ಲಖೀಂಪುರ್ ಹಿಂಸಾಚಾರದಲ್ಲಿ ಮೃತಪಟ್ಟವರ ಮೃತದೇಹಗಳ ಅಂತ್ಯಸಂಸ್ಕಾರದ ಚಿತ್ರ 
ದೇಶ

ಮಿಶ್ರಾ ಸಚಿವರಾಗಿರುವವರೆಗೆ ಲಖೀಂಪುರ್ ಹಿಂಸಾಚಾರದಲ್ಲಿ ನ್ಯಾಯ ದೊರೆಯುವ ವಿಶ್ವಾಸವಿಲ್ಲ: ಸಂಜಯ್ ಸಿಂಗ್

ಆರೋಪಿ ಆಶಿಶ್ ಮಿಶ್ರಾ ತಂದೆ ಅಜಯ್ ಮಿಶ್ರಾ ಕೇಂದ್ರದಲ್ಲಿ ಸಚಿವರಾಗಿರುವವರೆಗೆ ಲಖೀಂಪುರ್- ಖೇರಿ ಹಿಂಸಾಚಾರ ಕೇಸ್ ನಲ್ಲಿ ನ್ಯಾಯ ದೊರೆಯುವ ವಿಶ್ವಾಸವಿಲ್ಲ ಎಂದು ಭಾನುವಾರ ಹೇಳಿರುವ ಎಎಪಿ ಸಂಸದ ಸಂಜಯ್ ಸಿಂಗ್, ಅಜಯ್ ಕುಮಾರ್ ಮಿಶ್ರಾ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ನವದೆಹಲಿ: ಆರೋಪಿ ಆಶಿಶ್ ಮಿಶ್ರಾ ತಂದೆ ಅಜಯ್ ಮಿಶ್ರಾ ಕೇಂದ್ರದಲ್ಲಿ ಸಚಿವರಾಗಿರುವವರೆಗೆ ಲಖೀಂಪುರ್- ಖೇರಿ ಹಿಂಸಾಚಾರ ಕೇಸ್ ನಲ್ಲಿ ನ್ಯಾಯ ದೊರೆಯುವ ವಿಶ್ವಾಸವಿಲ್ಲ ಎಂದು ಭಾನುವಾರ ಹೇಳಿರುವ ಎಎಪಿ ಸಂಸದ ಸಂಜಯ್ ಸಿಂಗ್, ಅಜಯ್ ಕುಮಾರ್ ಮಿಶ್ರಾ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಅಜಯ್ ಮಿಶ್ರಾ ಪುತ್ರ ಆಶಿಶ್ ಅವರನ್ನು ರಕ್ಷಿಸಲು ಬಿಜೆಪಿ ಹಾಗೂ ಯೋಗಿ ಆದಿತ್ಯ ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ. ಆದರೆ, ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶದ ನಂತರ ಉತ್ತರ ಪ್ರದೇಶ ಸರ್ಕಾರಕ್ಕೆ ಬೇರೆ ಆಯ್ಕೆಗಳಿಲ್ಲದೆ ಆತನನ್ನು ಬಂಧಿಸಿದೆ ಎಂದು ಅವರು ಆರೋಪಿಸಿದರು. 

ಅಜಯ್ ಮಿಶ್ರಾ ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿ ಇರುವವರೆಗೂ ಈ ಕೇಸ್ ನಲ್ಲಿ ನ್ಯಾಯ ದೊರೆಯುವ ವಿಶ್ವಾಸವಿಲ್ಲ ಎಂದು ಉತ್ತರ ಪ್ರದೇಶದಲ್ಲಿ ಪ್ರಚಾರದಲ್ಲಿ ನಿರತರಾಗಿರುವ ಸಂಜಯ್ ಸಿಂಗ್ ವಿಡಿಯೋ ಸಂದೇಶವೊಂದರಲ್ಲಿ ತಿಳಿಸಿದ್ದಾರೆ. 

ಲಖೀಂಪುರ್ ಹಿಂಸಾಚಾರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿರುವ ಸಂಜಯ್ ಸಿಂಗ್, ಅಜಯ್ ಕುಮಾರ್ ಮಿಶ್ರಾ ಅವರನ್ನು ಏಕೆ ಇನ್ನೂ ಮಂತ್ರಿ ಸ್ಥಾನದಿಂದ ವಜಾಗೊಳಿಸಿಲ್ಲ ಎಂದು ಕೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT