ಸಂವಹನ ಮತ್ತು ಸ್ಥಿರತೆ ಕಾಪಾಡಿಕೊಳ್ಳಲು ಭಾರತ ಮತ್ತು ಚೀನಾ ಒಪ್ಪಿಗೆ 
ದೇಶ

ಎಲ್ ಎಸಿಯುದ್ದಕ್ಕೂ ಇರುವ ಉಳಿದ ಪ್ರದೇಶಗಳ ಸಮಸ್ಯೆ ಪರಿಹಾರಕ್ಕೆ ಚೀನಾ ನಕಾರ, 13ನೇ ಸುತ್ತಿನ ಮಾತುಕತೆ ವಿಫಲ

ಪೂರ್ವ ಲಡಾಕ್ ನ ವಾಸ್ತವಿಕ ನಿಯಂತ್ರಣ ರೇಖೆಯ (LAC) ಉಳಿದಿರುವ ಘರ್ಷಣಾ ಕೇಂದ್ರಗಳ ಸಮಸ್ಯೆಗಳನ್ನು ಪರಿಹರಿಸಲು ಭಾರತೀಯ ಸೇನೆಯು ನೀಡಿದ ರಚನಾತ್ಮಕ ಸಲಹೆಗಳನ್ನು ಚೀನಾ ಸೇನೆಯು ಒಪ್ಪಿಕೊಂಡಿಲ್ಲ. ಇದರಿಂದಾಗಿ 13 ನೇ ಸುತ್ತಿನ ಮಾತುಕತೆಗಳು ಯಾವುದೇ ಫಲಪ್ರದ ಫಲಿತಾಂಶವನ್ನು ನೀಡದೆ ನಿನ್ನೆ ಮುಕ್ತಾಯವಾಗಿದೆ.

ನವದೆಹಲಿ: ಪೂರ್ವ ಲಡಾಕ್ ನ ವಾಸ್ತವಿಕ ನಿಯಂತ್ರಣ ರೇಖೆಯ (LAC) ಉಳಿದಿರುವ ಘರ್ಷಣಾ ಕೇಂದ್ರಗಳ ಸಮಸ್ಯೆಗಳನ್ನು ಪರಿಹರಿಸಲು ಭಾರತೀಯ ಸೇನೆಯು ನೀಡಿದ ರಚನಾತ್ಮಕ ಸಲಹೆಗಳನ್ನು ಚೀನಾ ಸೇನೆಯು ಒಪ್ಪಿಕೊಂಡಿಲ್ಲ. ಇದರಿಂದಾಗಿ 13 ನೇ ಸುತ್ತಿನ ಮಾತುಕತೆಗಳು ಯಾವುದೇ ಫಲಪ್ರದ ಫಲಿತಾಂಶವನ್ನು ನೀಡದೆ ನಿನ್ನೆ ಮುಕ್ತಾಯವಾಗಿದೆ ಎಂದು ಭಾರತೀಯ ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.

ನಿನ್ನೆ ನಡೆದ 13ನೇ ಸುತ್ತಿನ ಮಾತುಕತೆಯ ವಿವರ ನೀಡಿದ ಭಾರತೀಯ ಸೇನೆಯ ಉನ್ನತ ಅಧಿಕಾರಿಗಳು, ಸಭೆಯಲ್ಲಿ, ಭಾರತದ ಕಡೆಯವರು ಉಳಿದ ಪ್ರದೇಶಗಳ ಸಮಸ್ಯೆಗಳನ್ನು ಪರಿಹರಿಸಲು ರಚನಾತ್ಮಕ ಸಲಹೆಗಳನ್ನು ನೀಡಿದರು ಆದರೆ ಚೀನಾದ ಭಾಗವು ಒಪ್ಪಿಕೊಳ್ಳಲಿಲ್ಲ ಮತ್ತು ಯಾವುದೇ ಮುಂದಕ್ಕೆ ಕಾಣುವ ಪ್ರಸ್ತಾಪಗಳನ್ನು ಒದಗಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದೆ.

ಎರಡೂ ಕಡೆಯವರು ಮಾತುಕತೆಯನ್ನು ನಿರ್ವಹಿಸಲು ಮತ್ತು ಪೂರ್ವ ಲಡಾಕ್ ನ ಗಡಿ ವಾಸ್ತವ ರೇಖೆಯುದ್ದಕ್ಕೂ ಸ್ಥಿರತೆಯನ್ನು ಕಾಯ್ದುಕೊಳ್ಳಲು ಒಪ್ಪಿಕೊಂಡಿದ್ದಾರೆ. ಚೀನಾದ ಕಡೆಯವರು ದ್ವಿಪಕ್ಷೀಯ ಸಂಬಂಧಗಳ ಒಟ್ಟಾರೆ ದೃಷ್ಟಿಕೋನವನ್ನು ಪರಿಗಣಿಸುತ್ತಾರೆ. ಉಳಿದ ಸಮಸ್ಯೆಗಳ ಆರಂಭಿಕ ಪರಿಹಾರಕ್ಕಾಗಿ ಮುಂದೆ ಕೆಲಸ ಮಾಡುತ್ತಾರೆ ಎಂಬುದು ನಮ್ಮ ನಿರೀಕ್ಷೆಯಾಗಿದೆ ಎಂದು ಭಾರತೀಯ ಸೇನೆ ಹೇಳಿದೆ.

ನಿನ್ನೆ 13ನೇ ಸುತ್ತಿನ ಮಾತುಕತೆ ಚೀನಾ ಕಡೆ ಏರ್ಪಟ್ಟಿತ್ತು. ಸಭೆಯಲ್ಲಿ, ಎರಡು ಕಡೆಯವರ ನಡುವಿನ ಚರ್ಚೆಗಳು ಪೂರ್ವ ಲಡಾಖ್‌ನ ಎಲ್‌ಎಸಿಯಲ್ಲಿ ಉಳಿದಿರುವ ಸಮಸ್ಯೆಗಳ ಪರಿಹಾರದ ಮೇಲೆ ಕೇಂದ್ರೀಕರಿಸಿದವು ಎಂದು ಸೇನೆಯು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT