ಅಜಯ್ ತೇನಿ 
ದೇಶ

ಲಖೀಂಪುರ್ ಖೇರ್ ಹಿಂಸಾಚಾರ ನಡೆದಾಗ ನನ್ನ ಮಗ ಕಾರಿನಲ್ಲಿ ಇರಲಿಲ್ಲ, ಚಾಲಕನ ನಿಯಂತ್ರಣ ತಪ್ಪಿ ಕೆಲವರ ಮೇಲೆ ಹರಿಯಿತು: ಕೇಂದ್ರ ಸಚಿವ ಅಜಯ್ ತೇನಿ

ಲಖೀಂಪುರ್ ಖೇರ್ ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆ ವ್ಯವಹಾರಗಳ ರಾಜ್ಯ ಸಚಿವ ಅಜಯ್ ತೇನಿ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಲಖೀಂಪುರ್ ಖೇರ್: ಲಖೀಂಪುರ್ ಖೇರ್ ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆ ವ್ಯವಹಾರಗಳ ರಾಜ್ಯ ಸಚಿವ ಅಜಯ್ ತೇನಿ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಘಟನೆ ಕುರಿತು ಮಾತನಾಡಿರುವ ಅವರು, ಘಟನೆ ನಡೆಯುವಾಗ ನನ್ನ ಮಗ ಕಾರಿನಲ್ಲಿ ಇರಲಿಲ್ಲ. ಕಾರಿನ ಮೇಲೆ ದಾಳಿ ನಡೆದ ನಂತರ ಚಾಲಕನಿಗೆ ಗಾಯವಾಗಿತ್ತು. ಇದರಿಂದ ಅವರು ನಿಯಂತ್ರಣ ತಪ್ಪಿ ಅಲ್ಲಿದ್ದ ಕೆಲವು ಜನರ ಮೇಲೆ ಕಾರು ಹರಿಯಿತು. ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಬಗ್ಗೆ ನಾನು ಅನುಕಂಪ ಸೂಚಿಸಿದ್ದೇನೆ. ಈ ಬಗ್ಗೆ ನಿಸ್ಪಕ್ಷಪಾತ ತನಿಖೆ ನಡೆಯಬೇಕು ಎಂದಿದ್ದಾರೆ.

ಇನ್ನು ಪಕ್ಷದ ಹೈಕಮಾಂಡ್ ನನಗೆ ಬರಲು ಹೇಳಿಲ್ಲ. ಇಂದು ರಾತ್ರಿ ಅಥವಾ ನಾಳೆ ನಾನು ಕೆಲವು ಕೆಲಸಗಳ ಮೇರೆ ದೆಹಲಿಗೆ ಹೋಗುತ್ತಿದ್ದೇನೆ ಎಂದು ಸುದ್ದಿಗಾರರು ಪಕ್ಷದ ಹೈಕಮಾಂಡ್ ಕರೆದಿದ್ದಾರೆಯೇ ಎಂದು ಕೇಳಿದ್ದಕ್ಕೆ ಉತ್ತರಿಸಿದ್ದಾರೆ. 

ಕಾರ್ಯಕ್ರಮವೊಂದರಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿರುವ ಆಡಿಯೊದ ಭಾಗವನ್ನು ಮಾಧ್ಯಮಗಳಲ್ಲಿ ಬಿತ್ತರಿಸಲಾಗುತ್ತಿದೆ. ರೈತರ ಜೊತೆಗೆ ಲಖೀಂಪುರ್ ಖೇರ್ ನಲ್ಲಿ ಉಪಸ್ಥಿತರಿದ್ದ ದುಷ್ಕರ್ಮಿಗಳು ಕೆಲವರು ಈ ಹಿಂಸಾಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಹಿಂಸಾಚಾರ ನಡೆದಲ್ಲಿ ಕೆಲವು ಖಲಿಸ್ತಾನಿಯರು ಕೂಡ ಇದ್ದರು. ಬಿಂದ್ರನ್ ವಾಲೆ ಪೋಸ್ಟರ್ ಗಳನ್ನು ನೇತಾಡಿಸಲಾಗಿತ್ತು ಎಂದು ಅಜಯ್ ತೇನಿ ಪ್ರತಿಕ್ರಿಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT