ನರೇಂದ್ರ ಮೋದಿ 
ದೇಶ

ಬೆನ್ನಿಗೆ ರಾಜಕೀಯ ಕುಟುಂಬವಿಲ್ಲ, ಜಾತಿಯ ಬೆಂಬಲದ ಹಂಗಿಲ್ಲ, ಜನಾಶೀರ್ವಾದದಿಂದಲೇ ನನಗೆ ಜನಸೇವೆಯ ಅವಕಾಶ: ಮೋದಿ

ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭ ಭಾಯಿ ಪಟೇಲ್ ತೋರಿಸಿದ ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಮೋದಿ ಸೂಚಿಸಿದರು. ಜಾತಿ, ಧರ್ಮಗಳು, ನಂಬಿಕೆಗಳು ನಮಗೆ ಅಡ್ಡಿಯಾಗಬಾರದು ಎಂದು ಸರ್ದಾರ್ ಪಟೇಲ್ ಹೇಳುತ್ತಿದ್ದರು ಎಂದು ಪ್ರಧಾನಿ ಮೋದಿ ನೆನಪಿಸಿದರು.

ಸೂರತ್: ಯಾವುದೇ ರಾಜಕೀಯ ಹಿನ್ನೆಲೆ ಅಥವಾ ವಂಶ ಪರಂಪರೆಯ ಬೆಂಬಲವಿಲ್ಲದೆ ದೇಶದ ಸೇವೆ ಮಾಡಲು ಜನರು ತಮಗೆ ಅವಕಾಶ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಒಂದು ಸಾಮಾನ್ಯ ಬಡ ಕುಟುಂಬದಿಂದ ಬಂದ ನನಗೆ ಗುಜರಾತ್‌ ಮುಖ್ಯಮಂತ್ರಿ ಸ್ಥಾನದಿಂದ ಇಂದು ಪ್ರಧಾನಿಯಾಗಿ ದೇಶದ ಸೇವೆ ಸಲ್ಲಿಸುವ ಭಾಗ್ಯ ಕಲ್ಪಿಸಿದ್ದಾರೆ ಎಂದರು.


ಸೂರತ್ ನಲ್ಲಿ ಬಾಲಕರ ವಸತಿ ನಿಲಯ ಶಿಲಾನ್ಯಾಸ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮೋದಿ, ಕೇವಲ ಜನರ ಆಶೀರ್ವಾದದಿಂದ ಕಳೆದ 20 ವರ್ಷಗಳಿಂದ ಸರ್ಕಾರದ ನಾಯಕನಾಗಿ ಮುಂದುವರಿದಿದ್ದೇನೆ ಎಂದು ಹೇಳಿದರು.

'ನಾನು ಸಾಮಾನ್ಯ ಕುಟುಂಬದ ಹಿನ್ನೆಲೆಯಿಂದ ಬಂದವನು. ನನಗೆ ಯಾವುದೇ ರಾಜಕೀಯ, ವಂಶ ಪರಂಪರೆ ಅಥವಾ ಜಾತಿಯ ಬೆಂಬಲವಿಲ್ಲ. ಆದರೆ ನಿಮ್ಮೆಲ್ಲರ ಆಶೀರ್ವಾದದಿಂದ 2001 ರಿಂದ ಗುಜರಾತ್ ಗೆ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದು ಮೋದಿ ಹೇಳಿದರು. ಇದೇ ಆಶೀರ್ವಾದ ಶಕ್ತಿಯಿಂದ 20 ವರ್ಷಗಳ ಕಾಲ ದೇಶದ ಸೇವೆಯಲ್ಲಿ ಮುಂದುವರಿದಿದ್ದೇನೆ ಎಂದು ಅವರು ಹೇಳಿದರು.

ಗುಜರಾತ್ ಮುಖ್ಯಮಂತ್ರಿ ಸ್ಥಾನದಿಂದ, ಪ್ರಸ್ತುತ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಲು ತಮಗೆ ಅವಕಾಶ ನೀಡಿದ್ದಾರೆ ಎಂದು ಅವರು ಹೇಳಿದರು. ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭ ಭಾಯಿ ಪಟೇಲ್ ತೋರಿಸಿದ ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಮೋದಿ ಸೂಚಿಸಿದರು. ಜಾತಿ, ಧರ್ಮಗಳು, ನಂಬಿಕೆಗಳು ನಮಗೆ ಅಡ್ಡಿಯಾಗಬಾರದು ಎಂದು ಸರ್ದಾರ್ ಪಟೇಲ್ ಹೇಳುತ್ತಿದ್ದರು ಎಂದು ಪ್ರಧಾನಿ ಮೋದಿ ನೆನಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT