ಕಲ್ಲಿದ್ದಲು 
ದೇಶ

ಹಬ್ಬದ ಸಮಯದಲ್ಲಿ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಕೆ ಹೆಚ್ಚಿಸಿ: ಸಿಐಎಲ್ ಗೆ ಕೇಂದ್ರ ಸೂಚನೆ

ದುರ್ಗಾ ಪೂಜೆಯ ಅವಧಿಯಲ್ಲಿ ಪ್ರತಿ ದಿನ 1.55-1.6 ಮಿಲಿಯನ್ ಟನ್‌ಗಳಷ್ಟು ಕಲ್ಲಿದ್ದಲು ಪೂರೈಕೆಯನ್ನು ಹೆಚ್ಚಿಸಿ ಮತ್ತು ಅಕ್ಟೋಬರ್ 20 ರ ನಂತರ ಅದನ್ನು 1.7 ಮಿಲಿಯನ್ ಟನ್ ಗೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರ, ಸರ್ಕಾರಿ ಸ್ವಾಮ್ಯದ ಕೋಲ್...

ನವದೆಹಲಿ: ದುರ್ಗಾ ಪೂಜೆಯ ಅವಧಿಯಲ್ಲಿ ಪ್ರತಿ ದಿನ 1.55-1.6 ಮಿಲಿಯನ್ ಟನ್‌ಗಳಷ್ಟು ಕಲ್ಲಿದ್ದಲು ಪೂರೈಕೆಯನ್ನು ಹೆಚ್ಚಿಸಿ ಮತ್ತು ಅಕ್ಟೋಬರ್ 20 ರ ನಂತರ ಅದನ್ನು 1.7 ಮಿಲಿಯನ್ ಟನ್ ಗೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರ, ಸರ್ಕಾರಿ ಸ್ವಾಮ್ಯದ ಕೋಲ್ ಇಂಡಿಯಾ ಲಿಮಿಟೆಡ್(CIL)ಗೆ ಮಂಗಳವಾರ ಸೂಚಿಸಿದೆ.

ಹಬ್ಬದ ಸೀಸನ್ ಈಗಾಗಲೇ ಆರಂಭವಾಗಿರುವ ಸಮಯದಲ್ಲಿ ದೇಶದ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರತೆ ಎದುರಿಸುತ್ತಿದ್ದು, ಹಲವು ರಾಜ್ಯಗಳಲ್ಲಿ ಅನಿಯಮಿತ ಲೋಡ್​ ಶೆಡಿಂಗ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಈ ಸೂಚನೆ ಮಹತ್ವ ಪಡೆದುಕೊಂಡಿದೆ.

"ನಿನ್ನೆ(ಸೋಮವಾರ) ದೆಹಲಿಯಲ್ಲಿ ಒಂದು ಸಭೆ ಇತ್ತು. ಈ ಸಭೆಯಲ್ಲಿ ಕೋಲ್ ಇಂಡಿಯಾಗೆ ಹಬ್ಬದ ಸಮಯದಲ್ಲಿ ವಿದ್ಯುತ್ ವಲಯಕ್ಕೆ ಪ್ರತಿದಿನ 1.55-1.6 ಮಿಲಿಯನ್ ಟನ್ ಕಲ್ಲಿದ್ದಲು ಪೂರೈಸುವಂತೆ ಸೂಚಿಸಲಾಯಿತು. ಅಕ್ಟೋಬರ್ 20 ರ ನಂತರ ದಿನಕ್ಕೆ 1.7 ಮೆಟ್ರಿಕ್ ಟನ್ ಪೂರೈಕೆ ಮಾಡಬೇಕಾಗುತ್ತದೆ" ಎಂದು ಉನ್ನತ ಮೂಲಗಳು ತಿಳಿಸಿವೆ.

ಸೋಮವಾರ ವಿದ್ಯುತ್ ವಲಯಕ್ಕೆ ಸಿಐಎಲ್ ನಿಂದ 1.615 ಮೆ.ಟನ್ ಕಲ್ಲಿದ್ದಲು ರವಾನೆ ಆಗಿದೆ. ದೇಶದಲ್ಲಿ ಒಟ್ಟು ವಿದ್ಯುತ್ ಉತ್ಪಾದನೆಯಲ್ಲಿ ಶೇಕಡಾ 69 ರಷ್ಟು ಕಲ್ಲಿದ್ದಲು ಆಧಾರಿತವಾಗಿದೆ. ಸಿಐಎಲ್ ಶೇಕಡಾ 80 ರಷ್ಟು ಕಲ್ಲಿದ್ದಲನ್ನು ವಿದ್ಯುತ್ ವಲಯಕ್ಕೆ ಪೂರೈಸುತ್ತದೆ.

ವಿದ್ಯುತ್ ಸ್ಥಾವರಗಳು ಉತ್ಪಾದನೆಗೆ ಅಗತ್ಯವಿರುವ ಕಲ್ಲಿದ್ದಲಿನ ಪ್ರಮಾಣವನ್ನು ಪಡೆಯುತ್ತಿವೆ. ಆದರೆ ಅವುಗಳು ಕಲ್ಲಿದ್ದಲು ಸಂಗ್ರಹ ಮಾಡುತ್ತಿಲ್ಲ. ನವೆಂಬರ್ 1 ರಿಂದ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಸಂಗ್ರಹ ಪ್ರಾರಂಭವಾಗುತ್ತದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT