ಲಖಿಂಪುರದಲ್ಲಿ ಹಿಂಸಾಚಾರ ನಡೆದ ಸ್ಥಳ 
ದೇಶ

ಲಖಿಂಪುರ ಹಿಂಸಾಚಾರದಿಂದ 2022 ರಲ್ಲಿ ಟೆರಾಯ್ ಭಾಗದಲ್ಲಿ ಬಿಜೆಪಿ ಮೇಲೆ ಗಂಭೀರ ಪರಿಣಾಮ!

ಲಖಿಂಪುರ ಹಿಂಸಾಚಾರವನ್ನು 2022 ರ ವಿಧಾನಸಭಾ ಚುನಾವಣೆಗೆ ವಿಪಕ್ಷಗಳು ಬಿಜೆಪಿ ವಿರುದ್ಧದ ಅಸ್ತ್ರವನ್ನಾಗಿಸಿಕೊಳ್ಳಲಿದೆ.

ಲಖನೌ: ಲಖಿಂಪುರ ಹಿಂಸಾಚಾರವನ್ನು 2022 ರ ವಿಧಾನಸಭಾ ಚುನಾವಣೆಗೆ ವಿಪಕ್ಷಗಳು ಬಿಜೆಪಿ ವಿರುದ್ಧದ ಅಸ್ತ್ರವನ್ನಾಗಿಸಿಕೊಳ್ಳಲಿದೆ. ಆಡಳಿತಾರೂಢ ಪಕ್ಷ ಮತ್ತೊಂದೆಡೆ ಸಂಭಾವ್ಯವಾಗಿದ್ದ ದೀರ್ಘಕಾಲದ ಪ್ರತಿಭಟನೆಯ ಬೆಂಕಿಯನ್ನು ನಂದಿಸಿದರೂ ಆತಂಕದಲ್ಲಿದೆ.

ಲಖಿಂಪುರ್ ಖೇರಿ ಉತ್ತರ ಪ್ರದೇಶದ ಟೆರಾಯ್ ಪ್ರಾಂತ್ಯದಲ್ಲಿ ಅತಿ ದೊಡ್ಡ ಜಿಲ್ಲೆಯಾಗಿದ್ದು, ಸಿಖ್ ಸಮುದಾಯದ ರೈತರು ಬಹುಸಂಖ್ಯಾತರಾಗಿದ್ದಾರೆ.

ಜಿಲ್ಲೆಯಲ್ಲಿ 8 ಅಸೆಂಬ್ಲಿ ಸೆಗ್ಮೆಂಟ್ ಗಳನ್ನು ಹೊಂದಿದ್ದು 2017 ರ ವಿಧಾನಸಭಾ ಚುನಾವಣೆ ವೇಳೆ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಿತ್ತು. ಇದಕ್ಕೂ ಮುನ್ನ ಅಂದರೆ 2012 ರಲ್ಲಿ ಕೇವಲ ಒಂದು ಸ್ಥಾನದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.

ಸಿಖ್ ಸಮುದಾಯದ ಹೊರತಾಗಿ ಮೇಲ್ಜಾತಿಯ ಬ್ರಾಹ್ಮಣ ಸಮುದಾಯ, ಒಬಿಸಿಗಳಲ್ಲಿ ಕುರ್ಮಿಗಳು ಹಾಗೂ ಮುಸ್ಲಿಮರು ಪ್ರಬಲರಾಗಿದ್ದಾರೆ. ಲಖೀಂಪುರ್ ಖೇರಿ ಮುಖ್ಯವಾಗಿ ಕಬ್ಬು ಬೆಳೆಗೆ ಹೆಸರುವಾಸಿಯಾಗಿದೆ.

ಭಾನುವಾರದ ಹಿಂಸಾಚಾರದ ನಂತರ ವಿಪಕ್ಷಗಳ ನಾಯಕರು ಪ್ರತಿಭಟನೆಯನ್ನು ಕಾವನ್ನು ಕಾಪಿಟ್ಟುಕೊಳ್ಳಲು ಯತ್ನಿಸುತ್ತಿದ್ದು, 2022 ರ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರದ ವಿರುದ್ಧದ ಅಸ್ತ್ರವಾಗಿ ಬಳಕೆ ಮಾಡಿಕೊಳ್ಳುವುದಕ್ಕೆ ಸಿದ್ಧತೆ ನಡೆಸಿವೆ. ವಿಪಕ್ಷಗಳ ನಡೆಯ ಬಗ್ಗೆ ಬಿಜೆಪಿಗೂ ಆತಂಕವಿದ್ದು ನೆರೆಯ ಜಿಲ್ಲೆಗಳಾದ ಪಿಲಿಭಿಟ್, ಶಹಜಹಾನ್ ಪುರ, ಹರೋಡಿ, ಸೀತಾಪುರ, ಬಹ್ರೈಚ್ ಗಳಲ್ಲೂ ಪ್ರತಿಭಟನೆಯ ಬಿಸಿ ತಟ್ಟುವ ಆತಂಕವಿದೆ. ಈ ಪ್ರದೇಶಗಳಲ್ಲಿ 2017 ರಲ್ಲಿ ಬಿಜೆಪಿ 42 ಸ್ಥಾನಗಳ ಪೈಕಿ 37 ನ್ನು ಗೆದ್ದು ಬಹಳ ಲಾಭವನ್ನು ಗಳಿಸಿತ್ತು ಎಂಬುದು ಗಮನಾರ್ಹ

ಈ ನಡುವೆ ಪಿಲಿಭಿಟ್ ಕ್ಷೇತ್ರದ ಸಂಸದ ವರುಣ್ ಗಾಂಧಿ ಅವರಿಗೆ ರೈತರು ಓಟ್ ಬ್ಯಾಂಕ್ ಆಗಿದ್ದು ಅವರನ್ನು ಎದುರುಹಾಕಿಕೊಳ್ಳದಂತೆ ರೈತರ ಪರ  ಟ್ವೀಟ್ ಹಾಗೂ ಪತ್ರಗಳನ್ನು ಪ್ರಕಟಿಸುತ್ತಿದ್ದಾರೆ. 

"ಲಖಿಂಪುರ್ ಖೇರಿ ಪ್ರಕರಣ ನಿಶ್ಚಿತವಾಗಿ ಉತ್ತರ ಪ್ರದೇಶದ ಮುಂದಿನ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ರಾಜಕೀಯ ವಿಜ್ಞಾನಿ ಪ್ರೊಫೆಸರ್ ಎ.ಕೆ ಮಿಶ್ರಾ" ಹೇಳಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT