ಜಿತೇಂದ್ರ ಅವ್ಹದ್ 
ದೇಶ

ಅಪಹರಣ, ಹಲ್ಲೆ ಪ್ರಕರಣ: ಮಹಾರಾಷ್ಟ್ರ ಸಚಿವರಿಗೆ ಜಾಮೀನು

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಅಪಹರಿಸಿ, ತನ್ನ ಬಂಗಲೆಯಲ್ಲಿಟ್ಟು ಹಲ್ಲೆ ಮಾಡಿದ ಆರೋಪದಲ್ಲಿ ಮಹಾರಾಷ್ಟ್ರ ಸಚಿವರೊಬ್ಬರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಸಚಿವರಿಗೆ ಜಾಮೀನು ದೊರೆತಿದೆ.

ಥಾಣೆ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಅಪಹರಿಸಿ, ತನ್ನ ಬಂಗಲೆಯಲ್ಲಿಟ್ಟು ಹಲ್ಲೆ ಮಾಡಿದ ಆರೋಪದಲ್ಲಿ ಮಹಾರಾಷ್ಟ್ರ ಸಚಿವರೊಬ್ಬರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಸಚಿವರಿಗೆ ಜಾಮೀನು ದೊರೆತಿದೆ.

ಮಹಾರಾಷ್ಟ್ರ ವಸತಿ ಸಚಿವ, ಎನ್​ಸಿಪಿ ನಾಯಕ ಜಿತೇಂದ್ರ ಅವ್ಹದ್ ಅವರನ್ನು ವರ್ತಕ್ ನಗರ್ ಪೊಲೀಸರು ಗುರುವಾರ ಬಂಧಿಸಿದ್ದರು. ನಂತರ ಅವರ ಹೇಳಿಕೆಯನ್ನು ದಾಖಲಿಸಿ ಮ್ಯಾಜಿಸ್ಟ್ರೇಟ್​ ಮುಂದೆ ಹಾಜರುಪಡಿಸಲಾಗಿತ್ತು. ಆ ನಂತರದಲ್ಲಿ 10 ಸಾವಿರ ರೂಪಾಯಿ ಬಾಂಡ್ ಮತ್ತು ಓರ್ವ ವ್ಯಕ್ತಿಯ ಶ್ಯೂರಿಟಿಯೊಂದಿಗೆ ಜಾಮೀನು ಪಡೆದಿದ್ದಾರೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಆನಂದ್ ಕರ್ಮುಸೆ ಎಂಬವರು ಸಚಿವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ತನ್ನನ್ನು ಅಪಹರಿಸಿ ಅವ್ಹದ್ ಅವರ ಬಂಗಲೆಯಲ್ಲಿ ಅವರ ಮುಂದೆಯೇ ಥಳಿಸಲಾಗಿದೆ ಎಂದು ಆರೋಪಿಸಿದ್ದರು. ನಂತರ ಬಾಂಬೆ ಹೈಕೋರ್ಟ್ ಈ ಪ್ರಕರಣದ ಕುರಿತು ಸರಿಯಾದ ತನಿಖೆ ನಡೆಸುವಂತೆ ಥಾಣೆ ಪೊಲೀಸರಿಗೆ ನಿರ್ದೇಶನ ನೀಡಿತ್ತು.

ಏಪ್ರಿಲ್ 5, 2020ರ ಸಂಜೆ ಕೆಲವು ಪೊಲೀಸ್ ಸಿಬ್ಬಂದಿ ನನ್ನ ಬಳಿ ಬಂದು ಠಾಣೆಗೆ ಬರಬೇಕೆಂದು ಸೂಚನೆ ನೀಡಿದ್ದರು. ಅವರ ಜೊತೆ ತೆರಳಿದಾಗ ಪೊಲೀಸ್ ಠಾಣೆಗೆ ಕರೆದೊಯ್ಯದೇ ಜಿತೇಂದ್ರ ಅವ್ಹದ್ ಬಂಗಲೆಗೆ ಕರೆದೊಯ್ದರು. ಈ ವೇಳೆ 10ರಿಂದ 15 ಮಂದಿ ಅವ್ಹದ್ ಅವರ ಎದುರಲ್ಲೇ ನನ್ನನ್ನು ಥಳಿಸಿದ್ದರು. ಅವ್ಹದ್ ಅವರ ತಿರುಚಲಾದ ಭಾವಚಿತ್ರವನ್ನು ಫೇಸ್​ಬುಕ್​ನಲ್ಲಿ ಶೇರ್ ಮಾಡಿದ ಆರೋಪದಲ್ಲಿ ನನ್ನನ್ನು ಥಳಿಸಲಾಗಿದೆ ಎಂದು ಸಿವಿಲ್ ಇಂಜಿನಿಯರ್ ಆಗಿರುವ ಕರ್ಮುಸೆ ದೂರು ನೀಡಿದ್ದರು.

ಈ ಆರೋಪಗಳನ್ನು ಜಿತೇಂದ್ರ ಅವ್ಹದ್ ನಿರಾಕರಿಸಿದ್ದರು. ಆದರೆ ವರ್ತಕ್ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಯಿತು. ಐಪಿಸಿ ಸೆಕ್ಷನ್ 324, 365, 506ರ ಅಡಿಯಲ್ಲಿ ದೂರು ದಾಖಲು ಮಾಡಿಕೊಳ್ಳಲಾಗಿತ್ತು.

ಈಗ ಜಿತೇಂದ್ರ ಅವ್ಹದ್ ಅವರು ಇದೇ ದೂರಿನ ಅನ್ವಯ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಜಾಮೀನು ಪಡೆದಿದ್ದಾರೆ. ಬಿಜೆಪಿ ನಾಯಕ ಮತ್ತು ಮಾಜಿ ಸಂಸದ ಕಿರಿಟ್ ಸೊಮೈಯಾ ಅವರು ಅವ್ಹದ್ ಅವರನ್ನು ಕ್ಯಾಬಿನೆಟ್​ನಿಂದ ಕೈಬಿಡಲು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

ಗಂಗೂಲಿ ಹಿಂದಿಕ್ಕಿದ ವಿರಾಟ್ ಕೊಹ್ಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಈ ಮೈಲಿಗಲ್ಲು ಸಾಧಿಸಿದ Kohli

SCROLL FOR NEXT