ನವದೆಹಲಿ: ಬಹುಜನ ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರ ಸುಧೀಂದ್ರ ಬದೋರಿಯ ಅವರು ಆರೆಸ್ಸೆಸ್ ಮುಖಂಡ ಮೋಹನ್ ಭಾಗವತ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ: ಪಾಕಿಸ್ತಾನಕ್ಕೆ ವಲಸೆ ಹೋದ ಮುಸಲ್ಮಾನರಿಗೆ ಅಲ್ಲಿ ಅಷ್ಟೊಂದು ಗೌರವ ಸಿಗುತ್ತಿಲ್ಲ, ಅವರು ಭಾರತಕ್ಕೆ ಸೇರಿದವರು: ಮೋಹನ್ ಭಾಗವತ್
ದೇಶದ ನಿಜವಾದ ಸಮಸ್ಯೆಗಳಾದ ಹಸಿವು, ನಿರುದ್ಯೋಗ ಬಡತನ ಮುಂತಾದವುಗಳತ್ತ ಗಮನ ಹರಿಸಲು ಭಾಗವತ್ ಅವರಿಗೆ ಆಸಕ್ತಿಯಿಲ್ಲ ಹೀಗಾಗಿಯೇ ಅವುಗಳಿಂದ ಜನರ ಗಮನವನ್ನು ದೂರ ಮಾಡಲು ಜನಸಂಖ್ಯಾ ಅಸಮತೋಲನ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಭಾಗವತ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ವಿಜಯದಶಮಿ ಪ್ರಯುಕ್ತ ಭಾಷಣ ನೀಡುತ್ತಿದ್ದ ವೇಳೆ ಮೋಹನ್ ಭಾಗವತ್ ಅವರು ದೇಶದಲ್ಲಿ ಜನಸಂಖ್ಯಾ ಅಸಮತೋಲನ ಇರುವುದಾಗಿ ಆರೋಪಿದ್ದರು. ಅದನ್ನು ತೊಡೆದು ಹಾಕಲು ಜನಸಂಖ್ಯಾ ನೀತಿಯನ್ನು ಮರುಪರಿಶೀಲನೆ ನಡೆಸಬೇಕಾಗಿದೆ ಎಂದು ಭಾಗವತ್ ಅಭಿಪ್ರಾಯಪಟ್ಟಿದ್ದರು.
ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರು ಉದ್ದೇಶಿತ ಹತ್ಯೆಗಳಿಗೆ ಮುಂದಾಗುತ್ತಿದ್ದಾರೆ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್