ಸಿಂಘು ಗಡಿಯಲ್ಲಿರುವ ನಿಹಾಂಗ್ ಸದಸ್ಯರೊಬ್ಬರ ಸಾಂದರ್ಭಿಕ ಚಿತ್ರ 
ದೇಶ

ಸಿಂಘು ಗಡಿಯಲ್ಲಿ ಹತ್ಯೆ: ಮೂವರು ಆರೋಪಿಗಳು ಆರು ದಿನ ಪೊಲೀಸ್ ಕಸ್ಟಡಿಗೆ , 2 ಎಸ್ ಐಟಿಗಳಿಂದ ತನಿಖೆ

ಸಿಂಘು ಗಡಿ ಬಳಿಯ ರೈತರ ಪ್ರತಿಭಟನೆ ಸ್ಥಳದಲ್ಲಿ ನಡೆದ ಕಾರ್ಮಿಕರೊಬ್ಬರ  ಬರ್ಬರ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದ್ದು, ಘಟನೆ ಬಗ್ಗೆ ತನಿಖೆಗಾಗಿ ಎರಡು ವಿಶೇಷ ತಂಡಗಳನ್ನು ಹರಿಯಾಣ ಪೊಲೀಸರು ರಚಿಸಿದ್ದಾರೆ.

ಚಂಢೀಘಡ: ಸಿಂಘು ಗಡಿ ಬಳಿಯ ರೈತರ ಪ್ರತಿಭಟನೆ ಸ್ಥಳದಲ್ಲಿ ನಡೆದ ಕಾರ್ಮಿಕರೊಬ್ಬರ  ಬರ್ಬರ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದ್ದು, ಘಟನೆ ಬಗ್ಗೆ ತನಿಖೆಗಾಗಿ ಎರಡು ವಿಶೇಷ ತಂಡಗಳನ್ನು ಹರಿಯಾಣ ಪೊಲೀಸರು ರಚಿಸಿದ್ದಾರೆ.

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಖ್ಖರ ನಿಹಾಂಗ್ ಸಮುದಾಯದ  ಪ್ರಮುಖ ಸದಸ್ಯ ನರೈನ್ ಸಿಂಗ್ ನನ್ನು ಶನಿವಾರ ಅಮೃತಸರದ ಬಳಿ ಬಂಧಿಸಲಾಗಿತ್ತು. ಮತ್ತಿಬ್ಬರು ಆರೋಪಿಗಳಾದ  ಗೋವಿಂದ್ ಪ್ರೀತ್ ಸಿಂಗ್ ಮತ್ತು ಭಗವತ್ ಸಿಂಗ್ ಸೋನಿಪಟ್ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದರು. ಅವರನ್ನು ಇಂದು ಸೊನಿಪಟ್ ನ್ಯಾಯಾಲಯವೊಂದರ ಬಳಿ ಹಾಜರುಪಡಿಸಲಾಯಿತು. ನ್ಯಾಯಾಲಯ ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿತು.

ಘಟನೆ ನಡೆದಾಗ ಆರೋಪಿಗಳು ಧರಿಸಿದ ಬಟ್ಟೆಗಳನ್ನು ವಶ ಪಡಿಸಿಕೊಂಡಿದ್ದು, ಘಟನೆ ಬಗ್ಗೆ ಆಳವಾಗಿ ತಿಳಿಯಲು ಹಾಗೂ ಅಪರಾಧದ ಮರುಸೃಷ್ಟಿಗಾಗಿ ಆರೋಪಿಗಳನ್ನು  ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ನ್ಯಾಯಾಲಯದ ಬಳಿ ಮನವಿ ಮಾಡಿದರು. 

ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ವಿಡಿಯೋಗಳು ಹಾಗೂ ಇಡೀ ಘಟನೆ ಕುರಿತಂತೆ ಎಸ್ ಐಟಿ ತಂಡಗಳು ತನಿಖೆ ನಡೆಸಲಿವೆ. ಘಟನೆ ಕುರಿತಂತೆ ಉನ್ನತ ಮಟ್ಟದ ತನಿಖೆಗೆ ಮೃತರ ಕುಟುಂಬ ಸದಸ್ಯರು ಒತ್ತಾಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT