ವರುಣ್ ಗಾಂಧಿ 
ದೇಶ

ಲಖಿಂಪುರ್ ಹಿಂಸಾಚಾರವನ್ನು ಹಿಂದು vs ಸಿಖ್ ಕದನವನ್ನಾಗಿ ಮಾಡುವ ಪ್ರಯತ್ನ ನಡೆಯುತ್ತಿದೆ: ಸಂಸದ ವರುಣ್ ಗಾಂಧಿ 

ಉತ್ತರ ಪ್ರದೇಶದ ಲಖಿಂಪುರ್ ಖೇರಿ ಘಟನೆಯನ್ನು ಹಿಂದೂ-ಸಿಖ್ಖರ ನಡುವಿನ ಕದನ ಮಾಡಲು ನಡೆಸುತ್ತಿರುವ ಪ್ರಯತ್ನ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ ಎಚ್ಚರಿಸಿದ್ದಾರೆ. ಇದು ಅನೈತಿಕ ಮತ್ತು ತಪ್ಪು ಕ್ರಮ ಎಂದು ಟೀಕಿಸಿದ್ದಾರೆ.

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಘಟನೆಯನ್ನು ಹಿಂದೂ-ಸಿಖ್ಖರ ನಡುವಿನ ಕದನ ಮಾಡಲು ನಡೆಸುತ್ತಿರುವ ಪ್ರಯತ್ನ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ ಎಚ್ಚರಿಸಿದ್ದಾರೆ. ಇದು ಅನೈತಿಕ ಮತ್ತು ತಪ್ಪು ಕ್ರಮ ಎಂದು ಟೀಕಿಸಿದ್ದಾರೆ.

ಈ ತಪ್ಪುಗಳನ್ನು ಸೃಷ್ಟಿಸುವುದು ದೇಶಕ್ಕೆ ಮತ್ತು ಸಮಾಜಕ್ಕೆ ಅಪಾಯಕಾರಿ ಮಾತ್ರವಲ್ಲದೆ ಗಾಯ ಆರಲು ತಲೆಮಾರುಗಳನ್ನು ತೆಗೆದುಕೊಂಡದ್ದನ್ನು ಮತ್ತೆ ಗಾಯವಾಗುವಂತೆ ಮಾಡುವುದು ಸರಿಯಲ್ಲ. ದೇಶದ ಐಕ್ಯತೆ ಮುಂದೆ ನಮ್ಮ ರಾಜಕೀಯ ಲಾಭಕ್ಕಾಗಿ ಕ್ಷುಲ್ಲಕ ವಿಷಯಗಳಿಗೆ ಹೊಡೆದಾಡಿ ನಾವು ಬುದ್ದಿಯಲ್ಲಿ ಸಣ್ಣತನ ತೋರಿಸಬಾರದು ಎಂದು ಸಹ ಟ್ವೀಟ್ ಮೂಲಕ ಹೇಳಿದ್ದಾರೆ.

ಲಖಿಂಪುರ್ ಖೇರಿಯಲ್ಲಿ ನ್ಯಾಯಕ್ಕಾಗಿ ಹೋರಾಟವು "ದುರಹಂಕಾರಿ ಸ್ಥಳೀಯ ಅಧಿಕಾರದ ಗಣ್ಯರ ಮುಂದೆ ಬಡ ರೈತರ ಕ್ರೂರ ಹತ್ಯಾಕಾಂಡವಾಗಿದ್ದು ಇದರಲ್ಲಿ ಯಾವುದೇ ಧಾರ್ಮಿಕ ಅರ್ಥವಿಲ್ಲ ಎಂದಿದ್ದಾರೆ. "ಖಲಿಸ್ತಾನಿ" ಎಂಬ ಪದವನ್ನು ಧಾರಾಳವಾಗಿ ಪ್ರತಿಭಟಿಸುವ ರೈತರಿಗೆ ಬಳಸುವುದು ನಮ್ಮ ಗಡಿಗಳಲ್ಲಿ ಹೋರಾಡಿ ರಕ್ತ ಚೆಲ್ಲಿದ ಈ ಹೆಮ್ಮೆಯ ಪುತ್ರರ ತಲೆಮಾರುಗಳಿಗೆ ಮಾಡಿದ ಅವಮಾನ ಮಾತ್ರವಲ್ಲದೆ, ಇದು ನಮ್ಮ ರಾಷ್ಟ್ರೀಯ ಏಕತೆಗೆ ಅತ್ಯಂತ ಅಪಾಯಕಾರಿ, ಜನರಲ್ಲಿ ತಪ್ಪು ರೀತಿಯ ಪ್ರತಿಕ್ರಿಯೆಯನ್ನು ಪ್ರಚೋದಿಸುತ್ತದೆ'' ಎಂದು ಹೇಳಿದ್ದಾರೆ.

ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ತೆಗೆದುಹಾಕಲಾಗಿದೆ. ಉತ್ತರ ಪ್ರದೇಶದ ಬಿಜೆಪಿ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿರುವ ಸೀತಾಪುರದ ಲಖೀಂಪುರಖೇರಿಯಲ್ಲಿ ನಡೆದ ರೈತರ ಹತ್ಯೆ ಮತ್ತು ಹಿಂಸಾಚಾರ ಪ್ರಕರಣದ ಕುರಿತು ವರಣ್ ಗಾಂಧಿ ಸತತ ಟ್ವೀಟ್ ಮಾಡುತ್ತಿದ್ದರು. ಇಂದೂ ಕೂಡ ಹಿಂಸಾಚಾರಕ್ಕೆ ಜವಾಬ್ದಾರರನ್ನಾಗಿ ಮಾಡಬೇಕು ಎಂದು ಟ್ವೀಟ್ ಮಾಡುವ ಯಾರ ಹೆಸರನ್ನೂ ಹೇಳದೇ ಸರ್ಕಾರದ ವಿರುದ್ಧ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬೆಳವಣಿಗೆ ಕಾರ್ಯಕಾರಿ ಸಮಿತಿ ರಚನೆ ಮೇಲೆ ಪರಿಣಾಮ ಬೀರಿದೆ ಎನ್ನಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT