ನರೇಂದ್ರ ಮೋದಿ 
ದೇಶ

ಬೆನ್ನಿಗೆ ರಾಜಕೀಯ ಕುಟುಂಬವಿಲ್ಲ, ಜಾತಿಯ ಬೆಂಬಲದ ಹಂಗಿಲ್ಲ, ಜನಾಶೀರ್ವಾದದಿಂದಲೇ ನನಗೆ ಜನಸೇವೆಯ ಅವಕಾಶ: ಮೋದಿ

ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭ ಭಾಯಿ ಪಟೇಲ್ ತೋರಿಸಿದ ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಮೋದಿ ಸೂಚಿಸಿದರು. ಜಾತಿ, ಧರ್ಮಗಳು, ನಂಬಿಕೆಗಳು ನಮಗೆ ಅಡ್ಡಿಯಾಗಬಾರದು ಎಂದು ಸರ್ದಾರ್ ಪಟೇಲ್ ಹೇಳುತ್ತಿದ್ದರು ಎಂದು ಪ್ರಧಾನಿ ಮೋದಿ ನೆನಪಿಸಿದರು.

ಸೂರತ್: ಯಾವುದೇ ರಾಜಕೀಯ ಹಿನ್ನೆಲೆ ಅಥವಾ ವಂಶ ಪರಂಪರೆಯ ಬೆಂಬಲವಿಲ್ಲದೆ ದೇಶದ ಸೇವೆ ಮಾಡಲು ಜನರು ತಮಗೆ ಅವಕಾಶ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಒಂದು ಸಾಮಾನ್ಯ ಬಡ ಕುಟುಂಬದಿಂದ ಬಂದ ನನಗೆ ಗುಜರಾತ್‌ ಮುಖ್ಯಮಂತ್ರಿ ಸ್ಥಾನದಿಂದ ಇಂದು ಪ್ರಧಾನಿಯಾಗಿ ದೇಶದ ಸೇವೆ ಸಲ್ಲಿಸುವ ಭಾಗ್ಯ ಕಲ್ಪಿಸಿದ್ದಾರೆ ಎಂದರು.


ಸೂರತ್ ನಲ್ಲಿ ಬಾಲಕರ ವಸತಿ ನಿಲಯ ಶಿಲಾನ್ಯಾಸ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮೋದಿ, ಕೇವಲ ಜನರ ಆಶೀರ್ವಾದದಿಂದ ಕಳೆದ 20 ವರ್ಷಗಳಿಂದ ಸರ್ಕಾರದ ನಾಯಕನಾಗಿ ಮುಂದುವರಿದಿದ್ದೇನೆ ಎಂದು ಹೇಳಿದರು.

'ನಾನು ಸಾಮಾನ್ಯ ಕುಟುಂಬದ ಹಿನ್ನೆಲೆಯಿಂದ ಬಂದವನು. ನನಗೆ ಯಾವುದೇ ರಾಜಕೀಯ, ವಂಶ ಪರಂಪರೆ ಅಥವಾ ಜಾತಿಯ ಬೆಂಬಲವಿಲ್ಲ. ಆದರೆ ನಿಮ್ಮೆಲ್ಲರ ಆಶೀರ್ವಾದದಿಂದ 2001 ರಿಂದ ಗುಜರಾತ್ ಗೆ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದು ಮೋದಿ ಹೇಳಿದರು. ಇದೇ ಆಶೀರ್ವಾದ ಶಕ್ತಿಯಿಂದ 20 ವರ್ಷಗಳ ಕಾಲ ದೇಶದ ಸೇವೆಯಲ್ಲಿ ಮುಂದುವರಿದಿದ್ದೇನೆ ಎಂದು ಅವರು ಹೇಳಿದರು.

ಗುಜರಾತ್ ಮುಖ್ಯಮಂತ್ರಿ ಸ್ಥಾನದಿಂದ, ಪ್ರಸ್ತುತ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಲು ತಮಗೆ ಅವಕಾಶ ನೀಡಿದ್ದಾರೆ ಎಂದು ಅವರು ಹೇಳಿದರು. ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭ ಭಾಯಿ ಪಟೇಲ್ ತೋರಿಸಿದ ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಮೋದಿ ಸೂಚಿಸಿದರು. ಜಾತಿ, ಧರ್ಮಗಳು, ನಂಬಿಕೆಗಳು ನಮಗೆ ಅಡ್ಡಿಯಾಗಬಾರದು ಎಂದು ಸರ್ದಾರ್ ಪಟೇಲ್ ಹೇಳುತ್ತಿದ್ದರು ಎಂದು ಪ್ರಧಾನಿ ಮೋದಿ ನೆನಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT