ಎನ್ ಕೌಂಟರ್ ನಲ್ಲಿ ಹಾನಿಯಾದ ಮನೆಯನ್ನು ಪರಿಶೀಲಿಸುತ್ತಿರುವ ಜನರು 
ದೇಶ

ಶೋಪಿಯಾನ್: ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಐವರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆಗಳು

ಶ್ರೀನಗರದಲ್ಲಿ ಇತ್ತೀಚಿಗೆ ಸ್ಥಳೀಯರಲ್ಲದ ಬೀದಿ ವ್ಯಾಪಾರಿಯನ್ನು ಹತ್ಯೆ ಮಾಡಿದ್ದ ಉಗ್ರ ಸೇರಿದಂತೆ ಐವರು ಉಗ್ರರನ್ನು ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ಪೊಲೀಸರು ಮಂಗಳವಾರ ಹೇಳಿದ್ದಾರೆ. 

ಶೋಪಿಯಾನ್: ಶ್ರೀನಗರದಲ್ಲಿ ಇತ್ತೀಚಿಗೆ ಸ್ಥಳೀಯರಲ್ಲದ ಬೀದಿ ವ್ಯಾಪಾರಿಯನ್ನು ಹತ್ಯೆ ಮಾಡಿದ್ದ ಉಗ್ರ ಸೇರಿದಂತೆ ಐವರು ಉಗ್ರರನ್ನು ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ಪೊಲೀಸರು ಮಂಗಳವಾರ ಹೇಳಿದ್ದಾರೆ. 

ಕಳೆದ 24 ಗಂಟೆಗಳಲ್ಲಿ ಶೋಪಿಯಾನ್ ನ ತುಲ್ರಾನ್ ಮತ್ತು ಫೀರಿಪೋರಾ ಗ್ರಾಮದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ, ಐವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಇದರಲ್ಲಿ ಇತ್ತೀಚಿಗೆ ಶ್ರೀನಗರದ ಲಾಲ್ ಬಜಾರ್ ಪ್ರದೇಶದಲ್ಲಿ ಸ್ಥಳೀಯರಲ್ಲದ ಬೀದಿ ವ್ಯಾಪಾರಿಯನ್ನು ಹತ್ಯೆ ಮಾಡಿದ್ದ ಉಗ್ರ ಮುಖ್ತರ್ ಶಾ ಕೂಡಾ ಹತನಾಗಿರುವುದಾಗಿ ಪೊಲೀಸ್ ವಕ್ತಾರರೊಬ್ಬರು ತಿಳಿಸಿದ್ದಾರೆ. 

ದಕ್ಷಿಣ ಕಾಶ್ಮೀರದ ಎರಡು ಹಳ್ಳಿಯಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿ, ಎನ್ ಕೌಂಟರ್ ನಡೆಸಲಾಗಿದೆ. ತುಲ್ರಾನ್ ನಲ್ಲಿ ಶರಣಾಗುವಂತೆ ಉಗ್ರರಿಗೆ ಪದೇ ಪದೇ ಹೇಳಿದರೂ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿ ದಾಳಿಯಲ್ಲಿ ಉಗ್ರರನ್ನು ಹತ್ಯೆ ಮಾಡಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT