ಸೇನಾ ಮುಖ್ಯಸ್ಥ ಎಂಎಂ ನರಾವಣೆ 
ದೇಶ

ಅಫ್ಘಾನ್ ಪರಿಸ್ಥಿತಿ ಸ್ಥಿರವಾದಲ್ಲಿ ಅಲ್ಲಿನ ಉಗ್ರರಿಂದ ಜಮ್ಮು-ಕಾಶ್ಮೀರ ಪ್ರವೇಶಕ್ಕೆ ಯತ್ನ: ಸೇನಾ ಮುಖ್ಯಸ್ಥ

ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಸ್ಥಿರವಾದಲ್ಲಿ ಅಲ್ಲಿನ ಉಗ್ರರು ಜಮ್ಮು-ಕಾಶ್ಮೀರಕ್ಕೆ ಪ್ರವೇಶ ಮಾಡುವುದಕ್ಕೆ ಯತ್ನಿಸುತ್ತಾರೆ ಎಂದು ಸೇನಾ ಮುಖ್ಯಸ್ಥ ಎಂಎಂ ನರವಾಣೆ ಹೇಳಿದ್ದಾರೆ. 

ನವದೆಹಲಿ: ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಸ್ಥಿರವಾದಲ್ಲಿ ಅಲ್ಲಿನ ಉಗ್ರರು ಜಮ್ಮು-ಕಾಶ್ಮೀರಕ್ಕೆ ಪ್ರವೇಶ ಮಾಡುವುದಕ್ಕೆ ಯತ್ನಿಸುತ್ತಾರೆ ಎಂದು ಸೇನಾ ಮುಖ್ಯಸ್ಥ ಎಂಎಂ ನರವಾಣೆ ಹೇಳಿದ್ದಾರೆ. 

ಎರಡು ದಶಕಗಳ ಹಿಂದೆ ತಾಲೀಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರದಲ್ಲಿದ್ದಾಗ ಇಂಥಹದ್ದೇ ಘಟನೆಗಳನ್ನು ಉಲ್ಲೇಖಿಸಿ ಎಂಎಂ ನರವಾಣೆ ಹೇಳಿಕೆ ನೀಡಿದ್ದಾರೆ. 

ಇದೇ ವೇಳೆ ಭಾರತೀಯ ಪಡೆಗಳ ಬಳಿ ಒಳನುಸುಳುವಿಕೆಯನ್ನು ತಡೆಯುವ ಬಲಿಷ್ಠ ವ್ಯವಸ್ಥೆ ಇರುವುದರಿಂದ ಸೇನಾ ಪಡೆಗಳು ಯಾವುದೇ ಪರಿಸ್ಥಿತಿಯನ್ನು ಎದುರಿಸುವುದಕ್ಕೂ ಸಿದ್ಧವಿದೆ ಎನ್ನುತ್ತಾರೆ ಎಂಎಂ ನರವಾಣೆ

ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ನಾಗರಿಕರ ಹತ್ಯೆಗಳಿಗೂ ಅಫ್ಘಾನಿಸ್ತಾನದಲ್ಲಿ ತಾಲೀಬಾನ್ ಆಡಳಿತ ಅಸ್ತಿತ್ವಕ್ಕೆ ಬಂದಿರುವುದಕ್ಕೂ ಏನಾದರೂ ಸಂಬಂಧವಿದೆಯೇ ಎಂಬ ಬಗ್ಗೆ ಇಂಡಿಯಾ ಟುಡೆ ಕಾನ್ಕ್ಲೇವ್ ನಲ್ಲಿ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇವೆರಡಕ್ಕೂ ನಂಟು ಇರಬಹುದು ಎಂದು ಹೇಳುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

"ಖಂಡಿತವಾಗಿಯೂ ಜಮ್ಮು-ಕಾಶ್ಮೀರದಲ್ಲಿ ಚಟುವಟಿಕೆಗಳು ಏರಿಕೆಯಾಗಿದೆ. ಆದರೆ ಅದಕ್ಕೂ ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆಗೂ ಸಂಬಂಧವಿದೆ ಎಂಬ ಬಗ್ಗೆ ನಿಖರವಾಗಿ ಹೇಳಲು ಸಾಧ್ಯವಿಲ್ಲ, ಆದರೆ ಅಫ್ಘಾನಿಸ್ತಾನದಲ್ಲಿ ಈ ಹಿಂದೆ ತಾಲೀಬಾನ್ ಆಡಳಿತವಿದ್ದಾಗ ಅಫ್ಘಾನ್ ಮೂಲದ ಭಯೋತ್ಪಾದಕರು ಜಮ್ಮು-ಕಾಶ್ಮೀರದಲ್ಲಿದ್ದರು ಎಂಬುದು ಇತಿಹಾಸದಿಂದ ನಾವು ತಿಳಿಯಬಹುದು ಎಂದು ನರಾವಣೆ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT