದ್ದ ವಾಹನಗಳನ್ನು ರೈತರ ಮೇಲೆ ಹರಿಸಲಾಗಿದೆ. ಇದರಿಂದ ಆಕ್ರೋಶಗೊಂಡ ರೈತರು ವಾಹನವನ್ನು ತಡೆದು ಬಿಜೆಪಿ ಕಾರ್ಯಕರ್ತರು ಮತ್ತು ಚಾಲಕರು ಸೇರಿದಂತೆ ನಾಲ್ವರನ್ನು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT