ಬಿಜೆಪಿ ಶಾಸಕನಿಂದ ಕೇಶಮುಂಡನ 
ದೇಶ

ಬಿಜೆಪಿ ಸರ್ಕಾರದ ದುರಾಡಳಿತದ ಪ್ರಾಯಶ್ಚಿತ್ತಕ್ಕಾಗಿ ಸ್ವಪಕ್ಷ ಶಾಸಕನಿಂದಲೇ ಕೇಶಮುಂಡನ!

ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ 'ತಪ್ಪುಗಳಿಗೆ ಪ್ರಾಯಶ್ಚಿತ್ತವಾಗಿ' ತ್ರಿಪುರ ರಾಜ್ಯದ ಸುರ್ಮಾ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ಹಿರಿಯ ಮುಖಂಡ ಆಶಿಶ್ ದಾಸ್ ಅವರು ಕೇಶಮುಂಡನ ಮಾಡಿಸಿಕೊಂಡಿದ್ದಾರೆ. 

ಗುವಾಹಟಿ: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ 'ತಪ್ಪುಗಳಿಗೆ ಪ್ರಾಯಶ್ಚಿತ್ತವಾಗಿ' ತ್ರಿಪುರ ರಾಜ್ಯದ ಸುರ್ಮಾ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ಹಿರಿಯ ಮುಖಂಡ ಆಶಿಶ್ ದಾಸ್ ಅವರು ಕೇಶಮುಂಡನ ಮಾಡಿಸಿಕೊಂಡಿದ್ದಾರೆ. 

ತ್ರಿಪುರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ರಾಜಕೀಯ ಅರಾಜಕತೆ ಮತ್ತು ಗದ್ದಲವನ್ನು ಉಂಟುಮಾಡುತ್ತಿದೆ. ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಜನರು ಅಸಂತುಷ್ಟರಾಗಿದ್ದಾರೆ. ಹೀಗಾಗಿ ತಾವು ಪಕ್ಷವನ್ನು ತೊರೆಯಲು ನಿರ್ಧರಿಸಿರುವುದಾಗಿ ಹೇಳಿದ್ದು,  ಕೋಲ್ಕತಾದ ಪ್ರಸಿದ್ಧ ಕಾಳಿಘಾಟ್ ದೇವಸ್ಥಾನದಲ್ಲಿ ಯಜ್ಞ ನಡೆಸಿದ್ದಾರೆ.

ಸ್ವಪಕ್ಷೀಯರ ವಿರುದ್ಧವೇ ಸತತ ವಾಗ್ದಾಳಿ ನಡೆಸುತ್ತಿರುವ ಆಶಿಶ್ ದಾಸ್, ಕಳೆದ ಎರಡು ವರ್ಷಗಳಿಂದ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇಬ್ ವಿರುದ್ಧ ತೀಕ್ಷ್ಣ ಟೀಕೆಗಳನ್ನು ಮಾಡಿದ್ದರು. ಜತೆಗೆ ಪ್ರಧಾನಿ ಹುದ್ದೆಗೆ ಮಮತಾ ಬ್ಯಾನರ್ಜಿ ಸೂಕ್ತ ವ್ಯಕ್ತಿ ಹೇಳಿದ್ದರು. 

ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಪ್ರಾಯಶ್ಚಿತ್ತವಾಗಿ ನಾನು ಕೇಶಮುಂಡನ ಮಾಡಿಸಿಕೊಳ್ಳುತ್ತಿದ್ದೇನೆ. ನಾನು ಪಕ್ಷವನ್ನು ತ್ಯಜಿಸಲು ಮತ್ತು ಮುಂದಿನ ಹೆಜ್ಜೆ ಇರಿಸಲು ನಿರ್ಧರಿಸಿದ್ದೇನೆ. ತ್ರಿಪುರ ಕಂಡ ಬಿಜೆಪಿ ನೇತೃತ್ವದ ಸರ್ಕಾರದ ಅರಾಜಕತೆ ಹಾಗೂ ದುರಾಡಳಿತವು ನನಗೆ ನೋವನ್ನುಂಟುಮಾಡಿದೆ. ಹೀಗಾಗಿ ಕಳೆದ ಎರಡು ವರ್ಷಗಳಿಂದ ನಾನು ಅವರ ಎಲ್ಲ ತಪ್ಪುಗಳನ್ನು ಟೀಕಿಸುತ್ತಾ ಬಂದಿದ್ದೇನೆ ಮತ್ತು ಪಕ್ಷ ಹಾಗೂ ರಾಜಕೀಯದಾಚೆ ಜನರಿಗಾಗಿ ಕೆಲಸ ಮಾಡುತ್ತಿದ್ದೇನೆ' ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT