ಕೈಲಾಶ್ ವಿಜಯವರ್ಗಿಯಾ 
ದೇಶ

ಲೈಂಗಿಕ ಕಿರುಕುಳ ಪ್ರಕರಣ: ಕೈಲಾಶ್ ವಿಜಯವರ್ಗಿಯಾ ಮತ್ತು ಇತರ ಇಬ್ಬರಿಗೆ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು

ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕ್ರಿಮಿನಲ್ ಬೆದರಿಕೆಗೆ ಸಂಬಂಧಿಸಿದಂತೆ ಕೋಲ್ಕತ್ತಾ ಹೈಕೋರ್ಟ್ ಬಿಜೆಪಿ ಮುಖಂಡರಾದ ಕೈಲಾಶ್ ವಿಜಯವರ್ಗಿಯಾ, ಜಿಸ್ನು ಬಸು ಮತ್ತು ಪ್ರದೀಪ್ ಜೋಶಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಕೋಲ್ಕತಾ: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕ್ರಿಮಿನಲ್ ಬೆದರಿಕೆಗೆ ಸಂಬಂಧಿಸಿದಂತೆ ಕೋಲ್ಕತ್ತಾ ಹೈಕೋರ್ಟ್ ಬಿಜೆಪಿ ಮುಖಂಡರಾದ ಕೈಲಾಶ್ ವಿಜಯವರ್ಗಿಯಾ, ಜಿಸ್ನು ಬಸು ಮತ್ತು ಪ್ರದೀಪ್ ಜೋಶಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. 

ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಹರೀಶ್ ಟಂಡನ್ ಮತ್ತು ನ್ಯಾಯಮೂರ್ತಿ ಕೌಶಿಕ್ ಚಂದ್ ಅವರ ವಿಭಾಗೀಯ ಪೀಠವು ಅಕ್ಟೋಬರ್ 25 ರವರೆಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಮತ್ತು ಹಿರಿಯ ಆರೆಸ್ಸೆಸ್ ಪದಾಧಿಕಾರಿಗಳಾದ ಡಾ.ಜಿಷ್ಣು ಬಸು ಮತ್ತು ಪ್ರದೀಪ್ ಜೋಶಿ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಈ ಭದ್ರತೆಯು ಅಕ್ಟೋಬರ್ 25 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ, ಏಕೆಂದರೆ ಈ ಮಧ್ಯೆ ಇದೇ ಪ್ರಕರಣದ ವಿಚಾರಣೆ ಅಕ್ಟೋಬರ್ 20ರಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.

2018ರ ನವೆಂಬರ್ 29ರಂದು ಶರತ್ ಬೋಸ್ ರಸ್ತೆಯ ಫ್ಲ್ಯಾಟ್ ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಈ ಮೂವರ ವಿರುದ್ಧ ಆರೋಪ ಮಾಡಲಾಗಿತ್ತು. ಘಟನೆಯ ನಂತರ, ಸಂತ್ರಸ್ತೆಗೆ ಹಾಗೂ ಆಕೆಯ ಕುಟುಂಬದವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದರು. ಈ ಬೆದರಿಕೆಯ ಆರೋಪವನ್ನು ಆಧರಿಸಿ, 2019 ರಲ್ಲಿ ಸರ್ಸುನಾ ಮತ್ತು 2020 ರಲ್ಲಿ ಬೋಲ್ಪುರದಲ್ಲಿ ದೂರು ದಾಖಲಿಸಲಾಗಿದೆ. ಆದಾಗ್ಯೂ, ಸರಸುನ ಪೊಲೀಸ್ ಠಾಣೆಯ ದೂರನ್ನು (ಮುಚ್ಚಿದ ವರದಿ ಸಲ್ಲಿಸಲಾಗಿದೆ) ಪೊಲೀಸರು ವಿಲೇವಾರಿ ಮಾಡಿದ್ದಾರೆ. ನ್ಯಾಯಾಲಯದ ಆದೇಶದ ನಂತರ ಅಕ್ಟೋಬರ್ 8ರಂದು ಎಫ್ಐಆರ್ ದಾಖಲಿಸಲಾಗಿದೆ. 

ಸಂತ್ರಸ್ತ ಮಹಿಳೆ ಅಲಿಪೋರ್ ಕೆಳ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಅಲ್ಲಿ ಅವರು ಸಾಮೂಹಿಕ ಅತ್ಯಾಚಾರದ ಆರೋಪ ಮಾಡಿದರು. ನ್ಯಾಯಾಧೀಶರಿಗೆ ಎಫ್‌ಐಆರ್ ದಾಖಲಿಸುವಂತೆ ಮನವಿ ಮಾಡಿದರು. ಅಲಿಪೋರ್ ಕೋರ್ಟ್ ಮಹಿಳೆಯ ಮನವಿಯನ್ನು ತಿರಸ್ಕರಿಸಿತ್ತು. ಈ ವರ್ಷ ಅಕ್ಟೋಬರ್ 1ರಂದು, ಕೋಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ ವಿವೇಕ್ ಚೌಧರಿ ತನ್ನ ಮನವಿಯನ್ನು ಮರುಪರಿಶೀಲಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದರು. ನ್ಯಾಯಾಧೀಶರು ಅಕ್ಟೋಬರ್ 8 ರಂದು ಎಫ್ಐಆರ್ ನೋಂದಾಯಿಸಲು ಸೂಚಿಸಿದ್ದರು. 

ಅದೇ ದಿನ, ಭವಾನಿಪುರ ಪೊಲೀಸ್ ಠಾಣೆಯಲ್ಲಿ ಕೈಲಾಶ್ ವಿಜಯವರ್ಗಿಯಾ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಮೂವರೂ ಹೈಕೋರ್ಟ್ ಮೊರೆ ಹೋಗಿದ್ದರು. ಫ್ಲ್ಯಾಟ್ ಅನ್ನು ಚುನಾವಣಾ ಕೆಲಸಕ್ಕಾಗಿ ಬಾಡಿಗೆಗೆ ನೀಡಲಾಯಿತು. ಶರತ್ ಬೋಸ್ ರಸ್ತೆಯಲ್ಲಿರುವ ಆ ಫ್ಲಾಟ್ ನ ಇಬ್ಬರು ಮೇಲ್ವಿಚಾರಕರ ಹೇಳಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಕೈಲಾಶ್ ವಿಜಯವರ್ಗಿಯಾ ಸೇರಿದಂತೆ ಒಂದಕ್ಕಿಂತ ಹೆಚ್ಚು ವ್ಯಕ್ತಿಗಳು ಪಕ್ಷದ ಕೆಲಸ ಮಾಡಲು ಫ್ಲ್ಯಾಟ್‌ಗೆ ಬರುತ್ತಿದ್ದರು ಎಂದು ಅವರು ಹೇಳಿದರು. ಫ್ಲಾಟ್ ಪವನ್ ರೂಯನ್ ಹೆಸರಿನಲ್ಲಿದೆ ಮತ್ತು ಕೈಲಾಶ್ ವಿಜಯವರ್ಗಿಯವರು ಬಾಡಿಗೆಗೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT