ರಾಜನಾಥ್ ಸಿಂಗ್ ರಿಂದ ಪಕ್ಷದ ಹಿರಿಯ ಕಾರ್ಯಕರ್ತರ ಭೇಟಿ 
ದೇಶ

ಸುಧಾಮನ ಮನೆಗೆ ಕೃಷ್ಣ ಬಂದಂತೆ, 106 ವರ್ಷದ ಬಿಜೆಪಿ ಹಿರಿಯ ಕಾರ್ಯಕರ್ತರನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್!

ದೇಶದ ಅತ್ಯಂತ ಹಿರಿಯ ಬಿಜೆಪಿ ಕಾರ್ಯಕರ್ತ ಎಂಬ ಹೆಗ್ಗಳಿಕೆ ಹೊಂದಿರುವ ಉತ್ತರ ಪ್ರದೇಶದ ಭುಲಾಯಿ ಭಾಯಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾದರು.

ನವದೆಹಲಿ: ದೇಶದ ಅತ್ಯಂತ ಹಿರಿಯ ಬಿಜೆಪಿ ಕಾರ್ಯಕರ್ತ ಎಂಬ ಹೆಗ್ಗಳಿಕೆ ಹೊಂದಿರುವ ಉತ್ತರ ಪ್ರದೇಶದ ಭುಲಾಯಿ ಭಾಯಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾದರು.

ಯುಪಿ ಭವನದಲ್ಲಿ ಭುಲಾಯಿ ಭಾಯಿ ಅವರನ್ನು ಆತ್ಮೀಯವಾಗಿ ಭೇಟಿ ಮಾಡಿದ ರಾಜನಾಥ್ ಸಿಂಗ್, ಭುಲಾಯಿ ಭಾಯಿ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರು. ಈ ವೇಳೆ ರಾಜನಾಥ್ ಅವರನ್ನು ಅತ್ಯಂತ ಸಂಭ್ರಮದಿಂದ ಎದುರುಗೊಂಡ ಭುಲಾಯಿ ಭಾಯಿ, ರಕ್ಷಣಾ ಸಚಿವರಿಗೆ ಪ್ರೀತಿಯ ಅಪ್ಪುಗೆ ನೀಡಿದರು.

ಬಳಿಕ ಮಾತನಾಡಿದ ರಾಜನಾಥ್ ಸಿಂಗ್ ದೇಶದ ಅತ್ಯಂತ ಹಿರಿಯ ಬಿಜೆಪಿ ಕಾರ್ಯಕರ್ತ ಭುಲಾಯಿ ಭಾಯಿ ಅವರನ್ನು ಭೇಟಿ ಮಾಡಿರುವುದು ಅತೀವ ಸಂತಸ ತಂದಿದೆ ಎಂದು ಹೇಳಿದರು. ಜನಸಂಘದ ಶಾಸಕರಾಗಿದ್ದ ಭೂಲಾಯಿ ಭಾಯಿ, 1977ರಲ್ಲಿ ನಾನು ಶಾಸಕನಾಗಿ ಆಯ್ಕೆಯಾದಾಗ ನಮಗೆ ಮಾರ್ಗದರ್ಶನ ಮಾಡಿದ ಹಿರಿಯರು ಎಂದು ರಾಜನಾಥ್ ಸಿಂಗ್ ಮೆಚ್ಚುಗೆಯ ಮಾತುಗಳನ್ನಾಡಿದರು.

ದಸರಾ ಹಬ್ಬಕ್ಕೂ ಮುನ್ನಾದಿನ ಭುಲಾಯಿ ಭಾಯಿ ಅವರ ಆಶೀರ್ವಾದ ಪಡೆದಿರುವುದು ನಿಜಕ್ಕೂ ಸಂತಸದ ಸಂಗತಿ. ಪಕ್ಷ ಮತ್ತು ನಮ್ಮೆಲ್ಲರ ಮೇಲೆ ಅವರ ಆಶೀರ್ವಾದ ಸದಾಕಾಲ ಇರಲಿ ಎಂಬುದು ನನ್ನ ಮನದಾಳದ ಹಾರೈಕೆ ಎಂದು ರಾಜನಾಥ್ ಸಿಂಗ್ ಈ ವೇಳೆ ಭಾವುಕರಾಗಿ ನುಡಿದರು.

ರಾಜನಾಥ್ ಸಿಂಗ್ ಭೇಟಿ ನಂತರ ಮಾತನಾಡಿದ ಭುಲಾಯಿ, ಕೃಷ್ಣ ಸುಧಾಮನನ್ನು ಭೇಟಿ ಮಾಡಿದಂತಾಯಿತು ಎಂದು ನುಡಿದರು.ನಾವು ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದೆವು, ಅವರನ್ನು ಭೇಟಿ ಮಾಡಿದ್ದು ಸಂತೋಷ ತಂದಿತು ಎಂದು ಅಭಿಪ್ರಾಯ ಪಟ್ಟರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ನೀರು ಹಂಚಿಕೆ: ತಮಿಳುನಾಡು ಅರ್ಜಿಯನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ

ಹೈಕೋರ್ಟ್‌ನಿಂದ ಜೀವಾವಧಿ ಶಿಕ್ಷೆಗೆ ತಡೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹತೆ ರದ್ದು!

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ: ಪಕ್ಷ ನಿಮ್ಮ ಸೇವೆ ಮರೆಯಲ್ಲ; ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ