ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಲಖೀಂಪುರ ಘಟನೆ ಖಂಡಿಸಿ ಸೋಮವಾರ ಪ್ರತಿಭಟನೆ ನಡೆಸಿದ ದೃಶ್ಯ 
ದೇಶ

ಲಖೀಂಪುರ ರೈತರ ಹತ್ಯೆ ಪ್ರಕರಣ: ಎರಡನೇ ಮರಣೋತ್ತರ ಪರೀಕ್ಷೆ ನಂತರ ಮೃತ ರೈತನ ಶವಸಂಸ್ಕಾರ

ಮೃತರ ದೇಹದಲ್ಲಿ ಗುಂಡು ಹಾರಿಸಿರುವ ಗುರುತುಗಳಿವೆ. ಈ ಬಗ್ಗೆ ಮರಣೋತ್ತರ ವರದಿಯಲ್ಲಿ ಉಲ್ಲೇಖವಿಲ್ಲ. ಎರಡನೇ ಬಾರಿಗೆ ಮರಣೋತ್ತರ ಪರೀಕ್ಷೆಗೆ ಅನುಮತಿ ನೀಡುವವರೆಗೆ ಶವಸಂಸ್ಕಾರ ಮಾಡುವುದಿಲ್ಲವೆಂದು ಕುಟುಂಬಸ್ಥರು ಹಠ ಹಿಡಿದಿದ್ದರು.

ಲಕ್ನೋ: ದೇಶದ ಗಮನವನ್ನು ಸೆಳೆದಿರುವ ಲಖೀಂಪುರ ರೈತರ ಹತ್ಯೆ ಪ್ರಕರಣದಲ್ಲಿ ಮೃತಪಟ್ಟಿದ್ದ ರೈತ ಗುರುವಿಂದರ್ ಸಿಂಗ್ ಅಂತ್ಯಸಂಸ್ಕಾರವನ್ನು ಕಡೆಗೂ ಬುಧವಾರ ಮುಂಜಾನೆ ನೆರವೇರಿಸಲಾಗಿದೆ. ಅದಕ್ಕೂ ಮುನ್ನ ಮೃತರ ಕುಟುಂಬಸ್ಥರು ಎರಡನೇ ಬಾರಿಗೆ ಮರಣೋತ್ತರ ಪರೀಕ್ಷೆ ನಡೆಸುವಂತೆ ಒತ್ತಾಯಿಸಿದ್ದರು.

ಮೊದಲ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಹಲವು ಮಾಹಿತಿಗಳನ್ನು ನಮೂದಿಸಲಾಗಿಲ್ಲ. ಮೃತರ ದೇಹದಲ್ಲಿ ಗುಂಡು ಹಾರಿಸಿರುವ ಗುರುತುಗಳಿವೆ. ಈ ಬಗ್ಗೆ ಮರಣೋತ್ತರ ವರದಿಯಲ್ಲಿ ಉಲ್ಲೇಖವಿಲ್ಲ. ಎಂದು ಅವರು ದೂರಿದ್ದರು. ರೈತ ಮುಖಂಡರಾದ ರಾಕೇಶ್ ಟಿಕಾಯಿತ್ ಕುಟುಂಬಸ್ಥರ ಬೆಂಬಲಕ್ಕೆ ನಿಂತಿದ್ದರು. 

ಎರಡನೇ ಬಾರಿಗೆ ಮರಣೋತ್ತರ ಪರೀಕ್ಷೆಗೆ ಅನುಮತಿ ನೀಡುವವರೆಗೆ ಶವಸಂಸ್ಕಾರ ಮಾಡುವುದಿಲ್ಲವೆಂದು ಕುಟುಂಬಸ್ಥರು ಹಠ ಹಿಡಿದಿದ್ದರಿಂದ ನಂತರ ಅನುಮತಿ ನೀಡಲಾಗಿತ್ತು. ಎರಡನೇ ಮರಣೋತ್ತರ ಪರೀಕ್ಷೆಯನ್ನು ಸಂಪೂರ್ಣ ವಿಡಿಯೊ ರೆಕಾರ್ಡಿಂಗ್ ಮಾಡಲಾಗಿದೆ. 

ಮರಣೋತ್ತರ ಪರೀಕ್ಷೆ ನಡೆದ ಬಳಿಕ ಮೃತ ರೈತನ ಶವಸಂಸ್ಕಾರವನ್ನು ನಡೆಸಲಾಗಿದೆ. ಘಟನೆಯಲ್ಲಿ ಮೃತಪಟ್ಟಿದ್ದ ಉಳಿದ ಮೂವರು ರೈತರ ಶವಸಂಸ್ಕಾರವನ್ನು ಮಂಗಳವಾರವೇ ಮಾಡಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?