ಗುರ್ಮೀತ್ ರಾಮ್ ರಹೀಂ 
ದೇಶ

ರಂಜಿತ್ ಸಿಂಗ್ ಹತ್ಯೆ ಕೇಸಿನಲ್ಲಿ ಡೇರಾ ಸಚ್ಚಾ ಸೌಧದ ಗುರ್ಮೀತ್ ರಾಮ್ ರಹೀಂ ಸೇರಿ ಐವರು ಅಪರಾಧಿಗಳು: ಸಿಬಿಐ ನ್ಯಾಯಾಲಯ ತೀರ್ಪು

ಡೇರಾ ಸಚ್ಚಾ ಸೌದಾದ ಮಾಜಿ ವ್ಯವಸ್ಥಾಪಕ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಮತ್ತು ಇತರ ನಾಲ್ವರಿಗೆ ಹರ್ಯಾಣದ ಪಂಚ್ ಕುಲದಲ್ಲಿರುವ ವಿಶೇಷ ಸಿಬಿಐ ನ್ಯಾಯಾಲಯ ಅಪರಾಧಿಗಳೆಂದು ತೀರ್ಪು ನೀಡಿದೆ.

ಪಂಚ್ ಕುಲ(ಹರ್ಯಾಣ): ಡೇರಾ ಸಚ್ಚಾ ಸೌದಾದ ಮಾಜಿ ವ್ಯವಸ್ಥಾಪಕ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಮತ್ತು ಇತರ ನಾಲ್ವರಿಗೆ ಹರ್ಯಾಣದ ಪಂಚ್ ಕುಲದಲ್ಲಿರುವ ವಿಶೇಷ ಸಿಬಿಐ ನ್ಯಾಯಾಲಯ ಅಪರಾಧಿಗಳೆಂದು ತೀರ್ಪು ನೀಡಿದೆ.

ಶಿಕ್ಷೆಯ ಪ್ರಮಾಣ ಇದೇ 12ರಂದು ನ್ಯಾಯಾಲಯ ಪ್ರಕಟಿಸಲಿದೆ. ಡೇರಾ ಸಚ್ಚಾ ಸೌದಾದ ಆವರಣದಲ್ಲಿ 2002ರಲ್ಲಿ ರಂಜಿತ್ ಸಿಂಗ್ ಹತ್ಯೆಯಾಗಿತ್ತು.

ತಮ್ಮ ಇಬ್ಬರು ಮಹಿಳಾ ಅನುಯಾಯಿಗಳು ಮತ್ತು ಪತ್ರಕರ್ತರೊಬ್ಬರ ಹತ್ಯೆ ಕೇಸಿಗೆ ಸಂಬಂಧಪಟ್ಟಂತೆ 2017ರ ಆಗಸ್ಟ್ ನಲ್ಲಿ ಡೇರಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಗೆ 20 ವರ್ಷಗಳ ಜೈಲು ಶಿಕ್ಷೆಯನ್ನು ಪ್ರಕಟಿಸಲಾಗಿತ್ತು.

ರಹೀಮ್ ಜೊತೆಗೆ ಪ್ರಕರಣದ ಇತರ ಆರೋಪಿಗಳು ಅವತಾರ್ ಸಿಂಗ್, ಡೇರಾ ಮ್ಯಾನೇಜರ್ ಕೃಷ್ಣ ಲಾಲ್ ಮತ್ತು ಶೂಟರ್ ಜಸ್ಬೀರ್ ಸಿಂಗ್ ಮತ್ತು ಸಬ್ದಿಲ್ ಸಿಂಗ್ ಅವರು ಸಹ ಅಪರಾಧಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ಮತ್ತೊಬ್ಬ ಆರೋಪಿ ಇಂದರ್ ಸೇನ್ ಕಳೆದ ವರ್ಷ ಅಕ್ಟೋಬರ್ ನಲ್ಲಿ ನಿಧನ ಹೊಂದಿದ್ದನು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT