ರಾಹುಲ್ ಗಾಂಧಿ 
ದೇಶ

ರೈತರ ಹತ್ಯೆ, ಹಣದುಬ್ಬರ, ನಿರುದ್ಯೋಗದ ಬಗ್ಗೆ ಮೋದಿ ಮೌನ: ರಾಹುಲ್ 

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಲಖೀಂಪುರ್ ಖೇರಿಯಲ್ಲಿ ಬಿಜೆಪಿ ಕಾರ್ಯಕರ್ತರು, ರೈತರ ಹತ್ಯೆ, ಹಣದುಬ್ಬರ ಹಾಗೂ ತೈಲ ಬೆಲೆ ಏರಿಕೆ, ನಿರುದ್ಯೋಗ ಬಗ್ಗೆ  ಪ್ರಧಾನಿ ಮಾತನಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಲಖೀಂಪುರ್ ಖೇರಿಯಲ್ಲಿ ಬಿಜೆಪಿ ಕಾರ್ಯಕರ್ತರು, ರೈತರ ಹತ್ಯೆ, ಹಣದುಬ್ಬರ ಹಾಗೂ ತೈಲ ಬೆಲೆ ಏರಿಕೆ, ನಿರುದ್ಯೋಗ ಬಗ್ಗೆ  ಪ್ರಧಾನಿ ಮಾತನಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. 

ಹಣದುಬ್ಬರ, ತೈಲ ಬೆಲೆ, ನಿರುದ್ಯೋಗ ಮತ್ತು ರೈತರು, ಬಿಜೆಪಿ ಹತ್ಯೆ ಕುರಿತು ಮೌನವಾಗಿರುವ ಪ್ರಧಾನಿ, ಕ್ಯಾಮೆರಾ ಮತ್ತು ಫೋಟೋ ಆಪ್‌ಗಳ ಕೊರತೆ, ನಿಜವಾದ ಟೀಕೆ, ಸ್ನೇಹಿತರ ಪ್ರಶ್ನೆಗಳಿಗೆ ವೈಲೆಂಟ್ ಆಗುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಲಖೀಂಪುರ್ ಖೇರಿಯಲ್ಲಿ ಅಕ್ಟೋಬರ್ 3 ರಂದು ಕೇಂದ್ರ ಗೃಹ ವ್ಯವಹಾರಗಳ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ಹರಿಸಿದ್ದಾಗಿ ರೈತರು ಆರೋಪಿಸುತ್ತಿದ್ದಾರೆ. ಆದಾಗ್ಯೂ, ರೈತರ ಆರೋಪವನ್ನು ತಳ್ಳಿ ಹಾಕಿರುವ ಆಶಿಶ್ ಮಿಶ್ರಾ, ತಾನು ಅಲ್ಲಿ ಇರಲಿಲ್ಲ ಎಂದು ಹೇಳುತ್ತಿದ್ದಾರೆ.

ಈ ಮಧ್ಯೆ, ಸತತ ಆರನೇ ದಿನವಾದ ಭಾನುವಾರ ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಳವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT