ರಾಹುಲ್ ಗಾಂಧಿ 
ದೇಶ

ರೈತರ ಮೇಲೆ ‘ವ್ಯವಸ್ಥಿತ ದಾಳಿ’ ನಡೆದಿದ್ದು, ಭಾರತದಲ್ಲಿ ಸರ್ವಾಧಿಕಾರವಿದೆ: ಯೋಗಿ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ

ನಾಲ್ವರು ರೈತರು ಸೇರಿ 8 ಮಂದಿ ಸಾವಿಗೀಡಾದ ಉತ್ತರ ಪ್ರದೇಶದ ಲಖಿಂಪುರ್–ಖೇರಿ ಹಿಂಸಾಚಾರದಲ್ಲಿ ರೈತರ ಮೇಲೆ ‘ವ್ಯವಸ್ಥಿತ ದಾಳಿ’ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಬುಧವಾರ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ನಾಲ್ವರು ರೈತರು ಸೇರಿ 8 ಮಂದಿ ಸಾವಿಗೀಡಾದ ಉತ್ತರ ಪ್ರದೇಶದ ಲಖಿಂಪುರ್–ಖೇರಿ ಹಿಂಸಾಚಾರದಲ್ಲಿ ರೈತರ ಮೇಲೆ ‘ವ್ಯವಸ್ಥಿತ ದಾಳಿ’ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಬುಧವಾರ ವಾಗ್ದಾಳಿ ನಡೆಸಿದ್ದಾರೆ.

ಹಿಂಸಾಚಾರ ನಡೆದ ಲಖಿಂಪುರಕ್ಕೆ ಕಾಂಗ್ರೆಸ್​ ನಿಯೋಗದ ಭೇಟಿಗೆ ಯೋಗಿ ಆದಿತ್ಯನಾಥ್ ಸರ್ಕಾರ ನಿರಾಕರಿಸಿದ ಬೆನ್ನಲ್ಲೇ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ರೈತರನ್ನ ವ್ಯವಸ್ಥಿತವಾಗಿ ಕೊಲೆ ಮಾಡಲಾಗುತ್ತಿದೆ. ಇವತ್ತು ನಾವು ಇಬ್ಬರು ಮುಖ್ಯಮಂತ್ರಿಗಳೊಂದಿಗೆ ಹಿಂಸಾಚಾರ ನಡೆದ ಸ್ಥಳಕ್ಕೆ ಭೇಟಿ ನೀಡಲು ಪ್ರಯತ್ನಿಸುತ್ತಿದ್ದೇವೆ. ಆದರೆ 144 ಸೆಕ್ಷನ್ ಹೇರಿ ಕೇವಲ ಮೂರು ಜನರಿಗೆ ಮಾತ್ರ ಅವಕಾಶ ನೀಡಿದ್ದಾರೆ. ನಾವೀಗ ಅಲ್ಲಿಗೆ ಹೋಗುತ್ತಿದ್ದೇವೆ. ನಾವು ಅಲ್ಲಿಗೆ ಹೋಗಿ ರೈತರಿಗೆ ಬೆಂಬಲ ಸೂಚಿಸುತ್ತೇವೆ. ಯಾಕೆ ಉತ್ತರ ಪ್ರದೇಶ ಸರ್ಕಾರ, ಕಾಂಗ್ರೆಸ್​ ನಿಯೋಗ ಅಲ್ಲಿಗೆ ಹೋಗಲು ಬಿಡುತ್ತಿಲ್ಲ.

ನಿನ್ನೆಯಷ್ಟೇ ಪ್ರಧಾನಿ ಮೋದಿಯವರು ಲಖನೌಗೆ ಭೇಟಿ ನೀಡಿದ್ದರು. ಆದರೆ, ಲಖಿಂಪುರ್ ಖೇರಿಗೆ ಭೇಟಿ ನೀಡಲಿಲ್ಲ. ರೈತರ ಮೇಲೆ ನಡೆದಿರುವ ವ್ಯವಸ್ಥಿತ ದಾಳಿ ಇದಾಗಿದೆ. ದೇಶದಲ್ಲಿ ಸರ್ವಾಧಿಕಾರವಿದೆ. ಉತ್ತರಪ್ರದೇಶಕ್ಕೆ ರಾಜಕೀಯ ನಾಯಕರು ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ. 

ಇದೇ ವೇಳೆ ಪ್ರಿಯಾಂಕ ಗಾಂಧಿ ಬಂಧಿಸಿರುವ ಕುರಿತು ಮಾತನಾಡಿ..ರೈತರ ಬಗ್ಗೆ ಧ್ವನಿ ಎತ್ತಿದ ಪ್ರಿಯಾಂಕರನ್ನೂ ಬಂಧಿಸಿದ್ದಾರೆ. ಅವರು ರೈತರ ಸಮಸ್ಯೆಯ ಪ್ರಶ್ನೆಗಳಿಗೆ ಮಾತ್ರ ಪ್ರತಿಕ್ರಿಯಿಸುತ್ತಾರೆ. ನಾವು ಮ್ಯಾನ್​ ಹ್ಯಾಂಡ್ಲಿಂಗ್​ನಿಂದ ಪ್ರಭಾವಿತರಾಗಿಲ್ಲ. ಇಲ್ಲಿ ರೈತರನ್ನು ಕೊಲ್ಲಲಾಗುತ್ತಿದೆ. ದೇಶದಲ್ಲಿ ಸರ್ವಾಧಿಕಾರಿ ಆಡಳಿತ ಇದೆ ಎಂದು ಮೋದಿ ವಿರುದ್ಧ ಕಿಡಿಕಾರಿದ್ದಾರೆ. 

ಈ ನಡುವೆ ಲಖನೌ ಪೊಲೀಸ್ ಆಯುಕ್ತರು ಹೇಳಿಕೆ ನೀಡಿ, ಲಖಿಂಪುರ್ ಖೇರಿಗೆ ಭೇಟಿ ನೀಡಲು ರಾಹುಲ್ ಗಾಂಧಿಯವರಿಗೆ ಸರ್ಕಾರ ಅವಕಾಶ ನೀಡಿಲ್ಲ. ಲಖನೌಗೆ ಅವರು ಬಂದಿದ್ದೇ ಆಧರೆ, ವಿಮಾನ ನಿಲ್ದಾಣದಲ್ಲಿಯೇ ಲಖಿಂಪುರ್ ಖೇರಿ ಹಾಗೂ ಸಿತಾಪುರಕ್ಕೆ ಭೇಟಿ ನೀಡದಂತೆ ಮನವಿ ಮಾಡಿಕೊಳ್ಳಲಾಗುತ್ತದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ರಾಹುಲ್ ಗಾಂಧಿಯವರನ್ನು ತಡೆಯುವಂತೆ ಲಖಿಂಪುರ್ ಖೇರಿ ಹಾಗೂ ಸೀತಾಪುರದ ಜಿಲ್ಲಾ ಮ್ಯಾಜಿಸ್ಟ್ರೇಟ್ ಹಾಗೂ ಎಸ್'ಪಿ ಮನವಿ ಮಾಡಿಕೊಂಡಿದ್ದಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT