ಪಂಜಾಬ್ ಸಿಎಂ ಚನ್ನಿ 
ದೇಶ

ಲಖಿಂಪುರ್ ಹಿಂಸಾಚಾರ ಘಟನೆ: ಅಮಿತ್ ಶಾ'ರನ್ನು ಭೇಟಿ ಮಾಡಲಿರುವ ಪಂಜಾಬ್ ಸಿಎಂ ಛನ್ನಿ

ಪಂಜಾಬ್ ಸಿಎಂ ಚರಣ್ ಜೀತ್ ಸಿಂಗ್ ಛನ್ನಿ ಉತ್ತರ ಪ್ರದೇಶದ ಲಖಿಂಪುರ ಖೇರಿ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅ.05 ರಂದು ಭೇಟಿ ಮಾಡುವ ಸಾಧ್ಯತೆ ಇದೆ.

ನವದೆಹಲಿ: ಪಂಜಾಬ್ ಸಿಎಂ ಚರಣ್ ಜೀತ್ ಸಿಂಗ್ ಛನ್ನಿ ಉತ್ತರ ಪ್ರದೇಶದ ಲಖಿಂಪುರ ಖೇರಿ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅ.05 ರಂದು ಭೇಟಿ ಮಾಡುವ ಸಾಧ್ಯತೆ ಇದೆ. 

ಸಂಜೆ 6 ಗಂಟೆಗೆ ಅಮಿತ್ ಶಾ ಅವರನ್ನು ಪಂಜಾಬ್ ಸಿಎಂ ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಇದಕ್ಕೂ ಮುನ್ನ ಅ.04 ರಂದು ಸಿಎಂ ಛನ್ನಿ ಪಂಜಾಬ್ ರಾಜ್ಯಪಾಲ ಹಾಗೂ ಚಂಡೀಗಢದ ಆಡಳಿತಗಾರ ಬನ್ವಾರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಿ ಲಖಿಂಪುರದ ಸಂತ್ರಸ್ತರಿಗೆ ನ್ಯಾಯ ಒದಗಿಸುವಂತೆ ವಿವರವಾದ ಮನವಿ ಸಲ್ಲಿಸಿದ್ದರು ಹಾಗೂ ತುರ್ತಾಗಿ ಕೃಷಿ ಕಾನೂನನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದ್ದರು. 

ಸಿಎಂ ಛನ್ನಿ ರಾಜ್ಯಪಾಲರಿಗೆ ಸಲ್ಲಿಸಲಾಗಿದ್ದ ಮನವಿಯ ನಕಲನ್ನು ಪ್ರಧಾನಿ ಮೋದಿ ಅವರಿಗೂ ಕಳಿಸಲಾಗಿದೆ.

ಅ.2 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಆದ ಬಳಿಕ ಮೊದಲ ಬಾರಿಗೆ ಛನ್ನಿ ಭೇಟಿ ಮಾಡಿದ್ದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT