ಅಮಿತ್ ಶಾ 
ದೇಶ

ಭಾರತದ ಸರ್ಜಿಕಲ್ ಸ್ಟ್ರೈಕ್ ನಿಂದ ವಿಶ್ವ ಭಯೋತ್ಪಾದಕತೆಗೆ ಪ್ರಬಲ ಸಂದೇಶ: ಅಮಿತ್ ಶಾ

ಐದು ವರ್ಷಗಳ ಹಿಂದೆ ಪಾಕಿಸ್ತಾನ ವಿರುದ್ಧ ಭಾರತ ಕೈಗೊಂಡ ಸರ್ಜಿಕಲ್ ಸ್ಟ್ರೈಕ್ ಮೂಲಕ ತನ್ನ ಗಡಿಯಲ್ಲಿ ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಜಗತ್ತಿಗೆ ಪ್ರಬಲವಾದ ಸಂದೇಶವನ್ನು ಭಾರತ ರವಾನಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. 

ಪಣಜಿ: ಐದು ವರ್ಷಗಳ ಹಿಂದೆ ಪಾಕಿಸ್ತಾನ ವಿರುದ್ಧ ಭಾರತ ಕೈಗೊಂಡ ಸರ್ಜಿಕಲ್ ಸ್ಟ್ರೈಕ್ ಮೂಲಕ ತನ್ನ ಗಡಿಯಲ್ಲಿ ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಜಗತ್ತಿಗೆ ಪ್ರಬಲವಾದ ಸಂದೇಶವನ್ನು ಭಾರತ ರವಾನಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. 

ದಕ್ಷಿಣ ಗೋವಾದ ಧಾರ್‌ಬಂಡೋರಾ ಗ್ರಾಮದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಅಡಿಗಲ್ಲು ಹಾಕಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಭಯೋತ್ಪಾದಕ ದಾಳಿಗೆ ತಕ್ಕ ಉತ್ತರ ನೀಡುತ್ತಿದೆ. ಆದರೆ ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರದಲ್ಲಿದ್ದಾಗ ಪರಿಸ್ಥಿತಿ ಹೀಗಾಗಿರಲಿಲ್ಲ ಎಂದು ಅಮಿತ್ ಶಾ ಟೀಕಿಸಿದ್ದಾರೆ.

ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಗಡಿಯಾಚೆಗಿನ ಭಯೋತ್ಪಾದಕರು ಭಾರತದೊಳಗೆ ನುಸುಳಿಕೊಂಡು ಅಶಾಂತಿ ಸೃಷ್ಟಿಸುತ್ತಿದ್ದರು. ಆದರೂ ದೆಹಲಿಯಲ್ಲಿದ್ದ ಸರ್ಕಾರ ಏನೂ ಮಾಡುತ್ತಿರಲಿಲ್ಲ. ಆದರೆ ಈಗಿನ ಸರ್ಕಾರ ಉಗ್ರರಿಗೆ ಅರ್ಥವಾಗುವ ಭಾಷೆಯಲ್ಲಿಯೇ ಉತ್ತರಿಸುತ್ತದೆ' ಎಂದು ಹೇಳಿದ್ದಾರೆ.

2016ರ ಸರ್ಜಿಕಲ್ ಸ್ಟ್ರೈಕ್ ಅನ್ನು ಉಲ್ಲೇಖಿಸಿದ ಅಮಿತ್ ಶಾ, ಭಾರತವು ಮಿಲಿಟರಿ ಕ್ರಮದ ಮೂಲಕ ತನ್ನ ಗಡಿಯಲ್ಲಿ ಯಾರೂ ಹಸ್ತಕ್ಷೇಪ ಮಾಡುವಂತಿಲ್ಲ ಎಂಬ ಬಲವಾದ ಸಂದೇಶವನ್ನು ಇಡೀ ವಿಶ್ವಕ್ಕೆ ರವಾನಿಸಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT