ಎನ್ ಸಿಬಿ 
ದೇಶ

ಶಾರೂಖ್ ಖಾನ್ ವಾಹನ ಚಾಲಕನ ಹೇಳಿಕೆ ಪಡೆದ ಎನ್ ಸಿಬಿ: ಡ್ರಗ್ ಕೇಸ್ ನಲ್ಲಿ ಮತ್ತೋರ್ವನ ಬಂಧನ 

ನಾರ್ಕೊಟಿಕ್ಸ್ ನಿಯಂತ್ರಣ ಬ್ಯುರೋ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್ ಖಾನ್ ಅವರ ಚಾಲಕನ ಹೇಳಿಕೆಯನ್ನು ದಾಖಲಿಸಿಕೊಂಡಿದೆ. 

ನಾರ್ಕೊಟಿಕ್ಸ್ ನಿಯಂತ್ರಣ ಬ್ಯುರೋ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್ ಖಾನ್ ಅವರ ಚಾಲಕನ ಹೇಳಿಕೆಯನ್ನು ದಾಖಲಿಸಿಕೊಂಡಿದೆ. 

ಮುಂಬೈ ಕೋಸ್ಟ್ ನಲ್ಲಿ ಕ್ರೂಸ್ ಶಿಪ್ ನಲ್ಲಿ ಡ್ರಗ್ಸ್ ಗೆ ಸಂಬಂಧಿಸಿದಂತೆ ಎನ್ ಸಿಬಿ ದಾಳಿ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಸಿಬಿ ಶಾರೂಖ್ ಖಾನ್ ಅವರ ಚಾಲಕನ ಹೇಳಿಕೆಯನ್ನು ಪಡೆದುಕೊಂಡಿದೆ. 

ಮುಂಬೈ ನಲ್ಲಿರುವ ಎನ್ ಸಿಬಿ ಕಚೇರಿಗೆ ತೆರಳಿದ ಶಾರೂಖ್ ಚಾಲಕ ಆಂಟಿ ಡ್ರಗ್ಸ್ ಸಂಸ್ಥೆ ಎದುರು ಹೇಳಿಕೆ ನೀಡಿದ್ದಾರೆ. ಬಳಿಕ ಆತನನ್ನು ಬಿಡುಗಡೆ ಮಾಡಿದ್ದಾರೆ. 

ಎನ್ ಸಿಬಿ ಸಿಬ್ಬಂದಿಗಳು ಶನಿವಾರದಂದು ರಾತ್ರಿ ಮುಂಬೈ ನ ಉಪನಗರಗಳಲ್ಲಿ ದಾಳಿ ನಡೆಸಿ ಡ್ರಗ್ಸ್ ವಶಕ್ಕೆ ಪಡೆದು ಶಿವರಾಜ್ ರಾಮ್ ದಾಸ್ ಎಂಬಾತನನ್ನು ಬಂಧಿಸಲಾಗಿತ್ತು. ಡ್ರಗ್ಸ್ ಪ್ರಕರಣದಲ್ಲಿ ಶಾರೂಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರೂ ಸೇರಿ 19 ಮಂದಿಯನ್ನು ಎನ್ ಸಿಬಿ ವಶಕ್ಕೆ ಪಡೆದಿದೆ. 

ಮುಂಬೈ ನ ಕಡಲ ತೀರದಲ್ಲಿ ಕ್ರೂಸ್ ಪಾರ್ಟಿಯ ವೇಳೆ ಕಳೆದ ವಾರ ಎನ್ ಸಿಬಿ ದಾಳಿ ನಡೆಸಿ ಆರ್ಯನ್ ಖಾನ್ ನ್ನು ವಶಕ್ಕೆ ಪಡೆದಿತ್ತು. ಆರ್ಯನ್ ಖಾನ್ ಗೆ ಸದ್ಯ ಜಾಮೀನು ನಿರಾಕರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT