ಭಾರತೀಯ ಸೇನೆ 
ದೇಶ

ಜಮ್ಮು-ಕಾಶ್ಮೀರದಲ್ಲಿ ಮುಂದುವರೆದ ಉಗ್ರರ ಹಾವಳಿ: ಶೋಪಿಯಾನ್ ನಲ್ಲಿ ಮತ್ತೊಂದು ಸೇನಾ ಕಾರ್ಯಾಚರಣೆ, ಓರ್ವ ಉಗ್ರ ಹತ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿದ್ದು, ಶೋಪಿಯಾನ್ ನಲ್ಲಿ ಭಾರತೀಯ ಸೇನೆ ಮತ್ತೊಂದು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿದೆ. 

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿದ್ದು, ಶೋಪಿಯಾನ್ ನಲ್ಲಿ ಭಾರತೀಯ ಸೇನೆ ಮತ್ತೊಂದು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿದೆ. 

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಮತ್ತೆ ಎನ್ ಕೌಂಟರ್ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಶೋಪಿಯಾನ್ ನ ಫಿರಿಪೋರಾ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಆ ಪ್ರದೇಶವನ್ನು ಸುತ್ತುವರೆದಿದೆ.

ಅಲ್ಲದೆ ಆ ಪ್ರದೇಶದ ಒಂದೊಂದು ಮನೆಯಲ್ಲೂ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಈ ವೇಳೆ ಭದ್ರತಾ ಪಡೆಗಳು ಶೋಧ ನಡೆಸುತ್ತಿದ್ದಂತೆ, ಉಗ್ರರು ಅವರ ಮೇಲೆ ಗುಂಡು ಹಾರಿಸಿದ್ದು ಸೇನೆ ಕೂಡ ಪ್ರತಿದಾಳಿ ನಡೆಸಿದೆ. ಈ ವೇಳೆ ಓರ್ವ ಉಗ್ರಗಾಮಿ ಹತನಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಸ್ತುತ ಪ್ರಾಥಮಿಕ ವರದಿಗಳ ಅನ್ವಯ ಆ ಪ್ರದೇಶದಲ್ಲಿ ಇಬ್ಬರು ಅಥವಾ ಅದಕ್ಕಿಂತ ಹೆಚ್ಚು ಉಗ್ರರು ಅವಿತಿರುವ ಶಂಕೆ ಇದ್ದು, ಘಟನಾ ಪ್ರದೇಶಕ್ಕೆ ಹೆಚ್ಚುವರಿ ಪಡೆಗಳು ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. 

ಈ ಹಿಂದೆ ನಿನ್ನೆ ತಡರಾತ್ರಿ ಇದೇ ಶೋಪಿಯಾನ್ ಜಿಲ್ಲೆಯ ಇಮಾಮ್ಸಾಹಿಬ್ ಪ್ರದೇಶದಲ್ಲಿ ಮತ್ತೊಂದು ಗುಂಡಿನ ಚಕಮಕಿ ನಡೆದಿತ್ತು, ಇದರಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Goa Nightclub Tragedy: ನೈಟ್‌ಕ್ಲಬ್‌ ಮ್ಯಾನೇಜರ್‌ ಬಂಧನ, ಮಾಲೀಕನ ವಿರುದ್ಧ ವಾರಂಟ್‌ ಜಾರಿ

RCB ಫ್ಯಾನ್ಸ್ ಗೆ ಗುಡ್ ನ್ಯೂಸ್: ಚಿನ್ನಸ್ವಾಮಿಯಿಂದ IPL ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ; ಡಿ.ಕೆ. ಶಿವಕುಮಾರ್

'ಮದುವೆ ರದ್ದಾಗಿದೆ': ಪಲಾಶ್ ಮುಚ್ಚಲ್ ಜೊತೆಗಿನ ವಿವಾಹದ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ!

'ಮುಂದುವರಿಯಲು ನಿರ್ಧರಿಸಿದ್ದೇನೆ': ಸ್ಮೃತಿ ಮಂಧಾನ ಬಳಿಕ ಮದುವೆ ರದ್ದಾದ ಬಗ್ಗೆ ಪಲಾಶ್ ಮುಚ್ಚಲ್ ಮಾತು!

500 ಕೋಟಿ ರು ಕೊಟ್ಟು ಪಂಜಾಬ್ CM ಕುರ್ಚಿಯಲ್ಲಿ ಕುಳಿತುಕೊಳ್ಳಲು ನಮ್ಮ ಬಳಿ ಹಣವಿಲ್ಲ; ನವಜೋತ್ ಸಿಧು ಪತ್ನಿ ಹೇಳಿಕೆ

SCROLL FOR NEXT