ನವಾಬ್ ಮಲ್ಲಿಕ್ 
ದೇಶ

ಹಡಗಿನಲ್ಲಿ ಎನ್ ಸಿಬಿ ದಾಳಿ ನಕಲಿ; ಯಾವುದೇ ಡ್ರಗ್ಸ್ ಪತ್ತೆಯಾಗಿಲ್ಲ: ಎನ್ ಸಿಪಿ

ಅಕ್ಟೋಬರ್ 2 ರಂದು ಮುಂಬೈ ಕರಾವಳಿಯಲ್ಲಿ ಹಡಗೊಂದರ ಮೇಲೆ ನಡೆದ ಎನ್ ಸಿಬಿ ದಾಳಿ ನಕಲಿ, ಅದರೊಳಗೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಾರ್ಟಿ ಬುಧವಾರ ಆರೋಪಿಸಿದೆ.

ಮುಂಬೈ: ಅಕ್ಟೋಬರ್ 2 ರಂದು ಮುಂಬೈ ಕರಾವಳಿಯಲ್ಲಿ ಹಡಗೊಂದರ ಮೇಲೆ ನಡೆದ ಎನ್ ಸಿಬಿ ದಾಳಿ ನಕಲಿ ಎಂದು ಎನ್ ಸಿಪಿ ಆರೋಪಿಸಿದ್ದು, ಹಡಗಿನೊಳಗೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಬುಧವಾರ ಹೇಳಿದೆ.

ದಾಳಿ ವೇಳೆಯಲ್ಲಿ ಎನ್ ಸಿಬಿ ತಂಡದೊಂದಿಗಿದ್ದ ಇಬ್ಬರ ವ್ಯಕ್ತಿಗಳ ಕುರಿತು ಪ್ರಶ್ನಿಸಿದೆ. ಇದರಲ್ಲಿ ಒಬ್ಬ ಬಿಜೆಪಿ ಸದಸ್ಯನಾಗಿದ್ದ ಎಂದು ಆರೋಪಿಸಿದೆ. ಈ ಕುರಿತಂತೆ ಬಿಜೆಪಿ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಶನಿವಾರ ಗೋವಾಕ್ಕೆ ಹೋಗುತ್ತಿದ್ದ ಹಡಗಿನಲ್ಲಿ ಮಾದಕ ವಸ್ತು ವಶ ಆರೋಪದ ನಂತರ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಸೇರಿದಂತೆ ಈವರೆಗೂ 17 ಮಂದಿಯನ್ನು ಎನ್ ಸಿಬಿ ಬಂಧಿಸಿದೆ. 

ಎನ್ ಸಿಬಿ ದಾಳಿ ನಕಲಿ, ಹಡಗಿನಲ್ಲಿ ಅವರು ಯಾವುದೇ ಡ್ರಗ್ಸ್ ಪತ್ತೆ ಮಾಡಿಲ್ಲ ಎಂದು ಎನ್ ಸಿಪಿ ವಕ್ತಾರ ಮತ್ತು ಮಹಾರಾಷ್ಟ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲ್ಲಿಕ್ ಸುದ್ದಿಗಾರರಿಗೆ ತಿಳಿಸಿದರು. 

ದಾಳಿ ಕುರಿತಂತೆ ಅವರು ಕೆಲವೊಂದು ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ. ವಿಡಿಯೋ ಒಂದರಲ್ಲಿ ಆರ್ಯನ್ ಖಾನ್ ಅವರನ್ನು ಬೆಂಗಾವಲು ಮಾಡುತ್ತಿರುವ ವ್ಯಕ್ತಿ ಎನ್‌ಸಿಬಿ ಅಧಿಕಾರಿಯಲ್ಲ ಮತ್ತು ಅವರು ಕೌಲಾಲಂಪುರ್ ಮೂಲದ ಖಾಸಗಿ ಪತ್ತೆದಾರಿ ಎಂಬುದು ಅವರ ಸಾಮಾಜಿಕ ಮಾಧ್ಯಮ ಪ್ರೊಫೈಲ್  ಹೇಳುತ್ತದೆ ಎಂದು ಎನ್ ಸಿಪಿ ಮುಖಂಡ ಆರೋಪಿಸಿದರು. 

ಇದಲ್ಲದೆ, ಇದೇ ಪ್ರಕರಣದಲ್ಲಿ ಬಂಧಿಸಲಾಗಿರುವ ಅರ್ಬಾಜ್ ಮರ್ಚೆಂಟ್ ನ್ನು  ಇಬ್ಬರು ವ್ಯಕ್ತಿಗಳು  ಬೆಂಗಾವಲು ಮಾಡುತ್ತಿರುವುದನ್ನು ನೋಡಬಹುದಾಗಿದೆ. ಇದರಲ್ಲಿ ಒಬ್ಬ ವ್ಯಕ್ತಿ ಬಿಜೆಪಿ ಸದಸ್ಯ,  ಎಂದು ಮಲಿಕ್ ಆರೋಪಿಸಿದ್ದಾರೆ.ಈ ಇಬ್ಬರು ವ್ಯಕ್ತಿಗಳು ಎನ್ ಸಿಬಿ ಅಧಿಕಾರಿಗಳಲ್ಲದಿದ್ದಲ್ಲಿ ಇಬ್ಬರು ಹೈಪ್ರೊಫೈಲ್ ಜನರಿಗೆ ಏಕೆ ಬೆಂಗಾವಲು ಆಗುತ್ತಾರೆ ಎಂದು ಅವರು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT