ಅಮಿತ್ ಶಾ 
ದೇಶ

ಭಾರತದ ಸರ್ಜಿಕಲ್ ಸ್ಟ್ರೈಕ್ ನಿಂದ ವಿಶ್ವ ಭಯೋತ್ಪಾದಕತೆಗೆ ಪ್ರಬಲ ಸಂದೇಶ: ಅಮಿತ್ ಶಾ

ಐದು ವರ್ಷಗಳ ಹಿಂದೆ ಪಾಕಿಸ್ತಾನ ವಿರುದ್ಧ ಭಾರತ ಕೈಗೊಂಡ ಸರ್ಜಿಕಲ್ ಸ್ಟ್ರೈಕ್ ಮೂಲಕ ತನ್ನ ಗಡಿಯಲ್ಲಿ ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಜಗತ್ತಿಗೆ ಪ್ರಬಲವಾದ ಸಂದೇಶವನ್ನು ಭಾರತ ರವಾನಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. 

ಪಣಜಿ: ಐದು ವರ್ಷಗಳ ಹಿಂದೆ ಪಾಕಿಸ್ತಾನ ವಿರುದ್ಧ ಭಾರತ ಕೈಗೊಂಡ ಸರ್ಜಿಕಲ್ ಸ್ಟ್ರೈಕ್ ಮೂಲಕ ತನ್ನ ಗಡಿಯಲ್ಲಿ ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಜಗತ್ತಿಗೆ ಪ್ರಬಲವಾದ ಸಂದೇಶವನ್ನು ಭಾರತ ರವಾನಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. 

ದಕ್ಷಿಣ ಗೋವಾದ ಧಾರ್‌ಬಂಡೋರಾ ಗ್ರಾಮದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಅಡಿಗಲ್ಲು ಹಾಕಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಭಯೋತ್ಪಾದಕ ದಾಳಿಗೆ ತಕ್ಕ ಉತ್ತರ ನೀಡುತ್ತಿದೆ. ಆದರೆ ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರದಲ್ಲಿದ್ದಾಗ ಪರಿಸ್ಥಿತಿ ಹೀಗಾಗಿರಲಿಲ್ಲ ಎಂದು ಅಮಿತ್ ಶಾ ಟೀಕಿಸಿದ್ದಾರೆ.

ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಗಡಿಯಾಚೆಗಿನ ಭಯೋತ್ಪಾದಕರು ಭಾರತದೊಳಗೆ ನುಸುಳಿಕೊಂಡು ಅಶಾಂತಿ ಸೃಷ್ಟಿಸುತ್ತಿದ್ದರು. ಆದರೂ ದೆಹಲಿಯಲ್ಲಿದ್ದ ಸರ್ಕಾರ ಏನೂ ಮಾಡುತ್ತಿರಲಿಲ್ಲ. ಆದರೆ ಈಗಿನ ಸರ್ಕಾರ ಉಗ್ರರಿಗೆ ಅರ್ಥವಾಗುವ ಭಾಷೆಯಲ್ಲಿಯೇ ಉತ್ತರಿಸುತ್ತದೆ' ಎಂದು ಹೇಳಿದ್ದಾರೆ.

2016ರ ಸರ್ಜಿಕಲ್ ಸ್ಟ್ರೈಕ್ ಅನ್ನು ಉಲ್ಲೇಖಿಸಿದ ಅಮಿತ್ ಶಾ, ಭಾರತವು ಮಿಲಿಟರಿ ಕ್ರಮದ ಮೂಲಕ ತನ್ನ ಗಡಿಯಲ್ಲಿ ಯಾರೂ ಹಸ್ತಕ್ಷೇಪ ಮಾಡುವಂತಿಲ್ಲ ಎಂಬ ಬಲವಾದ ಸಂದೇಶವನ್ನು ಇಡೀ ವಿಶ್ವಕ್ಕೆ ರವಾನಿಸಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT