ವರುಣ್ ಗಾಂಧಿ 
ದೇಶ

ಲಖೀಂಪುರ್ ಖೇರಿ ಘಟನೆ:  ಮಾಜಿ ಪ್ರಧಾನಿ ವಾಜಪೇಯಿಯ ಭಾಷಣದ ಕ್ಲಿಪ್ ಹಂಚಿಕೊಂಡ ವರುಣ್ ಗಾಂಧಿ

ರೈತರ ಧ್ವನಿಯನ್ನು ಅಡಗಿಸುತ್ತಿದ್ದ ಇಂದಿರಾ ಗಾಂಧಿ ಸರ್ಕಾರದ ವಿರುದ್ಧ ಎಚ್ಚರಿಕೆ ನೀಡುತ್ತಾ, ರೈತರಿಗೆ ತನ್ನ ಬೆಂಬಲವನ್ನು ವ್ಯಕ್ತಪಡಿಸಿದ್ದ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾಷಣದ ತುಣಕುವೊಂದನ್ನು ಬಿಜೆಪಿ ಸಂಸದ ವರುಣ್ ಗಾಂಧಿ ಗುರುವಾರ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

ನವದೆಹಲಿ: ರೈತರ ಧ್ವನಿಯನ್ನು ಅಡಗಿಸುತ್ತಿದ್ದ ಇಂದಿರಾ ಗಾಂಧಿ ಸರ್ಕಾರದ ವಿರುದ್ಧ ಎಚ್ಚರಿಕೆ ನೀಡುತ್ತಾ, ರೈತರಿಗೆ ತನ್ನ ಬೆಂಬಲವನ್ನು ವ್ಯಕ್ತಪಡಿಸಿದ್ದ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾಷಣದ ತುಣಕುವೊಂದನ್ನು ಬಿಜೆಪಿ ಸಂಸದ ವರುಣ್ ಗಾಂಧಿ ಗುರುವಾರ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

'ವಿಶಾಲ ಹೃದಯದ ನಾಯಕನಿಂದ ಜಾಣ್ಮೆಯ ಮಾತುಗಳು ' ಎಂಬ ಶೀರ್ಷಿಕೆಯಡಿ ವರುಣ್ ಗಾಂಧಿ, ವಾಜಪೇಯಿ ಅವರ ಭಾಷಣದ ತುಣಕುವೊಂದನ್ನು ಟ್ವೀಟ್ ಮಾಡಿದ್ದಾರೆ.

ಮೋದಿ ಸರ್ಕಾರ ಜಾರಿಗೊಳಿಸುವ ಮೂರು ಕೃಷಿ ಕಾನೂನುಗಳ ವಿರುದ್ಧ ಧ್ವನಿ ಎತ್ತಿದ್ದ ಬಿಜೆಪಿ ಸಂಸದ ವರುಣ್ ಗಾಂಧಿ, ವಾಜಪೇಯಿ ಅವರ ಭಾಷಣವನ್ನು ಹಂಚಿಕೊಳ್ಳುವ ಮೂಲಕ ಕೇಂದ್ರ ಸರ್ಕಾರಕ್ಕೆ ಸಂದೇಶ ಕಳುಹಿಸಿದ್ದಾರೆ. 

ಸರ್ಕಾರ ರೈತರನ್ನು ದಮನಿಸಿದರೆ, ಕಾನೂನು ದುರುಪಯೋಗಪಡಿಸಿಕೊಂಡರೆ ಮತ್ತು ಶಾಂತಿಯುತ ಹೋರಾಟವನ್ನು ಕೆಡಿಸಿದರೆ, ರೈತರ ಹೋರಾಟದೊಂದಿಗೆ ಕೈ ಜೋಡಿಸಲು ನಾಚಿಕೆಪಡಬೇಕಾಗಿಲ್ಲ, ಅವರೊಂದಿಗೆ ನಿಲ್ಲುತ್ತೇವೆ ಎಂದು ವಾಜಪೇಯಿ ಹೇಳುವುದು ಈ ವಿಡಿಯೋದಲ್ಲಿದೆ.  

ರೈತರ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ವರುಣ್ ಗಾಧಿ ಆಗ್ರಹಿಸಿದ ನಂತರ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಕೈ ಬಿಡಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

SCROLL FOR NEXT