ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಲಖೀಂಪುರ ಘಟನೆ ಖಂಡಿಸಿ ಸೋಮವಾರ ಪ್ರತಿಭಟನೆ ನಡೆಸಿದ ದೃಶ್ಯ 
ದೇಶ

ಲಖೀಂಪುರ ರೈತರ ಹತ್ಯೆ ಪ್ರಕರಣ: ಎರಡನೇ ಮರಣೋತ್ತರ ಪರೀಕ್ಷೆ ನಂತರ ಮೃತ ರೈತನ ಶವಸಂಸ್ಕಾರ

ಮೃತರ ದೇಹದಲ್ಲಿ ಗುಂಡು ಹಾರಿಸಿರುವ ಗುರುತುಗಳಿವೆ. ಈ ಬಗ್ಗೆ ಮರಣೋತ್ತರ ವರದಿಯಲ್ಲಿ ಉಲ್ಲೇಖವಿಲ್ಲ. ಎರಡನೇ ಬಾರಿಗೆ ಮರಣೋತ್ತರ ಪರೀಕ್ಷೆಗೆ ಅನುಮತಿ ನೀಡುವವರೆಗೆ ಶವಸಂಸ್ಕಾರ ಮಾಡುವುದಿಲ್ಲವೆಂದು ಕುಟುಂಬಸ್ಥರು ಹಠ ಹಿಡಿದಿದ್ದರು.

ಲಕ್ನೋ: ದೇಶದ ಗಮನವನ್ನು ಸೆಳೆದಿರುವ ಲಖೀಂಪುರ ರೈತರ ಹತ್ಯೆ ಪ್ರಕರಣದಲ್ಲಿ ಮೃತಪಟ್ಟಿದ್ದ ರೈತ ಗುರುವಿಂದರ್ ಸಿಂಗ್ ಅಂತ್ಯಸಂಸ್ಕಾರವನ್ನು ಕಡೆಗೂ ಬುಧವಾರ ಮುಂಜಾನೆ ನೆರವೇರಿಸಲಾಗಿದೆ. ಅದಕ್ಕೂ ಮುನ್ನ ಮೃತರ ಕುಟುಂಬಸ್ಥರು ಎರಡನೇ ಬಾರಿಗೆ ಮರಣೋತ್ತರ ಪರೀಕ್ಷೆ ನಡೆಸುವಂತೆ ಒತ್ತಾಯಿಸಿದ್ದರು.

ಮೊದಲ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಹಲವು ಮಾಹಿತಿಗಳನ್ನು ನಮೂದಿಸಲಾಗಿಲ್ಲ. ಮೃತರ ದೇಹದಲ್ಲಿ ಗುಂಡು ಹಾರಿಸಿರುವ ಗುರುತುಗಳಿವೆ. ಈ ಬಗ್ಗೆ ಮರಣೋತ್ತರ ವರದಿಯಲ್ಲಿ ಉಲ್ಲೇಖವಿಲ್ಲ. ಎಂದು ಅವರು ದೂರಿದ್ದರು. ರೈತ ಮುಖಂಡರಾದ ರಾಕೇಶ್ ಟಿಕಾಯಿತ್ ಕುಟುಂಬಸ್ಥರ ಬೆಂಬಲಕ್ಕೆ ನಿಂತಿದ್ದರು. 

ಎರಡನೇ ಬಾರಿಗೆ ಮರಣೋತ್ತರ ಪರೀಕ್ಷೆಗೆ ಅನುಮತಿ ನೀಡುವವರೆಗೆ ಶವಸಂಸ್ಕಾರ ಮಾಡುವುದಿಲ್ಲವೆಂದು ಕುಟುಂಬಸ್ಥರು ಹಠ ಹಿಡಿದಿದ್ದರಿಂದ ನಂತರ ಅನುಮತಿ ನೀಡಲಾಗಿತ್ತು. ಎರಡನೇ ಮರಣೋತ್ತರ ಪರೀಕ್ಷೆಯನ್ನು ಸಂಪೂರ್ಣ ವಿಡಿಯೊ ರೆಕಾರ್ಡಿಂಗ್ ಮಾಡಲಾಗಿದೆ. 

ಮರಣೋತ್ತರ ಪರೀಕ್ಷೆ ನಡೆದ ಬಳಿಕ ಮೃತ ರೈತನ ಶವಸಂಸ್ಕಾರವನ್ನು ನಡೆಸಲಾಗಿದೆ. ಘಟನೆಯಲ್ಲಿ ಮೃತಪಟ್ಟಿದ್ದ ಉಳಿದ ಮೂವರು ರೈತರ ಶವಸಂಸ್ಕಾರವನ್ನು ಮಂಗಳವಾರವೇ ಮಾಡಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT