ಮೋಹನ್ ಭಾಗವತ್ 
ದೇಶ

ಜನಸಂಖ್ಯಾ ಅಸಮತೋಲನ ಹೇಳಿಕೆ: ಆರೆಸ್ಸೆಸ್ ಮುಖಂಡ ಮೋಹನ್ ಭಾಗವತ್ ರನ್ನು ತರಾಟೆಗೆ ತೆಗೆದುಕೊಂಡ ಬಿಎಸ್ಪಿ

ದೇಶದ ನಿಜವಾದ ಸಮಸ್ಯೆಗಳಾದ ಹಸಿವು, ನಿರುದ್ಯೋಗ ಬಡತನ ಮುಂತಾದವುಗಳತ್ತ ಗಮನ ಹರಿಸಲು ಭಾಗವತ್ ಅವರಿಗೆ ಆಸಕ್ತಿಯಿಲ್ಲ

ನವದೆಹಲಿ: ಬಹುಜನ ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರ ಸುಧೀಂದ್ರ ಬದೋರಿಯ ಅವರು ಆರೆಸ್ಸೆಸ್ ಮುಖಂಡ ಮೋಹನ್ ಭಾಗವತ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ದೇಶದ ನಿಜವಾದ ಸಮಸ್ಯೆಗಳಾದ ಹಸಿವು, ನಿರುದ್ಯೋಗ ಬಡತನ ಮುಂತಾದವುಗಳತ್ತ ಗಮನ ಹರಿಸಲು ಭಾಗವತ್ ಅವರಿಗೆ ಆಸಕ್ತಿಯಿಲ್ಲ ಹೀಗಾಗಿಯೇ ಅವುಗಳಿಂದ ಜನರ ಗಮನವನ್ನು ದೂರ ಮಾಡಲು ಜನಸಂಖ್ಯಾ ಅಸಮತೋಲನ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಭಾಗವತ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.  

ವಿಜಯದಶಮಿ ಪ್ರಯುಕ್ತ ಭಾಷಣ ನೀಡುತ್ತಿದ್ದ ವೇಳೆ ಮೋಹನ್ ಭಾಗವತ್ ಅವರು ದೇಶದಲ್ಲಿ ಜನಸಂಖ್ಯಾ ಅಸಮತೋಲನ ಇರುವುದಾಗಿ ಆರೋಪಿದ್ದರು. ಅದನ್ನು ತೊಡೆದು ಹಾಕಲು ಜನಸಂಖ್ಯಾ ನೀತಿಯನ್ನು ಮರುಪರಿಶೀಲನೆ ನಡೆಸಬೇಕಾಗಿದೆ ಎಂದು ಭಾಗವತ್ ಅಭಿಪ್ರಾಯಪಟ್ಟಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT