ಸಾದ್ವಿ ಪ್ರಗ್ಯಾಸಿಂಗ್ ಠಾಕೂರ್ 
ದೇಶ

ಹೋರಿಗಳ ಸಂತಾನಶಕ್ತಿ ಹರಣ: ಸಾದ್ವಿ ಪ್ರಗ್ಯಾಸಿಂಗ್ ಠಾಕೂರ್ ಟೀಕೆಗೆ ಮಣಿದ ಮಧ್ಯ ಪ್ರದೇಶ ಸರ್ಕಾರ 

ಮಧ್ಯಪ್ರದೇಶ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ಹೋರಿಗಳ ಸಂತಾನಶಕ್ತಿ ಹರಣ ಯೋಜನೆಯ ವಿರುದ್ಧ ತೀವ್ರ ಟೀಕೆ ಮಾಡಿದ್ದ ಸಾದ್ವಿ ಪ್ರಗ್ಯಾಸಿಂಗ್ ಠಾಕೂರ್ ಟೀಕೆಗೆ ಅಲ್ಲಿನ ಬಿಜೆಪಿ ಸರ್ಕಾರ ಮಣಿದಿದೆ. 

ಭೋಪಾಲ್: ಮಧ್ಯಪ್ರದೇಶ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ಹೋರಿಗಳ ಸಂತಾನಶಕ್ತಿ ಹರಣ ಯೋಜನೆಯ ವಿರುದ್ಧ ತೀವ್ರ ಟೀಕೆ ಮಾಡಿದ್ದ ಸಾದ್ವಿ ಪ್ರಗ್ಯಾಸಿಂಗ್ ಠಾಕೂರ್ ಟೀಕೆಗೆ ಅಲ್ಲಿನ ಬಿಜೆಪಿ ಸರ್ಕಾರ ಮಣಿದಿದೆ. 

ಮಧ್ಯಪ್ರದೇಶ ಸರ್ಕಾರದ ನಡೆಯನ್ನು ಸಾದ್ವಿ ಪ್ರಗ್ಯಾಸಿಂಗ್ ಠಾಕೂರ್ ದೇಶೀಯ ಗೋವುಗಳ ತಳಿಗಳಿಗೆ ಅಂತ್ಯ ಹಾಡುವ ಯೋಜನೆ ಎಂದು ಟೀಕಿಸಿದ್ದರು.

"ನಾನು ಸರ್ಕಾರದ ಆದೇಶವನ್ನು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಪಶುಸಂಗೋಪನೆ ಸಚಿವ ಪ್ರೇಮ್ ಸಿಂಗ್ ಪಟೇಲ್ ಅವರ ಗಮನಕ್ಕೆ ತಂದಿದ್ದೆ. ಈ ಬಳಿಕ ಸರ್ಕಾರ ಯೋಜನೆಯನ್ನು ಹಿಂಪಡೆದಿದೆ ಎಂದು ಪ್ರಗ್ಯಾಸಿಂಗ್ ಠಾಕೂರ್ ಹೇಳಿದ್ದಾರೆ. 

ಭೋಪಾಲ್ ನ ಸಂಸತ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸಾದ್ವಿ ಪ್ರಗ್ಯಾಸಿಂಗ್ ಠಾಕೂರ್, ಈ ಯೋಜನೆಯನ್ನು "ಆಂತರಿಕ ಷಡ್ಯಂತ್ರ" ಎಂದು ಹೇಳಿದ್ದರು.

"ಹೋರಿಗಳ ಸಂತಾನ ಶಕ್ತಿ ಹರಣ ಯೋಜನೆ ಆಂತರಿಕ ಷಡ್ಯಂತ್ರವಾಗಿದ್ದು ಎಚ್ಚರಿಕೆಯಿಂದ ಇರಬೇಕಾಗಿದೆ. ಏಕೆಂದರೆ ದೇಶೀಯ ಹಸುಗಳ ತಳಿಗಳನ್ನು ಯಾರೂ ಎಂದಿಗೂ ನಾಶ ಮಾಡಲು ಸಾಧ್ಯವಿಲ್ಲ. ಮಾಡಲೂಬಾರದು. ಆದರೂ ಸರ್ಕಾರ ಈ ರೀತಿಯ ಯೋಜನೆ ಕೈಗೊಳ್ಳಲು ಹೇಗೆ ಸಾಧ್ಯ ಎಂಬುದು ಮಾತ್ರ ತನಿಖೆಗೆ ಯೋಗ್ಯವಾದದ್ದು" ಎನ್ನುತ್ತಾರೆ ಪ್ರಗ್ಯಾ ಸಿಂಗ್ ಠಾಕೂರ್

ಈ ಯೋಜನೆ ರೂಪುಗೊಂಡಿದ್ದರ ಬಗ್ಗೆ ತನಿಖೆ ಪ್ರಾರಂಭಿಸಬೇಕೆಂದು ಸಿಎಂ ಗೆ ಮನವಿ ಮಾಡುವುದಾಗಿ ಅವರು ತಿಳಿಸಿದ್ದಾರೆ. ಅ.23 ರಿಂದ ಈ ಯೋಜನೆ ಜಾರಿಗೊಳಿಸಲು ಅಲ್ಲಿನ ಪಶುಸಂಗೋಪನೆ ಇಲಾಖೆ ಮುಂದಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT