ಕೇರಳದಲ್ಲಿ ದಾರಾಕಾರ ಮಳೆ 
ದೇಶ

ಕೊಟ್ಟಾಯಂ ನಲ್ಲಿ 10 ಮಂದಿ ನಾಪತ್ತೆ: ಐಎಎಫ್ ನೆರವು ಕೋರಿಕೆ 

ಕೇರಳದ ಕೇಂದ್ರ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಕೊಟ್ಟಾಯಂ ನಲ್ಲಿ 10 ಮಂದಿ ನಾಪತ್ತೆಯಾಗಿದ್ದಾರೆ. 

ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಕಂಡಿರುವ ಪರಿಣಾಮ 10 ಮಂದಿ ನಾಪತ್ತೆಯಾಗಿದ್ದಾರೆ. ಕೊಟ್ಟಾಯಂ-ಇಡುಕ್ಕಿ ಜಿಲ್ಲೆಗಳ ಗಡಿ ಭಾಗಗಳಲ್ಲಿ ಭೂಕುಸಿತ ಕಂಡಿದ್ದು ಆತಂಕಕಾರಿ ಪರಸ್ಥಿತಿಯ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚಾರಣೆಗೆ ರಾಜ್ಯ ಸರ್ಕಾರ ಸೇನೆ ಹಾಗೂ ವಾಯುಪಡೆ ನೆರವು ಕೋರಿದೆ. ಸಿಎಂ ಕಚೇರಿ ಈ ಬಗ್ಗೆ ಮಾಹಿತಿ ನೀಡಿದ್ದು, ಕೊಟ್ಟಾಯಂ-ಇಡುಕ್ಕಿ ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗಿದ್ದು ಕೆಲವು ಕುಟುಂಬಗಳು ಪ್ರತ್ಯೇಕಗೊಂಡಿವೆ.

ಕೂಟ್ಟಿಕಲ್ ಮತ್ತು ಪೆರುವಂತನಂ ಗಳಲ್ಲೂ ಭೂ ಕುಸಿತ ಉಂಟಾಗಿದ್ದು ಈ ಘಟನೆಗಳಲ್ಲಿ 10 ಮಂದಿ ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಸಂಬಂಧ ಭಾರತೀಯ ವಾಯುಪಡೆ ಹಾಗೂ ಸೇನೆ ಪ್ರತಿಕ್ರಿಯೆ ನೀಡಿದ್ದು, ನೆರವು ನೀಡುವುದಾಗಿ ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಮಿ-17 ಹಾಗೂ ಸಾರಂಗ್ ಹೆಲಿಕಾಫ್ಟರ್ ಗಳನ್ನು ಈಗಾಗಲೇ ಸ್ಟ್ಯಾಂಡ್ ಬೈ ಮೋಡ್ ನಲ್ಲಿ ಇರಿಸಲಾಗಿದೆ. ದಕ್ಷಿಣ ಏರ್ ಕಮಾಂಡ್ ನ ಅಡಿಯಲ್ಲಿ ಬರುವ ಎಲ್ಲಾ ಬೇಸ್ ಗಳಲ್ಲೂ ಹೈ ಅಲರ್ಟ್ ಘೋಷಣೆ ಮಾಡಿದೆ ಎಂದು ವಕ್ತಾರರು ಹೇಳಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈಗಾಗಲೇ ಸೇನೆಯನ್ನು ನಿಯೋಜಿಸಲಾಗಿದೆ. ಒಂದು ಕಾಲಂ ನಲ್ಲಿ ಓರ್ವ ಅಧಿಕಾರಿ, 2 ಜೆಸಿಒಗಳು ಹಾಗೂ 30 ಇನ್ನಿತರ ಶ್ರೇಣಿಯ ಸೇನಾ ಅಧಿಕಾರಿಗಳು ಈಗಾಗಲೇ ಕಂಜೀರಪ್ಪಳ್ಳಿ, ಕೊಟ್ಟಾಯಂ ಜಿಲ್ಲೆ ಪಾಂಗೋಡ್ ಸೇನಾ ಕೇಂದ್ರಕ್ಕೆ ತೆರಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT