ಶರದ್ ಪವಾರ್ 
ದೇಶ

ಕೇಂದ್ರ ಸರ್ಕಾರ ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸುತ್ತಿದೆ: ಶರದ್ ಪವಾರ್

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿರುವ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು, ಯಾವುದೇ ಸಮಯದಲ್ಲೂ ನೌಕರರನ್ನು ಸೇವೆಯಿಂದ ತೆಗೆದುಹಾಕಲು...

ಪುಣೆ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿರುವ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು, ಯಾವುದೇ ಸಮಯದಲ್ಲೂ ನೌಕರರನ್ನು ಸೇವೆಯಿಂದ ತೆಗೆದುಹಾಕಲು ಕಾನೂನಿನಲ್ಲಿ ಬದಲಾವಣೆ ಮಾಡಲಾಗುತ್ತಿದೆ ಎಂದು ಭಾನುವಾರ ಹೇಳಿದ್ದಾರೆ.

ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿರುವವರು ಅಧಿಕಾರದಲ್ಲಿ ಇರಬಾರದು ಎಂದು ಶರದ್ ಪವಾರ್ ಅವರು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರ ಮಹಾರಾಷ್ಟ್ರಕ್ಕೆ ಜಿಎಸ್‌ಟಿ ಬಾಕಿ ಬಿಡುಗಡೆ ಮಾಡದೆ ಆರ್ಥಿಕ ಸಂಕಷ್ಟ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಪವಾರ್ ಆರೋಪಿಸಿದ್ದಾರೆ.

ಪುಣೆ ಸಮೀಪದ ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪವಾರ್, ಹಿಂದೂಸ್ತಾನ್ ಆ್ಯಂಟಿಬಯಾಟಿಕ್‌(HA) ಹಾಗೂ ಇತರೆ ಹಲವು ಆಟೋಮೊಬೈಲ್ ಕಂಪನಿಗಳನ್ನು ಹೇಗೆ ಸ್ಥಾಪಿಸಲಾಯಿತು ಎಂಬುದನ್ನು ತಿಳಿಸಿದರು.

"ಈಗಿನ ಕೇಂದ್ರ ಸರ್ಕಾರವು ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿದೆ. ಈಗ ಯಾರನ್ನು ಬೇಕಾದರೂ ಕೆಲಸದಿಂದ ಹೊರಹಾಕಬಹುದು. ಕೇಂದ್ರದ ಬಿಜೆಪಿ ಸರ್ಕಾರವು ಕಾನೂನಿನಲ್ಲಿ ಬದಲಾವಣೆಗಳನ್ನು ತರುತ್ತಿದೆ. ಇದರಿಂದ ಕಾರ್ಮಿಕರನ್ನು ಯಾವುದೇ ಸಮಯದಲ್ಲಿ ಸೇವೆಯಿಂದ ತೆಗೆದುಹಾಕಬಹುದು. ಈ ಕ್ರಮ ಶೇ. 100 ಕಾರ್ಮಿಕರ ಹಿತಾಸಕ್ತಿಗಾಗಿ ಅಲ್ಲ" ಎಂದರು.

"ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿರುವವರು ಅಧಿಕಾರದಲ್ಲಿರಬಾರದು... ನಾವೆಲ್ಲರೂ ಇದನ್ನು ಅವರಿಗೆ ಹೇಳಬೇಕು ಮತ್ತು ಈ ಬಲವಾದ ಸಂದೇಶವನ್ನು ನೀಡುವ ನಗರಗಳಲ್ಲಿ ಪಿಂಪ್ರಿ ಚಿಂಚ್‌ವಾಡ್ ಸಹ ಒಂದಾಗಬೇಕು" ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT